ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ಕಾಕ್​ಪಿಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಇಥಿಯೋಪಿಯಾಗೆ ಹೊರಟಿದ್ದ ವಿಮಾನ ದೆಹಲಿಗೆ ವಾಪಸ್
ಇಥಿಯೋಪಿಯಾ ಏರ್​ಲೈನ್ಸ್​
Image Credit source: India Today

Updated on: Sep 14, 2023 | 9:34 AM

ವಿಮಾನದ ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಇಥಿಯೋಪಿಯಾದ ಆಡಿಸ್ ಅಬಾಬಾ(Addis Ababa)ಗೆ ಹೊರಟಿದ್ದ ಇಥಿಯೋಪಿಯನ್ ಏರ್​ಲೈನ್ಸ್​ ದೆಹಲಿಗೆ ಹಿಂದಿರುಗಿದೆ. ಬೋಯಿಂಗ್ 777-8 ವಿಮಾನದಿಂದ ನಿರ್ವಹಿಸಲ್ಪಡುವ ಇಟಿ 687 ವಿಮಾನವು ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲವೊಂದು ತಿಳಿಸಿದೆ.

ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕಾಕ್​ಪಿಟ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದ ಪರಿಣಾಮ, ಪ್ರಯಾಣಿಕರು ಕೆಲಕಾಲ ಭಯಗೊಂಡಿದ್ದರು. ವಿಮಾನದಲ್ಲಿ 240ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಮಾನವು ಇಥಿಯೋಪಿಯಾದ ಆಡಿಸ್ ಅಬಾಬಾ ನಗರಕ್ಕೆ ಹಾರಬೇಕಿತ್ತು. ಘಟನೆಯ ಕುರಿತು ಕಾಮೆಂಟ್‌ಗಳನ್ನು ಕೋರಿ ಏರ್‌ಲೈನ್‌ಗೆ ಕಳುಹಿಸಲಾದ ಪ್ರಶ್ನೆಗೆ ಉತ್ತರ ದೊರೆತಿಲ್ಲ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

 ದುಬೈಗೆ ಹೊರಟಿದ್ದ ಏರ್ ಇಂಡಿಯಾ  ಕೇರಳಕ್ಕೆ ವಾಪಸ್

ವಿಮಾನದಲ್ಲಿನ ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದುಬೈಗೆ ಹೊರಟಿದ್ದ ಏರ್​ ಇಂಡಿಯಾ(Air India) ವಿಮಾನ ಕೇರಳಕ್ಕೆ ವಾಪಸ್ ಆಗಿತ್ತು. ಕೆಲವೇ ದಿನಗಳ ಹಿಂದಷ್ಟೇ ನಡೆದ ಘಟನೆ ಇದು. ಟೇಕ್ ಆಫ್ ಆಗಿ ಕೆಲವೇ ಗಂಟೆಗಳಲ್ಲಿ ತಿರುವನಂತಪುರಂಗೆ ವಿಮಾನ ಮರಳಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು.

ಮಧ್ಯಾಹ್ನ 1.19ಕ್ಕೆ ಸಿಬ್ಬಂದಿ ಸೇರಿದಂತೆ 178 ಜನರೊಂದಿಗೆ ಟೇಕ್ ಆಫ್ ಆಗಿದ್ದ IX 539 ವಿಮಾನವು ಹಿಂತಿರುಗಿ 3.52 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದರು. ಸ್ಥಳೀಯ ಸ್ಟ್ಯಾಂಡ್‌ಬೈ ಘೋಷಿಸಲಾಗಿದೆ. ಇದು ಎಸಿ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us