ಉಕ್ರೇನ್ ಯುದ್ಧದ ಕುರಿತು ಪ್ರಧಾನಿ ಮೋದಿ ಜೊತೆ ಯುರೋಪಿಯನ್ ಕೌನ್ಸಿಲ್ ಮುಖ್ಯಸ್ಥೆ ಮಾತು; ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮನವಿ
ಯುರೋಪಿಯನ್ ಒಕ್ಕೂಟದ ಮುಖ್ಯಸ್ಥೆ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಜಂಟಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯೊಂದಿಗೆ ದೂರವಾಣಿ ಕರೆಯಲ್ಲಿ ಮಾತುಕತೆ ನಡೆಸಿದ್ದಾರೆ. 'ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತದೆ' ಎಂದು ಯುರೋಪಿಯನ್ ಒಕ್ಕೂಟದ ಮುಖ್ಯಸ್ಥೆ ಹೇಳಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 4: “ರಷ್ಯಾ ಉಕ್ರೇನ್ ಮೇಲಿನ ತನ್ನ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸುವಲ್ಲಿ ಮತ್ತು ಶಾಂತಿಯತ್ತ ಮಾರ್ಗವನ್ನು ಸೃಷ್ಟಿಸುವಲ್ಲಿ ಸಹಾಯ ಮಾಡಲು ಹಾಗೂ ರಷ್ಯಾದ ಮನವೊಲಿಸಲು ಭಾರತ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ (von der Leyen) ಹೇಳಿದ್ದಾರೆ. ಇಂದು ಸಂಜೆ ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
“ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಯೊಂದಿಗೆ ಭಾರತದ ನಿರಂತರ ಸಂಪರ್ಕವನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ರಷ್ಯಾ ತನ್ನ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯತ್ತ ಮಾರ್ಗವನ್ನು ರಚಿಸಲು ಸಹಾಯ ಮಾಡುವಲ್ಲಿ ಭಾರತವು ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ವಾನ್ ಡೆರ್ ಲೇಯೆನ್ ಹೇಳಿದ್ದಾರೆ. ಉಕ್ರೇನ್ ಸಂಘರ್ಷವನ್ನು ಯುರೋಪನ್ನು ಮೀರಿದ ಬೆದರಿಕೆ ಎಂದು ಕರೆದ ಅವರು, “ಈ ಯುದ್ಧವು ಜಾಗತಿಕ ಭದ್ರತಾ ಪರಿಣಾಮಗಳನ್ನು ಬೀರುತ್ತದೆ ಮತ್ತು ಆರ್ಥಿಕ ಸ್ಥಿರತೆಯನ್ನು ಹಾಳು ಮಾಡುತ್ತದೆ. ಆದ್ದರಿಂದ ಇದು ಇಡೀ ಜಗತ್ತಿಗೆ ಅಪಾಯವಾಗಿದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮಕ್ಕಳ ಮಿಠಾಯಿ ಮೇಲೂ ಕಾಂಗ್ರೆಸ್ ಶೇ. 21ರಷ್ಟು ತೆರಿಗೆ ಹಾಕಿತ್ತು; ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ವ್ಯಾಪಾರ, ತಂತ್ರಜ್ಞಾನ, ಹೂಡಿಕೆ, ನಾವೀನ್ಯತೆ, ಸುಸ್ಥಿರತೆ, ರಕ್ಷಣೆ, ಭದ್ರತೆ ಮತ್ತು ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವದಂತಹ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನು ಯುರೋಪಿಯನ್ ಒಕ್ಕೂಟದ ಅಧ್ಯಕ್ಷರು ಸ್ವಾಗತಿಸಿದ್ದಾರೆ. ಭಾರತ-ಯುರೋಪಿಯನ್ ಒಕ್ಕೂಟದ FTAಯ ಆರಂಭಿಕ ತೀರ್ಮಾನಕ್ಕೆ ಮೋದಿ ಹಾಗೂ ಲೇಯನ್ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಈ ವೇಳೆ ಅವರು ಉಕ್ರೇನ್ನಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
We had the pleasure of speaking with Prime Minister @narendramodi.
We warmly welcome India’s continued engagement with President Zelenskyy.
India has an important role to play in bringing Russia to end its war of aggression and helping create a path towards peace.
This war… pic.twitter.com/ri5Vkep6MQ
— Ursula von der Leyen (@vonderleyen) September 4, 2025
ಇದನ್ನೂ ಓದಿ: ಭಾರತದ ಸ್ವಾತಂತ್ರ್ಯದ ನಂತರದ ಅತಿದೊಡ್ಡ ನಿರ್ಧಾರ; ಜಿಎಸ್ಟಿ ಸುಧಾರಣೆಗಳ ಕುರಿತು ಪ್ರಧಾನಿ ಮೋದಿ ಭಾಷಣ
ನವದೆಹಲಿಯೊಂದಿಗಿನ ಸಂಬಂಧಗಳನ್ನು ಬಲಪಡಿಸುವ ಯುರೋಪಿಯನ್ ಒಕ್ಕೂಟದ ಬದ್ಧತೆಯನ್ನು ವಾನ್ ಡೆರ್ ಲೇಯೆನ್ ಒತ್ತಿ ಹೇಳಿದರು. 2026ರಲ್ಲಿ ನಡೆಯಲಿರುವ ಮುಂದಿನ EU-ಭಾರತ ಶೃಂಗಸಭೆಯಲ್ಲಿ ಜಂಟಿ ಕಾರ್ಯತಂತ್ರದ ಕಾರ್ಯಸೂಚಿಯನ್ನು ಒಪ್ಪಿಕೊಳ್ಳುವ ಯೋಜನೆಗಳನ್ನು ಅವರು ಘೋಷಿಸಿದರು. ಹಾಗೇ, 2025ರ ಅಂತ್ಯದ ವೇಳೆಗೆ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸುವುದಾಗಿ ಪುನರುಚ್ಚರಿಸಿದರು.
ಈ ವೇಳೆ ಮುಂದಿನ ಭಾರತ-ಇಯು ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಆ ಇಬ್ಬರೂ ನಾಯಕರನ್ನು ಭಾರತಕ್ಕೆ ಆಹ್ವಾನಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




