AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪ್ರಾಯೋಗಿಕ ಚಾಲನೆ ವೇಳೆ ಅಪಘಾತಗೊಂಡ ಇವಿ ವಾಹನ, ನಾಲ್ವರು ಸಾವು

ಪ್ರಾಯೋಗಿಕ ಚಾಲನೆ ವೇಳೆ ಎಲೆಕ್ಟ್ರಿಕ್ ವಾಹನ ಅಪಘಾತವಾಗಿದೆ. ಈ ಘಟನೆಯಲ್ಲಿ ಇಬ್ಬರು ಅರಣ್ಯ ರಕ್ಷಕರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಈ ಕಾರಿನಲ್ಲಿದ್ದ ಮಹಿಳಾ ವಾರ್ಡನ್ ನಾಪತ್ತೆಯಾಗಿದ್ದಾರೆ. ಈ ವಾಹನವನ್ನು ವೇಗವಾಗಿ ಓಡಿಸುವಂತೆ ಒತ್ತಾಯ ಮಾಡಿದ ಕಾರಣ. ವಾಹನಕ್ಕೆ ಓವರ್​​​ಲೋಡ್​​ ಆಗಿ ಅಪಘಾತವಾಗಿದೆ ಎಂದು ಹೇಳಲಾಗಿದೆ. ಈ ಅಪಘಾತದಿಂದ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Video Viral: ಪ್ರಾಯೋಗಿಕ ಚಾಲನೆ ವೇಳೆ ಅಪಘಾತಗೊಂಡ ಇವಿ ವಾಹನ, ನಾಲ್ವರು ಸಾವು
ಅಕ್ಷಯ್​ ಪಲ್ಲಮಜಲು​​
|

Updated on: Jan 11, 2024 | 10:58 AM

Share

ಉತ್ತರಾಖಂಡದ ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರಾಯೋಗಿಕ ಚಾಲನೆ ವೇಳೆ ಎಲೆಕ್ಟ್ರಿಕ್ ವಾಹನ ಅಪಘಾತವಾಗಿದೆ. ಈ ಘಟನೆಯಲ್ಲಿ ಇಬ್ಬರು ಅರಣ್ಯ ರಕ್ಷಕರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಈ ಕಾರಿನಲ್ಲಿದ್ದ ಮಹಿಳಾ ವಾರ್ಡನ್ ನಾಪತ್ತೆಯಾಗಿದ್ದಾರೆ. ಈ ವಾಹನವನ್ನು ವೇಗವಾಗಿ ಓಡಿಸುವಂತೆ ಒತ್ತಾಯ ಮಾಡಿದ ಕಾರಣ. ವಾಹನಕ್ಕೆ ಓವರ್​​​ಲೋಡ್​​ ಆಗಿ ಅಪಘಾತವಾಗಿದೆ ಎಂದು ಹೇಳಲಾಗಿದೆ. ಈ ಅಪಘಾತದಿಂದ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಜನವರಿ 8ರಂದು ನಡೆದಿದೆ. ಅಪಘಾತದ ದೃಶ್ಯ ಕಾರಿನ ಡ್ಯಾಶ್‌ಬೋರ್ಡ್​​​ನಲ್ಲಿ ಇಡಲಾಗಿದ್ದ ಕ್ಯಾಮೆರಾದಲ್ಲಿ ಸೇರಿಯಾಗಿದೆ. ಈ ವಿಡಿಯೋವನ್ನು ಪಿಟಿಐ ಹಂಚಿಕೊಂಡಿದೆ.

ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ಸುರಕ್ಷತಾ ಅಪಾಯವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳುವುದನ್ನು ಕೇಳಬಹುದು ಮತ್ತು ಹಿಂಭಾಗದಲ್ಲಿರುವ ಜನರು ಕೆಳಗಿಳಿಯುವ ಎಂದು ಹೇಳುತ್ತಾರೆ. ಆದರೆ ವಾಹನ ಹಠಾತ್ ಜರ್ಕ್ ಹೊಡೆದು ವೇಗವನ್ನು ಹೆಚ್ಚಿಸಿದೆ. ಈ ಸಮಯದಲ್ಲಿ ವಾಹನ ಅಪಘಾತಗೊಂಡಿದೆ.

ಬೆಂಗಳೂರು ಮೂಲದ ಕಂಪನಿಯು ಪತ್ರಿಕಾ ಹೇಳಿಕೆ ಪ್ರಕಾರ ವಾಹನ ಪ್ರಯೋಗಿಕ ಚಾಲನೆ ವೇಳೆ ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಅರಣ್ಯ ಅಧಿಕಾರಿಗಳು ತನ್ನನ್ನು ಓವರ್‌ಲೋಡ್ ಮಾಡಲು ಒತ್ತಾಯಿಸಿದರು ಮತ್ತು ವೇಗವನ್ನು ಹೆಚ್ಚಿಸುವಂತೆ ಹೇಳಿದ್ದಾರೆ ಎಂದು ವಾಹನ ಚಲಾಯಿಸುತ್ತಿದ್ದ ಬಿಇ ಮೆಕ್ಯಾನಿಕಲ್ ಇಂಜಿನಿಯರ್ ಅಶ್ಬಿನ್ ಬಿಜು ಅವರು ಹೇಳಿದ್ದಾರೆ. ಈ ಸಮಯದಲ್ಲಿ ಯಾವುದೇ ಮದ್ಯಪಾನ ಸೇವನೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ನೇಹಿತನನ್ನು ಕ್ರಿಮಿನಲ್ ಪ್ರಕರಣದಲ್ಲಿ ಸಿಲುಕಿಸಲು ತನ್ನ ತೋಳಿಗೆ ತಾನೇ ಗುಂಡು ಹಾರಿಸಿಕೊಂಡ ವ್ಯಕ್ತಿ

ಇದು ಎಲೆಕ್ಟ್ರಿಕ್ ವಾಹನವಾಗಿರುವುದರಿಂದ ವೇಗವರ್ಧನೆಯು ಸಾಕಷ್ಟು ಹೆಚ್ಚಾಗಿರುತ್ತದೆ ಮತ್ತು ಇದು ಒಂದು ಸೆಕೆಂಡಿನ ಭಾಗದಲ್ಲಿ 70 ಕಿಮೀ ವೇಗವನ್ನು ತಲುಪಿತು ಹೇಳಿದರು. ಈ ವಾಹನ ಹೋಗಿರುವ ಪ್ರದೇಶದಲ್ಲಿ ಕೆಸರು ಮತ್ತು ಬಂಡೆಗಳಿದ್ದು, ಅಸ್ಥಿರವಾದ ರಸ್ತೆಗಳಿದ್ದ ಕಾರಣ ಟೈರ್ ಒಡೆದು ವಾಹನವು ಹಿಂಭಾಗದಿಂದ ನಿಯಂತ್ರಣವನ್ನು ಕಳೆದುಕೊಂಡಿದೆ. ರಸ್ತೆ ಮತ್ತು ನದಿಯ ನಡುವಿನ ಡಿವೈಡರ್​​​​​ಗೆ ಡಿಕ್ಕಿ ಹೊಡೆದು, ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್