AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು. ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ […]

ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ
ಸಾಧು ಶ್ರೀನಾಥ್​
|

Updated on: Apr 26, 2020 | 12:03 PM

Share

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು.

ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಬೆಳೆಯನ್ನು ಬಡವರಿಗೆ ದಾನ ಮಾಡ್ತಿದ್ದಾರೆ. ದೇಶದ 130 ಕೋಟಿ ಜನರಿಗೆ ನಾನು ಶಿರಭಾಗಿ ನಮಿಸುತ್ತೇನೆ ಎಂದರು.

ಕೊರೊನಾ ವಾರಿಯರ್ಸ್​ಗಾಗಿ ವೆಬ್‌ಸೈಟ್‌ ಲಾಂಚ್​: ಸರ್ಕಾರ ಕೊರೊನಾ ವಾರಿಯರ್ಸ್​ಗಾಗಿ covidwarriors.gov.in ವೆಬ್‌ಸೈಟ್‌ ಮಾಡಲಾಗಿದೆ. ಇದರ ಜೊತೆ ನೀವೂ ಜೊತೆಗೂಡಬಹುದು. ಕೊವಿಡ್ ವಾರಿಯರ್ಸ್ ರೀತಿ ನೀವೂ ಹೋರಾಡಬಹುದು. ದೇಶದ ಜನರು ತೋರಿರುವ ಸಂಕಲ್ಪ ಹೊಸ ದಿಶೆಯನ್ನ ತೋರಿದೆ. ಈ ಸಂಕಷ್ಟದಲ್ಲಿ ದೇಶದ ಜನರ ಸಂಕಲ್ಪಶಕ್ತಿ ತಿಳಿಯುತ್ತಿದೆ.

ಎಲ್ಲೆಡೆ ಪೌರಕಾರ್ಮಿಕರನ್ನು ಹೂವಿನ ಮಳೆಗೈದು ಸ್ವಾಗತಿಸುತ್ತಿದ್ದಾರೆ. ಆದ್ರೆ ಕೆಲವೆಡೆ ಕೊವಿಡ್ ವಾರಿಯರ್ಸ್, ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನೀಯ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೋದಿ ಎಚ್ಚರಿಕೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಜನ ನಿಲ್ಲಿಸಬೇಕು. ಮಾಸ್ಕ್ ಸಭ್ಯ ಸಮಾಜದ ಪ್ರತೀಕವಾಗಿ ಬದಲಾಗಲಿದೆ. ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯ. ಕೊರೊನಾ ಸೋಂಕಿನಿಂದ ಹಬ್ಬ ಆಚರಣೆಯಲ್ಲಿ ಬದಲಾವಣೆ ತರಲಿದೆ. ಜನರು ಮನೆಯಲ್ಲಿದ್ದು ಕುಟುಂಬಸ್ಥರ ಜತೆ ಹಬ್ಬ ಆಚರಿಸಿ ಎಂದು ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ ನೀಡಿದರು.

https://www.facebook.com/Tv9Kannada/videos/2564932267089158/

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!