AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು. ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ […]

ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ
ಸಾಧು ಶ್ರೀನಾಥ್​
|

Updated on: Apr 26, 2020 | 12:03 PM

Share

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು.

ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಬೆಳೆಯನ್ನು ಬಡವರಿಗೆ ದಾನ ಮಾಡ್ತಿದ್ದಾರೆ. ದೇಶದ 130 ಕೋಟಿ ಜನರಿಗೆ ನಾನು ಶಿರಭಾಗಿ ನಮಿಸುತ್ತೇನೆ ಎಂದರು.

ಕೊರೊನಾ ವಾರಿಯರ್ಸ್​ಗಾಗಿ ವೆಬ್‌ಸೈಟ್‌ ಲಾಂಚ್​: ಸರ್ಕಾರ ಕೊರೊನಾ ವಾರಿಯರ್ಸ್​ಗಾಗಿ covidwarriors.gov.in ವೆಬ್‌ಸೈಟ್‌ ಮಾಡಲಾಗಿದೆ. ಇದರ ಜೊತೆ ನೀವೂ ಜೊತೆಗೂಡಬಹುದು. ಕೊವಿಡ್ ವಾರಿಯರ್ಸ್ ರೀತಿ ನೀವೂ ಹೋರಾಡಬಹುದು. ದೇಶದ ಜನರು ತೋರಿರುವ ಸಂಕಲ್ಪ ಹೊಸ ದಿಶೆಯನ್ನ ತೋರಿದೆ. ಈ ಸಂಕಷ್ಟದಲ್ಲಿ ದೇಶದ ಜನರ ಸಂಕಲ್ಪಶಕ್ತಿ ತಿಳಿಯುತ್ತಿದೆ.

ಎಲ್ಲೆಡೆ ಪೌರಕಾರ್ಮಿಕರನ್ನು ಹೂವಿನ ಮಳೆಗೈದು ಸ್ವಾಗತಿಸುತ್ತಿದ್ದಾರೆ. ಆದ್ರೆ ಕೆಲವೆಡೆ ಕೊವಿಡ್ ವಾರಿಯರ್ಸ್, ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನೀಯ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೋದಿ ಎಚ್ಚರಿಕೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಜನ ನಿಲ್ಲಿಸಬೇಕು. ಮಾಸ್ಕ್ ಸಭ್ಯ ಸಮಾಜದ ಪ್ರತೀಕವಾಗಿ ಬದಲಾಗಲಿದೆ. ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯ. ಕೊರೊನಾ ಸೋಂಕಿನಿಂದ ಹಬ್ಬ ಆಚರಣೆಯಲ್ಲಿ ಬದಲಾವಣೆ ತರಲಿದೆ. ಜನರು ಮನೆಯಲ್ಲಿದ್ದು ಕುಟುಂಬಸ್ಥರ ಜತೆ ಹಬ್ಬ ಆಚರಿಸಿ ಎಂದು ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ ನೀಡಿದರು.

https://www.facebook.com/Tv9Kannada/videos/2564932267089158/

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ