ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು. ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ […]

ಕೊರೊನಾ ವಿರುದ್ಧ ಪ್ರತಿಯೊಬ್ಬ ನಾಗರಿಕ ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ -ಮೋದಿ
ಸಾಧು ಶ್ರೀನಾಥ್​

Updated on: Apr 26, 2020 | 12:03 PM

ದೆಹಲಿ: ರೋಗಿಗಳಿಗೆ ಔಷಧ ವಿತರಣೆ ಸೇರಿದಂತೆ ಎಲ್ಲದರಲ್ಲೂ ನಾವು ಮಾದರಿಯಾಗಿದ್ದೇವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಜನ ಒಬ್ಬರು ಮತ್ತೊಬ್ಬರ ಸಹಾಯಕ್ಕೆ ಮುಂದೆ ಬರುತ್ತಿದ್ದಾರೆ. ಮಹಾಮಾರಿ ಕೊರೊನಾ ಮಧ್ಯೆ ರೈತರು ಬೆಳಗ್ಗೆಯಿಂದ ಸಂಜೆಯವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಪಿಂಚಣಿಯನ್ನು ನೀಡ್ತಿದ್ದಾರೆ. ಕೆಲವರು ಮಾಸ್ಕ್​ ತಯಾರಿಸುತ್ತಿದ್ದಾರೆ ಎಂದು ಮನ್​ ಕಿ ಬಾತ್​ನ 64ನೇ ಎಪಿಸೋಡ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದರು.

ದೇಶದ ಪ್ರತಿಯೊಬ್ಬ ನಾಗರಿಕ ಈ ಹೋರಾಟದಲ್ಲಿ ಸೈನಿಕ. ಪ್ರತಿಯೊಬ್ಬರೂ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿದ್ದಾರೆ. ಕೆಲವರು ತಮ್ಮ ಬೆಳೆಯನ್ನು ಬಡವರಿಗೆ ದಾನ ಮಾಡ್ತಿದ್ದಾರೆ. ದೇಶದ 130 ಕೋಟಿ ಜನರಿಗೆ ನಾನು ಶಿರಭಾಗಿ ನಮಿಸುತ್ತೇನೆ ಎಂದರು.

ಕೊರೊನಾ ವಾರಿಯರ್ಸ್​ಗಾಗಿ ವೆಬ್‌ಸೈಟ್‌ ಲಾಂಚ್​:
ಸರ್ಕಾರ ಕೊರೊನಾ ವಾರಿಯರ್ಸ್​ಗಾಗಿ covidwarriors.gov.in ವೆಬ್‌ಸೈಟ್‌ ಮಾಡಲಾಗಿದೆ. ಇದರ ಜೊತೆ ನೀವೂ ಜೊತೆಗೂಡಬಹುದು. ಕೊವಿಡ್ ವಾರಿಯರ್ಸ್ ರೀತಿ ನೀವೂ ಹೋರಾಡಬಹುದು. ದೇಶದ ಜನರು ತೋರಿರುವ ಸಂಕಲ್ಪ ಹೊಸ ದಿಶೆಯನ್ನ ತೋರಿದೆ. ಈ ಸಂಕಷ್ಟದಲ್ಲಿ ದೇಶದ ಜನರ ಸಂಕಲ್ಪಶಕ್ತಿ ತಿಳಿಯುತ್ತಿದೆ.

ಎಲ್ಲೆಡೆ ಪೌರಕಾರ್ಮಿಕರನ್ನು ಹೂವಿನ ಮಳೆಗೈದು ಸ್ವಾಗತಿಸುತ್ತಿದ್ದಾರೆ. ಆದ್ರೆ ಕೆಲವೆಡೆ ಕೊವಿಡ್ ವಾರಿಯರ್ಸ್, ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದು ಖಂಡನೀಯ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮೋದಿ ಎಚ್ಚರಿಕೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಜನ ನಿಲ್ಲಿಸಬೇಕು. ಮಾಸ್ಕ್ ಸಭ್ಯ ಸಮಾಜದ ಪ್ರತೀಕವಾಗಿ ಬದಲಾಗಲಿದೆ. ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯ. ಕೊರೊನಾ ಸೋಂಕಿನಿಂದ ಹಬ್ಬ ಆಚರಣೆಯಲ್ಲಿ ಬದಲಾವಣೆ ತರಲಿದೆ. ಜನರು ಮನೆಯಲ್ಲಿದ್ದು ಕುಟುಂಬಸ್ಥರ ಜತೆ ಹಬ್ಬ ಆಚರಿಸಿ ಎಂದು ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಕರೆ ನೀಡಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us