AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಿ ಎಲ್ಲವೂ ಮುಗಿದು ಹೋಯ್ತು’ ಕಣ್ಣೀರಾದ ಅಫ್ಘಾನಿಸ್ತಾನದ ಸಂಸದ ನರೀಂದರ್ ಸಿಂಗ್ ಖಾಲ್ಸಾ

Narinder Singh Khalsa: ನಾವು ಅಫ್ಘಾನಿಸ್ತಾನದಲ್ಲಿ ಈ ರೀತಿಯ ಪರಿಸ್ಥಿತಿಯನ್ನು ನೋಡಿಲ್ಲ ಮತ್ತು ಈಗ ನಾವು ಅದನ್ನು ನೋಡುತ್ತಿದ್ದೇವೆ, ಎಲ್ಲವೂ ಮುಗಿದಿದೆ. ಕಳೆದ 20 ವರ್ಷಗಳಲ್ಲಿ ನಿರ್ಮಿಸಿದ ಸರ್ಕಾರ ಕೂಡ ಮುಗಿದಿದೆ. ಈಗ ಎಲ್ಲವೂ ಶೂನ್ಯವಾಗಿದೆ.

'ಅಲ್ಲಿ ಎಲ್ಲವೂ ಮುಗಿದು ಹೋಯ್ತು' ಕಣ್ಣೀರಾದ ಅಫ್ಘಾನಿಸ್ತಾನದ ಸಂಸದ ನರೀಂದರ್ ಸಿಂಗ್ ಖಾಲ್ಸಾ
ನರೀಂದರ್ ಸಿಂಗ್ ಖಾಲ್ಸಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 22, 2021 | 1:03 PM

Share

ದೆಹಲಿ: ಅಫ್ಘಾನಿಸ್ತಾನದ ಸಂಸತ್ ಸದಸ್ಯ ನರೀಂದರ್ ಸಿಂಗ್ ಖಾಲ್ಸಾ ಅವರು ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆ ವಿಮಾನದಲ್ಲಿ ಕಾಬೂಲ್ ನಿಂದ ಬಂದಿಳಿದ ನಂತರ ಮಾಧ್ಯಮದವರ ಮುಂದೆ ಕಣ್ಣೀರಾಗಿದ್ದಾರೆ. ಸಂಸದನಾಗಿ ತನ್ನ ದೇಶವನ್ನು ತೊರೆದು ಬಂದಿರುವ ಬಗ್ಗೆ ಎಂದು ಕೇಳಿದಾಗ, ಇದು ನನ್ನಲ್ಲಿ ಅಳು ಬರಿಸುತ್ತದೆ ಎಂದಿದ್ದಾರೆ. ಕಾಬೂಲಿನಿಂದ ಭಾರತೀಯ ವಾಯುಪಡೆಯ (ಐಎಎಫ್) ವಿಮಾನದಲ್ಲಿ ಭಾರತವು 168 ಜನರನ್ನು ಸ್ಥಳಾಂತರಿಸಿದೆ. ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, ಅದರಲ್ಲಿ 107 ಭಾರತೀಯರು ಮತ್ತು ಸಿಂಗ್ ನಂತಹ ಇತರರು ಅಫ್ಘಾನ್ ಹಿಂದುಗಳು ಮತ್ತು ಸಿಖ್ಖರಾಗಿದ್ದಾರೆ. “ನಾವು ಅಫ್ಘಾನಿಸ್ತಾನದಲ್ಲಿ ಈ ರೀತಿಯ ಪರಿಸ್ಥಿತಿಯನ್ನು ನೋಡಿಲ್ಲ ಮತ್ತು ಈಗ ನಾವು ಅದನ್ನು ನೋಡುತ್ತಿದ್ದೇವೆ, ಎಲ್ಲವೂ ಮುಗಿದಿದೆ. ಕಳೆದ 20 ವರ್ಷಗಳಲ್ಲಿ ನಿರ್ಮಿಸಿದ ಸರ್ಕಾರ ಕೂಡ ಮುಗಿದಿದೆ. ಈಗ ಎಲ್ಲವೂ ಶೂನ್ಯವಾಗಿದೆ”ಎಂದು ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 87 ಭಾರತೀಯರು ಮತ್ತು ಇಬ್ಬರು ನೇಪಾಳಿ ಪ್ರಜೆಗಳ ಇನ್ನೊಂದು ಗುಂಪನ್ನು ಭಾನುವಾರ ದೆಹಲಿಗೆ ಕರೆದೊಯ್ಯಲಾಯಿತು.

ಸಿಂಗ್ ಅವರು ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಇಬ್ಬರು ಸಂಸದರಲ್ಲಿ ಒಬ್ಬರಾಗಿದ್ದು, 72 ಅಫ್ಘಾನ್ ಸಿಖ್ಖರು ಮತ್ತು ಹಿಂದೂಗಳ ಗುಂಪನ್ನು ತಾಲಿಬಾನ್ ಶನಿವಾರ ಐಎಎಫ್ ವಿಮಾನ ಹತ್ತದಂತೆ ತಡೆದಿದ್ದು ಕಾಬೂಲ್ ವಿಮಾನ ನಿಲ್ದಾಣದಿಂದ ಹಿಂದಿರುಗಿದ್ದರು.

ಇದನ್ನೂ ಓದಿ: Haqqani Network: ಮನುಷ್ಯತ್ವದ ಮುಖ ನೋಡದ ಹಕ್ಕಾನಿಗಳು ಅಫ್ಘಾನಿಸ್ತಾನದಲ್ಲಿ ಓಡಾಡುತ್ತಿದ್ದಾರೆ; ಯಾರಿವರು?

(Everything is zero now Afghanistan Member of Parliament Narinder Singh Khalsa broke down )

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!