AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ನೋಡಿದ್ದೇವೆ: ಇವಿಎಂ ವಿರೋಧಿಗಳಿಗೆ ಸುಪ್ರೀಂ ಕೋರ್ಟ್ ಉತ್ತರ

Supreme Court on EVM vs Ballot Paper: ಇವಿಎಂ ಮೆಷೀನ್ ಮೇಲೆ ಜನರಿಗೆ ವಿಶ್ವಾಸ ಕಡಿಮೆ ಆಗಿದೆ. ವಿವಿಪ್ಯಾಟ್​ಗಳಿಂದ ಬರುವ ಸ್ಲಿಪ್ ಅನ್ನು ಮತದಾರನು ಬ್ಯಾಲಟ್ ಬಾಕ್ಸ್​ಗೆ ಹಾಕುವಂತಹ ವ್ಯವಸ್ಥೆಯನ್ನು ತರಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿಲ್ಲ. ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ಎಂಬುದು ತಮಗೆಲ್ಲಾ ತಿಳಿದಿದೆ. ಯೂರೋಪ್​ನಲ್ಲಿ ಇರುವ ವ್ಯವಸ್ಥೆ ಭಾರತಕ್ಕೆ ಸರಿಹೊಂದಬೇಕೆಂದಿಲ್ಲ ಎಂದು ಸುಪ್ರೀಂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ನೋಡಿದ್ದೇವೆ: ಇವಿಎಂ ವಿರೋಧಿಗಳಿಗೆ ಸುಪ್ರೀಂ ಕೋರ್ಟ್ ಉತ್ತರ
ಬ್ಯಾಲಟ್ ಪೇಪರ್, ಇವಿಎಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 16, 2024 | 5:14 PM

Share

ನವದೆಹಲಿ, ಏಪ್ರಿಲ್ 16: ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬಂದ ಬಳಿಕ ಮತ ಎಣಿಕೆ ಪ್ರಕ್ರಿಯೆ (votes counting) ಸುಗಮಗೊಂಡಿದೆ. ಆದರೆ, ತಂತ್ರಜ್ಞಾನವನ್ನು ಸರ್ಕಾರ ತನ್ನ ಅನುಕೂಲಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಕಳೆದ 10 ವರ್ಷಗಳಿಂದಲೂ ವಿಪಕ್ಷಗಳು ಆರೋಪಿಸುತ್ತಿವೆ. ಇವಿಎಂ ಬದಲು ಹಳೆಯ ಬ್ಯಾಲಟ್ ಬಾಕ್ಸ್ ಮತದಾನ ಪದ್ಧತಿಯನ್ನೇ ವಾಪಸ್ ತರಬೇಕೆಂಬ ಒತ್ತಾಯಗಳು ಇವೆ. ಇದೇ ವೇಳೆ, ಇವಿಎಂ ಮೆಷೀನ್​ನಲ್ಲಿ (EVM) ಮಾಡಲಾದ ಮತಗಳನ್ನು ವಿವಿಪ್ಯಾಟ್ ಸ್ಲಿಪ್​ಗಳ (VVPAT slips) ಮೂಲಕ ಪರಿಶೀಲನೆ ನಡೆಸುವಂತಹ ವ್ಯವಸ್ಥೆ ಆಗಬೇಕು ಎಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿಗಳು ಸಲ್ಲಿಕೆ ಆಗಿವೆ. ಇದರ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಪೀಠ (Supreme court), ಹಿಂದಿನ ಬ್ಯಾಲಟ್ ವೋಟಿಂಗ್ ವಿಧಾನದ ಲೋಪವನ್ನು ಎತ್ತಿತೋರಿಸಿದೆ.

‘ನಾವೆಲ್ಲಾ ಈಗ 60 ವರ್ಷ ವಯಸ್ಸು ದಾಟಿದವರಿದ್ದೇವೆ. ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ಎಂದು ನಮಗೆಲ್ಲಾ ಗೊತ್ತಿದೆ. ನಿಮಗೆ ಅದು ಮರೆತುಹೋಗಿರಬಹುದು, ಆದರೆ, ನಾವು ಮರೆತಿಲ್ಲ,’ ಎಂದು ನ್ಯಾಯಪೀಠದಲ್ಲಿದ್ದ ನ್ಯಾ| ಸಂಜೀವ್ ಖನ್ನ ಹೇಳಿದ್ದಾರೆ. ಹೆಚ್ಚಿನ ಯೂರೋಪಿಯನ್ ದೇಶಗಳು ಇವಿಎಂ ಬದಲು ಬ್ಯಾಲಟ್ ಪೇಪರ್ ಮತದಾನ ವಿಧಾನವನ್ನು ಮರಳಿ ಆಯ್ಕೆ ಮಾಡಿಕೊಂಡಿರುವ ಸಂಗತಿಯನ್ನು ಉಲ್ಲೇಖಿಸಿ ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಮುಂದಿಟ್ಟಿದ್ದ ವಾದಕ್ಕೆ ನ್ಯಾಯಮೂರ್ತಿಗಳು ಈ ಉತ್ತರ ನೀಡಿದರು.

ಇದನ್ನೂ ಓದಿ: ಚುನಾವಣಾ ಬೇಟೆ; ಜನವರಿಯಿಂದೀಚೆ 12,000 ಕೋಟಿ ರೂ ಮೌಲ್ಯದ ನಗದು ಮತ್ತಿತರ ವಸ್ತುಗಳು ಜಫ್ತಿ

ಇವಿಎಂ ವಿಧಾನದ ವಿರುದ್ಧ ಸಲ್ಲಿಸಲಾದ ಹಲವು ಅರ್ಜಿಗಳಲ್ಲಿ ಎಡಿಆರ್ (ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್) ಒಂದು. ಎಡಿಆರ್ ಪರ ಪ್ರಶಾಂತ್ ಭೂಷಣ್ ವಕಾಲತು ವಹಿಸಿ, ಮತಪತ್ರದ ಮೂಲಕ ಮತದಾನ ಮಾಡುವ ಪದ್ಧತಿ ಮರಳಬೇಕು ಎಂದು ವಾದಿಸುತ್ತಿದ್ದರು.

‘ನಾವು ಪೇಪರ್ ಬ್ಯಾಲಟ್​ಗೆ ಮರಳಬಹುದು. ವಿವಿಪ್ಯಾಟ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಆಯ್ಕೆ. ಮೆಷಿನ್​ನಿಂದ ಹೊರಬರುವ ಪೇಪರ್ ಸ್ಲಿಪ್ ಅನ್ನು ಮತದಾರರು ಬ್ಯಾಲಟ್ ಬಾಕ್ಸ್​ಗೆ ಹಾಕಬಹುದು,’ ಎಂದು ಪ್ರಶಾಂತ್ ಭೂಷಣ್ ಅವರು ಜರ್ಮನಿಯ ಉದಾಹರಣೆ ನೀಡಿದರು.

ಮತ್ತೊಬ್ಬ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು, ಇವಿಎಂಗಳಲ್ಲಿ ಹಾಕಲಾದ ಮತಗಳನ್ನು ವಿವಿಪ್ಯಾಟ್​ಗಳೊಂದಿಗೆ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು. ಈ ವಾದವನ್ನು ನ್ಯಾಯಮೂರ್ತಿಗಳು ಪರಸ್ಕರಿಸಲಿಲ್ಲ.

ಇದನ್ನೂ ಓದಿ: ಬಿಜೆಪಿಯ ಶ್ವೇತಪತ್ರ ವೆಬ್​ಸೈಟ್​ ಮೂಲಕ ನಿಮ್ಮ ಕ್ಷೇತ್ರ ತಲುಪಿದ ಕೇಂದ್ರದ ಯೋಜನೆಗಳ ಮಾಹಿತಿ ಪಡೆಯಿರಿ

‘60 ಕೋಟಿ ವಿವಿಪ್ಯಾಟ್ ಸ್ಲಿಪ್​ಗಳನ್ನು ಎಣಿಸಬೇಕಾಗುತ್ತದೆ, ಅಲ್ಲವೇ? ಮನುಷ್ಯನೇ ಎಣಿಕೆ ಮಾಡುತ್ತಾನಾದ್ದರಿಂದ ಪಕ್ಷಪಾತಿತನ, ಮಾನವ ಸಹಜ ದೌರ್ಬಲ್ಯ ಬರಬಹುದು. ಮನುಷ್ಯನ ಹಸ್ತಕ್ಷೇಪ ಇಲ್ಲದೆ ಯಂತ್ರಗಳು ನಿಖರ ಫಲಿತಾಂಶ ಕೊಡುತ್ತವೆ. ಮೆಷೀನ್ ಅಥವಾ ಸಾಫ್ಟ್​​ವೇರ್​ನಲ್ಲಿ ಮನುಷ್ಯನ ಹಸ್ತಕ್ಷೇಪ ಆದಾಗ ಮಾತ್ರ ಸಮಸ್ಯೆ ಉದ್ಭವ ಆಗುತ್ತದೆ. ಇದನ್ನು ತಪ್ಪಿಸಲು ನಿಮ್ಮ ಬಳಿ ಸಲಹೆ ಇದ್ದರೆ ಕೊಡಿ,’ ಎಂದು ನ್ಯಾ| ಸಂಜೀವ್ ಖನ್ನಾ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?