AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಉತ್ಸವದ ಫ್ಲೆಕ್ಸ್​ನಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ, ಎಲ್ಲೆಡೆ ಆಕ್ರೋಶ

ತಮಿಳುನಾಡಿನಲ್ಲಿ ತಾಯಿ ಪಾರ್ವತಿಯ ಆರಾಧನೆಗಾಗಿ ನಡೆದ ಉತ್ಸವದಲ್ಲಿ ನೀಲಿ ತಾರೆ ಮಿಯಾ ಖಲೀಫಾ ಫ್ಲೆಕ್ಸ್​ ಕಂಡು ಭಕ್ತರು ಬೆಚ್ಚಿಬಿದ್ದಿದ್ದಾರೆ. ಯಾರೋ ಹಿಂದೂ ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಧಾರ್ಮಿಕ ಉತ್ಸವದ ಫ್ಲೆಕ್ಸ್​ನಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ, ಎಲ್ಲೆಡೆ ಆಕ್ರೋಶ
ಮಿಯಾ ಖಲೀಫಾ
ನಯನಾ ರಾಜೀವ್
|

Updated on:Aug 09, 2024 | 10:55 AM

Share

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಉತ್ಸವದ ವೇಳೆ ಫ್ಲೆಕ್ಸ್​ನಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ(Mia Khalifa) ಅವರ ಫೋಟೊ ಹಾಕಲಾಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಕುರುವಿಮಲೈನ ನಾಗತಮ್ಮನ್ ಮತ್ತು ಸೆಲ್ಲಿಯಮ್ಮನ್ ದೇವಾಲಯಗಳ ಸಮೀಪದ ಹೋರ್ಡಿಂಗ್​ಗಳನ್ನು ಹಾಕಲಾಗಿತ್ತು. ಅದರಲ್ಲಿ ಕಲಶ ಹೊತ್ತ ಮಿಯಾ ಖಲೀಫಾರ ಚಿತ್ರವೂ ಇತ್ತು.

ಈ ಹೋರ್ಡಿಂಗ್ ರಾಜ್ಯದಾದ್ಯಂತ ದೇವಾಲಯಗಳಲ್ಲಿ ದೇವಿ ಅಮ್ಮನ್ ಅಂದರೆ ಪಾರ್ವತಿ ಪೂಜಿಸುವ ‘ಆದಿ’ ಹಬ್ಬದ ಸಂದರ್ಭದಲ್ಲಿ ಕಂಡುಬಂದಿದೆ. ಇದು ಸ್ಥಳೀಯರ ಕೆಂಗಣ್ಣಿಗೆ ಕಾರಣವಾಗಿದೆ.

ಹಬ್ಬದ ಅಲಂಕಾರವಾಗಿ ಹಲವು ಹೋರ್ಡಿಂಗ್​ಗಳಿಗೆ ದೀಪದ ಅಲಂಕಾರ ಮಾಡಲಾಗಿದೆ. ಹೋರ್ಡಿಂಗ್​ ಒಂದರಲ್ಲಿ ಮಿಯಾ ಖಲೀಫಾ ಅವರ ಚಿತ್ರವನ್ನು ನೋಡಿ ಜನರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ಓದಿ: Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

ಈ ವಿವಾದಾತ್ಮಕ ಹೋರ್ಡಿಂಗ್‌ನ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪೋಲೀಸರು ಈ ಹೋರ್ಡಿಂಗ್ ತೆಗೆದು ತನಿಖೆ ಆರಂಭಿಸಿದರು.

ಮಿಯಾ ಖಲೀಫಾ ಹಬ್ಬದ ಹೋರ್ಡಿಂಗ್‌ಗಳಲ್ಲಿ ದೇವರು ಮತ್ತು ದೇವತೆಗಳ ಚಿತ್ರಗಳ ಜೊತೆಗೆ ‘ಪಾಲ್ ಕುದ್ದಮ್’ (ಹಾಲಿನ ಕಲಶ) ಹಿಡಿದಿರುವುದು ಕಂಡುಬಂದಿದೆ. ಈ ಹಬ್ಬದಲ್ಲಿ ಭಕ್ತರು ತಮ್ಮ ಹಣೆಯ ಮೇಲೆ ಹಾಲಿನ ಕಳಶ ಹೊತ್ತುಕೊಂಡು ದೇವಸ್ಥಾನಗಳಲ್ಲಿರುವ ದೇವರು ಮತ್ತು ದೇವತೆಗಳಿಗೆ ಅರ್ಪಿಸುತ್ತಾರೆ.

ಹೋರ್ಡಿಂಗ್ ಹಾಕಿದ್ದ ವ್ಯಕ್ತಿ ಮಿಯಾನ್ ಖಲೀಫಾ ಅವರ ಫೋಟೋ ಮಾತ್ರವಲ್ಲದೆ ಅವರದೇ ಫೋಟೋವನ್ನೂ ಆಧಾರ್ ಕಾರ್ಡ್ ರೂಪದಲ್ಲಿ ಹಾಕಿದ್ದರು. ಆದರೆ, ನಂತರ ಮ್ಯಾಗರಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಬದಿಯಲ್ಲಿದ್ದ ಹೋರ್ಡಿಂಗ್ ತೆಗೆದರು. ಹೋರ್ಡಿಂಗ್‌ನ ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಜನ ಕಾಮೆಂಟ್ ಕೂಡ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Fri, 9 August 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ