AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ವಿವಾದಿತ ಆತ್ಮಚರಿತ್ರೆಯ ಬಗ್ಗೆ ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಕ್ಕೆ ಭಾರೀ ಗದ್ದಲ ಏರ್ಪಟ್ಟಿತ್ತು. ಇನ್ನೂ ಪ್ರಕಟವಾಗದ ಪುಸ್ತಕವನ್ನು ಸದನದಲ್ಲಿ ಓದುವಂತಿಲ್ಲ ಎಂದು ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನರವಾಣೆಯವರ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ, ಯಾವುದೇ ಆನ್​ಲೈನ್​ನಲ್ಲಿ ಕೂಡ ಇದರ ಸಾಫ್ಟ್​ ಕಾಫಿಯನ್ನು ಹರಿಯಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ
Rahul Gandhi Holding Mm Naravanes BookImage Credit source: PTI
ಸುಷ್ಮಾ ಚಕ್ರೆ
|

Updated on: Feb 10, 2026 | 8:15 PM

Share

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದ ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (MM Naravane) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ.

ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್ ಎಂಎಂ ನರವಾಣೆ, “ಇದು ನನ್ನ ಪುಸ್ತಕದ ಸದ್ಯದ ಸ್ಥಿತಿ” ಎಂದು ಹೇಳಿದ್ದಾರೆ. ಆತ್ಮಚರಿತ್ರೆಯ ಅನಧಿಕೃತ ಪ್ರತಿಗಳ ಹಂಚಿಕೆಯ ಕುರಿತಾದ ರಾಜಕೀಯ ವಿವಾದದ ನಡುವೆ ಪ್ರಕಾಶಕರ ಸ್ಪಷ್ಟೀಕರಣವನ್ನು ನರವಾಣೆ ಕೂಡ ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆ ಮಾಜಿ ಸೇನಾ ಮುಖ್ಯಸ್ಥ ನರವಾಣೆಯವರ ಆತ್ಮಚರಿತ್ರೆಯಾದ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ಯ ಏಕೈಕ ಪ್ರಕಾಶನ ಹಕ್ಕುಗಳನ್ನು ತಾನೇ ಹೊಂದಿರುವುದಾಗಿ ಪುನರುಚ್ಚರಿಸಿದೆ. ಹಾಗೇ, ಆ ಪುಸ್ತಕ ಇನ್ನೂ ಪ್ರಕಟಣೆಗೆ ಹೋಗಿಲ್ಲ, ಅದರ ಸಾಫ್ಟ್​ ಕಾಪಿಗಳು ಕೂಡ ಎಲ್ಲೂ ಲಭ್ಯವಿಲ್ಲ ಎಂದು ಹೇಳಿದೆ. ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಯಾವುದೇ ಪ್ರತಿಗಳನ್ನು ಪ್ರಕಟಿಸಲಾಗಿಲ್ಲ, ವಿತರಿಸಲಾಗಿಲ್ಲ, ಮಾರಾಟ ಮಾಡಲಾಗಿಲ್ಲ ಅಥವಾ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿಲ್ಲ ಎಂದು ಪ್ರಕಾಶಕರು ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು

ಆತ್ಮಚರಿತ್ರೆಯ ಪಿಡಿಎಫ್ ಆವೃತ್ತಿಗಳು ಪ್ರಸಾರವಾಗುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ಆ ಪುಸ್ತಕದ ಹಸ್ತಪ್ರತಿಗೆ ರಕ್ಷಣಾ ಸಚಿವಾಲಯದಿಂದ ಇನ್ನೂ ಕಡ್ಡಾಯ ಅನುಮತಿ ಸಿಗದ ಕಾರಣದಿಂದ ಪುಸ್ತಕ ಪ್ರಕಟವಾಗಿಲ್ಲ ಎಂದು ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ