AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ವಿವಾದಿತ ಆತ್ಮಚರಿತ್ರೆಯ ಬಗ್ಗೆ ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಕ್ಕೆ ಭಾರೀ ಗದ್ದಲ ಏರ್ಪಟ್ಟಿತ್ತು. ಇನ್ನೂ ಪ್ರಕಟವಾಗದ ಪುಸ್ತಕವನ್ನು ಸದನದಲ್ಲಿ ಓದುವಂತಿಲ್ಲ ಎಂದು ಆಡಳಿತ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನರವಾಣೆಯವರ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ, ಯಾವುದೇ ಆನ್​ಲೈನ್​ನಲ್ಲಿ ಕೂಡ ಇದರ ಸಾಫ್ಟ್​ ಕಾಫಿಯನ್ನು ಹರಿಯಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ
Rahul Gandhi Holding Mm Naravanes BookImage Credit source: PTI
ಸುಷ್ಮಾ ಚಕ್ರೆ
|

Updated on: Feb 10, 2026 | 8:15 PM

Share

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದ ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (MM Naravane) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ.

ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್ ಎಂಎಂ ನರವಾಣೆ, “ಇದು ನನ್ನ ಪುಸ್ತಕದ ಸದ್ಯದ ಸ್ಥಿತಿ” ಎಂದು ಹೇಳಿದ್ದಾರೆ. ಆತ್ಮಚರಿತ್ರೆಯ ಅನಧಿಕೃತ ಪ್ರತಿಗಳ ಹಂಚಿಕೆಯ ಕುರಿತಾದ ರಾಜಕೀಯ ವಿವಾದದ ನಡುವೆ ಪ್ರಕಾಶಕರ ಸ್ಪಷ್ಟೀಕರಣವನ್ನು ನರವಾಣೆ ಕೂಡ ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆ ಮಾಜಿ ಸೇನಾ ಮುಖ್ಯಸ್ಥ ನರವಾಣೆಯವರ ಆತ್ಮಚರಿತ್ರೆಯಾದ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ಯ ಏಕೈಕ ಪ್ರಕಾಶನ ಹಕ್ಕುಗಳನ್ನು ತಾನೇ ಹೊಂದಿರುವುದಾಗಿ ಪುನರುಚ್ಚರಿಸಿದೆ. ಹಾಗೇ, ಆ ಪುಸ್ತಕ ಇನ್ನೂ ಪ್ರಕಟಣೆಗೆ ಹೋಗಿಲ್ಲ, ಅದರ ಸಾಫ್ಟ್​ ಕಾಪಿಗಳು ಕೂಡ ಎಲ್ಲೂ ಲಭ್ಯವಿಲ್ಲ ಎಂದು ಹೇಳಿದೆ. ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಯಾವುದೇ ಪ್ರತಿಗಳನ್ನು ಪ್ರಕಟಿಸಲಾಗಿಲ್ಲ, ವಿತರಿಸಲಾಗಿಲ್ಲ, ಮಾರಾಟ ಮಾಡಲಾಗಿಲ್ಲ ಅಥವಾ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿಲ್ಲ ಎಂದು ಪ್ರಕಾಶಕರು ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಪ್ರಸಾರದ ಕುರಿತು ಕೇಸ್ ದಾಖಲು

ಆತ್ಮಚರಿತ್ರೆಯ ಪಿಡಿಎಫ್ ಆವೃತ್ತಿಗಳು ಪ್ರಸಾರವಾಗುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ಆ ಪುಸ್ತಕದ ಹಸ್ತಪ್ರತಿಗೆ ರಕ್ಷಣಾ ಸಚಿವಾಲಯದಿಂದ ಇನ್ನೂ ಕಡ್ಡಾಯ ಅನುಮತಿ ಸಿಗದ ಕಾರಣದಿಂದ ಪುಸ್ತಕ ಪ್ರಕಟವಾಗಿಲ್ಲ ಎಂದು ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್