AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಎಂಪಿ ಚಂದನ್​ ಮಿತ್ರಾ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Chandan Mitra: ಚಂದನ್​ಮಿತ್ರಾ ಮೂಲತಃ ಪಶ್ಚಿಮ ಬಂಗಾಳದ ಹೌರಾಹ್​​ನವರು. ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು.

ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಎಂಪಿ ಚಂದನ್​ ಮಿತ್ರಾ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಚಂದನ್ ಮಿತ್ರಾ
TV9 Web
| Edited By: |

Updated on:Sep 02, 2021 | 10:02 AM

Share

ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಪತ್ರಕರ್ತ ಚಂದನ್​ ಮಿತ್ರಾ (66) ನಿನ್ನೆ ತಡರಾತ್ರಿ ನಿಧನರಾದರು. ತಂದೆಯ ನಿಧನದ ಬಗ್ಗೆ ಅವರ ಪುತ್ರ ಕುಶನ್​ ಮಿತ್ರಾ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಅವರಿಗೆ ಅಸೌಖ್ಯವಿತ್ತು ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್​ ಮಿತ್ರ ನಂತರ ಆ ಹುದ್ದೆಯನ್ನು ತೊರೆದಿದ್ದರು. 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು ಎಂದೂ ಹೇಳಲಾಗಿದೆ. ಹಾಗೇ, ಈ ವರ್ಷ ಜೂನ್​ನಲ್ಲಿ ಪತ್ರಕರ್ತ ಹುದ್ದೆಯನ್ನೂ ಬಿಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.  

ಚಂದನ್​ಮಿತ್ರಾ ಮೂಲತಃ ಪಶ್ಚಿಮ ಬಂಗಾಳದ ಹೌರಾಹ್​​ನವರು. ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು.  2016ರವರೆಗೆ ರಾಜ್ಯಸಭಾ ಎಂಪಿಯಾಗಿ ಮುಂದುವರಿದು ನಂತರ ಬಿಜೆಪಿಯನ್ನೇ ತೊರೆದಿದ್ದರು. 2018ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು.

ಪ್ರಧಾನಿ ಮೋದಿ ಸಂತಾಪ ಚಂದನ್​ ಮಿತ್ರಾ, ಅಪರ ಬುದ್ಧಿ ಶಕ್ತಿ ಮತ್ತು ಒಳನೋಟ ಹೊಂದಿದ್ದವರು. ಮಾಧ್ಯಮ ಮತ್ತು ರಾಜಕೀಯ ಜೀವನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ತುಂಬ ನೋವಾಗಿದೆ. ಓಂ ಶಾಮತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸ್ವಪನ್​ ದಾಸ್​ ಗುಪ್ತಾ ಟ್ವೀಟ್​ ಮೂಲಕ ಚಂದನ್​ ಮಿತ್ರಾರಿಗೆ ಸಂತಾಪ ಸೂಚಿಸಿದ್ದಾರೆ. 1972ರಲ್ಲಿ ತಾವಿಬ್ಬರೂ ಒಟ್ಟಿಗೇ ಶಾಲಾ ಪ್ರವಾಸಕ್ಕೆ ಹೋಗಿದ್ದ ಫೋಟೋ ಶೇರ್​ ಮಾಡಿಕೊಂಡಿರುವ ಅವರು, ನಾನು ನನ್ನ ಆಪ್ತಮಿತ್ರನನ್ನು ಕಳೆದುಕೊಂಡಿದ್ದೇನೆ. ನಾವಿಬ್ಬರೂ ಶಾಲಾದಿನಗಳಿಂದಲೂ ಒಟ್ಟಿಗೇ ಇದ್ದವು. ಒಟ್ಟಿಗೇ ಪತ್ರಿಕೋದ್ಯಮಕ್ಕೆ ಕಾಲಿಟ್ಟೆವು. ಈಗ ಚಂದನ್​ ಇಲ್ಲ..ಅವರು ಎಲ್ಲೇ ಇದ್ದರೂ, ಅಲ್ಲೇ ಖುಷಿಯಾಗಿರಲಿ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ.

ಇದನ್ನೂ ಓದಿ: ವಿಶ್ವ ತೆಂಗು ದಿನ; ತೆಂಗಿನ ಕುರಿತಾಗಿ ತಿಳಿಯಲೇಬೇಕಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ

Corbevax Covid 19 Vaccine: 5-18ವರ್ಷದವರ ಮೇಲೆ ’ಕಾರ್ಬ್​ವ್ಯಾಕ್ಸ್’ ಲಸಿಕೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ

Published On - 9:53 am, Thu, 2 September 21

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು