AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಎಂಪಿ ಚಂದನ್​ ಮಿತ್ರಾ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Chandan Mitra: ಚಂದನ್​ಮಿತ್ರಾ ಮೂಲತಃ ಪಶ್ಚಿಮ ಬಂಗಾಳದ ಹೌರಾಹ್​​ನವರು. ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು.

ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಎಂಪಿ ಚಂದನ್​ ಮಿತ್ರಾ ನಿಧನ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಚಂದನ್ ಮಿತ್ರಾ
TV9 Web
| Edited By: |

Updated on:Sep 02, 2021 | 10:02 AM

Share

ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ, ಹಿರಿಯ ಪತ್ರಕರ್ತ ಚಂದನ್​ ಮಿತ್ರಾ (66) ನಿನ್ನೆ ತಡರಾತ್ರಿ ನಿಧನರಾದರು. ತಂದೆಯ ನಿಧನದ ಬಗ್ಗೆ ಅವರ ಪುತ್ರ ಕುಶನ್​ ಮಿತ್ರಾ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಅವರಿಗೆ ಅಸೌಖ್ಯವಿತ್ತು ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಚಂದನ್​ ಮಿತ್ರ ನಂತರ ಆ ಹುದ್ದೆಯನ್ನು ತೊರೆದಿದ್ದರು. 2018ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು ಎಂದೂ ಹೇಳಲಾಗಿದೆ. ಹಾಗೇ, ಈ ವರ್ಷ ಜೂನ್​ನಲ್ಲಿ ಪತ್ರಕರ್ತ ಹುದ್ದೆಯನ್ನೂ ಬಿಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.  

ಚಂದನ್​ಮಿತ್ರಾ ಮೂಲತಃ ಪಶ್ಚಿಮ ಬಂಗಾಳದ ಹೌರಾಹ್​​ನವರು. ದೆಹಲಿಯ ಪತ್ರಿಕೆಯೊಂದರ ಸಂಪಾದಕರಾಗಿದ್ದರು. ಬಿಜೆಪಿ ಪಕ್ಷದ ರಾಜ್ಯಸಭಾ ಸದಸ್ಯರಾಗಿ 2010ರಲ್ಲಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು.  2016ರವರೆಗೆ ರಾಜ್ಯಸಭಾ ಎಂಪಿಯಾಗಿ ಮುಂದುವರಿದು ನಂತರ ಬಿಜೆಪಿಯನ್ನೇ ತೊರೆದಿದ್ದರು. 2018ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು.

ಪ್ರಧಾನಿ ಮೋದಿ ಸಂತಾಪ ಚಂದನ್​ ಮಿತ್ರಾ, ಅಪರ ಬುದ್ಧಿ ಶಕ್ತಿ ಮತ್ತು ಒಳನೋಟ ಹೊಂದಿದ್ದವರು. ಮಾಧ್ಯಮ ಮತ್ತು ರಾಜಕೀಯ ಜೀವನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ತುಂಬ ನೋವಾಗಿದೆ. ಓಂ ಶಾಮತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಜ್ಯಸಭಾ ಸದಸ್ಯ ಸ್ವಪನ್​ ದಾಸ್​ ಗುಪ್ತಾ ಟ್ವೀಟ್​ ಮೂಲಕ ಚಂದನ್​ ಮಿತ್ರಾರಿಗೆ ಸಂತಾಪ ಸೂಚಿಸಿದ್ದಾರೆ. 1972ರಲ್ಲಿ ತಾವಿಬ್ಬರೂ ಒಟ್ಟಿಗೇ ಶಾಲಾ ಪ್ರವಾಸಕ್ಕೆ ಹೋಗಿದ್ದ ಫೋಟೋ ಶೇರ್​ ಮಾಡಿಕೊಂಡಿರುವ ಅವರು, ನಾನು ನನ್ನ ಆಪ್ತಮಿತ್ರನನ್ನು ಕಳೆದುಕೊಂಡಿದ್ದೇನೆ. ನಾವಿಬ್ಬರೂ ಶಾಲಾದಿನಗಳಿಂದಲೂ ಒಟ್ಟಿಗೇ ಇದ್ದವು. ಒಟ್ಟಿಗೇ ಪತ್ರಿಕೋದ್ಯಮಕ್ಕೆ ಕಾಲಿಟ್ಟೆವು. ಈಗ ಚಂದನ್​ ಇಲ್ಲ..ಅವರು ಎಲ್ಲೇ ಇದ್ದರೂ, ಅಲ್ಲೇ ಖುಷಿಯಾಗಿರಲಿ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ.

ಇದನ್ನೂ ಓದಿ: ವಿಶ್ವ ತೆಂಗು ದಿನ; ತೆಂಗಿನ ಕುರಿತಾಗಿ ತಿಳಿಯಲೇಬೇಕಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ

Corbevax Covid 19 Vaccine: 5-18ವರ್ಷದವರ ಮೇಲೆ ’ಕಾರ್ಬ್​ವ್ಯಾಕ್ಸ್’ ಲಸಿಕೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ

Published On - 9:53 am, Thu, 2 September 21

Follow Us
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’