AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್​ ಕೊರೊನಾ ಸೋಂಕಿನಿಂದ ನಿಧನ

ಭಾರತೀಯ ವೈದ್ಯಕೀಯ ಸಂಘದ( ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಕೆ ಅಗರ್ವಾಲ್​ ನಿನ್ನೆ ರಾತ್ರಿ (ಸೋಮವಾರ) ವಿಧವಶರಾಗಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್​ ಕೊರೊನಾ ಸೋಂಕಿನಿಂದ ನಿಧನ
ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್
shruti hegde
|

Updated on:May 18, 2021 | 10:30 AM

Share

ದೆಹಲಿ: ಭಾರತೀಯ ವೈದ್ಯಕೀಯ ಸಂಘದ( ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಕೆ ಅಗರ್ವಾಲ್​ ನಿನ್ನೆ ರಾತ್ರಿ (ಸೋಮವಾರ) ವಿಧವಶರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದರಿಂದ ಅವರು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಹೃದಯರೋಗ ತಜ್ಞರಾಗಿದ್ದ ಡಾ.ಕೆ.ಕೆ ಅಗರ್ವಾಲ್​ ಅವರು ಹಾರ್ಟ್​ಕೇರ್​ ಫೌಂಡೇಷನ್​ ಆಫ್​ ಇಂಡಿಯಾದ ಮುಖ್ಯಸ್ಥರಾಗಿದ್ದರು. ಕೊರೊನಾ ವೃತ್ತಿಯಲ್ಲಿ ವೈದ್ಯರಾದ್ದರಿಂದ ಕೊರೊನಾ ಸಂದರ್ಭದಲ್ಲಿ ಜನರ ಹಿತ ಬಯಸುತ್ತ, ಜನರಿಗೆ ಜಾಗೃತಿ ಮೂಡುಸುವತ್ತ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವಿಡಿಯೋ ಮಾಡುವ ಮೂಲಕ ಜನರಿಗೆ ಕೊರೊನಾ ಸೋಂಕಿನ ದುಷ್ಪರಿಣಾಮದ ಕುರಿತಾಗಿ ಅರಿವು ಮೂಡಿಸಿದ್ದರು.

ಕೆ.ಕೆ ಅಗರ್ವಾಲ್​ ಅವರಿಗೆ 62 ವರ್ಷ ವಯಸ್ಸಾಗಿತ್ತು. ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2005ರಲ್ಲಿ ಡಾ. ಬಿಸಿ ರಾಯ್​ ಪ್ರಶಸ್ತಿ, 2010 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ತಮ್ಮ ಶಾಲಾ ಶಿಕ್ಷಣವನ್ನು ದೆಹಲಿಯಲ್ಲಿ ಪೂರ್ಣಗೊಳಿಸಿದ್ದು, ನಾಗ್ಪುರ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್​ ಪದವಿ ಪಡೆದರು. ನಂತರ ವೈದ್ಯರಾಗಿ ತಮ್ಮ ವೃತ್ತಿಯನ್ನು ಮುಂದುವರೆಸುತ್ತಾ ಸಾರ್ವಜನಿಕ ಹಿತ ಬಯಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

Published On - 10:22 am, Tue, 18 May 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ