AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್​ ಕೊರೊನಾ ಸೋಂಕಿನಿಂದ ನಿಧನ

ಭಾರತೀಯ ವೈದ್ಯಕೀಯ ಸಂಘದ( ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಕೆ ಅಗರ್ವಾಲ್​ ನಿನ್ನೆ ರಾತ್ರಿ (ಸೋಮವಾರ) ವಿಧವಶರಾಗಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್​ ಕೊರೊನಾ ಸೋಂಕಿನಿಂದ ನಿಧನ
ಹೃದಯ ರೋಗ ತಜ್ಞ ಡಾ. ಕೆ.ಕೆ ಅಗರ್ವಾಲ್
shruti hegde
|

Updated on:May 18, 2021 | 10:30 AM

Share

ದೆಹಲಿ: ಭಾರತೀಯ ವೈದ್ಯಕೀಯ ಸಂಘದ( ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಕೆ.ಕೆ ಅಗರ್ವಾಲ್​ ನಿನ್ನೆ ರಾತ್ರಿ (ಸೋಮವಾರ) ವಿಧವಶರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದರಿಂದ ಅವರು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಹೃದಯರೋಗ ತಜ್ಞರಾಗಿದ್ದ ಡಾ.ಕೆ.ಕೆ ಅಗರ್ವಾಲ್​ ಅವರು ಹಾರ್ಟ್​ಕೇರ್​ ಫೌಂಡೇಷನ್​ ಆಫ್​ ಇಂಡಿಯಾದ ಮುಖ್ಯಸ್ಥರಾಗಿದ್ದರು. ಕೊರೊನಾ ವೃತ್ತಿಯಲ್ಲಿ ವೈದ್ಯರಾದ್ದರಿಂದ ಕೊರೊನಾ ಸಂದರ್ಭದಲ್ಲಿ ಜನರ ಹಿತ ಬಯಸುತ್ತ, ಜನರಿಗೆ ಜಾಗೃತಿ ಮೂಡುಸುವತ್ತ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ವಿಡಿಯೋ ಮಾಡುವ ಮೂಲಕ ಜನರಿಗೆ ಕೊರೊನಾ ಸೋಂಕಿನ ದುಷ್ಪರಿಣಾಮದ ಕುರಿತಾಗಿ ಅರಿವು ಮೂಡಿಸಿದ್ದರು.

ಕೆ.ಕೆ ಅಗರ್ವಾಲ್​ ಅವರಿಗೆ 62 ವರ್ಷ ವಯಸ್ಸಾಗಿತ್ತು. ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 2005ರಲ್ಲಿ ಡಾ. ಬಿಸಿ ರಾಯ್​ ಪ್ರಶಸ್ತಿ, 2010 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ತಮ್ಮ ಶಾಲಾ ಶಿಕ್ಷಣವನ್ನು ದೆಹಲಿಯಲ್ಲಿ ಪೂರ್ಣಗೊಳಿಸಿದ್ದು, ನಾಗ್ಪುರ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್​ ಪದವಿ ಪಡೆದರು. ನಂತರ ವೈದ್ಯರಾಗಿ ತಮ್ಮ ವೃತ್ತಿಯನ್ನು ಮುಂದುವರೆಸುತ್ತಾ ಸಾರ್ವಜನಿಕ ಹಿತ ಬಯಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

Published On - 10:22 am, Tue, 18 May 21

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!