AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು, ಕುಪ್ವಾರ ಉಗ್ರ ದಾಳಿಯ ಹಿಂದೆ ಪಾಕ್ ಸೇನೆಯ SSG ಕಮಾಂಡೋ ಕೈವಾಡ

ಆದಿಲ್ ರೆಹಮಾನಿ, ಜಿಒಸಿ, ಎಸ್‌ಎಸ್‌ಜಿ ಕಮಾಂಡೋಸ್ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನುಸುಳುಕೋರರನ್ನು ಸಂಘಟಿಸಿ ನಿರ್ದೇಶಿಸುತ್ತಿದೆ. ಪಾಕಿಸ್ತಾನ ಸೇನೆಯಿಂದ 600 ಕ್ಕೂ ಹೆಚ್ಚು ಎಸ್‌ಎಸ್‌ಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅವರಲ್ಲಿ ಹೆಚ್ಚಿನ ಸಂಖ್ಯೆಯವರು ಈಗಾಗಲೇ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಿದ್ದಾರೆ. ಕೆಲವರು ಇನ್ನೂ ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಾಜಿ ಡಿಜಿಪಿ ಎಸ್ ಪಿ ವೈದ್ ಹೇಳಿದ್ದಾರೆ.

ಜಮ್ಮು, ಕುಪ್ವಾರ ಉಗ್ರ ದಾಳಿಯ ಹಿಂದೆ ಪಾಕ್ ಸೇನೆಯ SSG ಕಮಾಂಡೋ ಕೈವಾಡ
ಭಾರತೀಯ ಸೇನೆ
ರಶ್ಮಿ ಕಲ್ಲಕಟ್ಟ
|

Updated on:Jul 29, 2024 | 4:47 PM

Share

ದೆಹಲಿ ಜುಲೈ 29: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಇತ್ತೀಚೆಗೆ ಉಗ್ರ ದಾಳಿಗಳು (Terror Attack) ಹೆಚ್ಚಾಗುತ್ತಿದ್ದಂತೆ,  ಪಾಕಿಸ್ತಾನ ಸೇನೆಯಿಂದ 600 ಕ್ಕೂ ಹೆಚ್ಚು ವಿಶೇಷ ಸೇವಾ ಗುಂಪು (SSG) ಕಮಾಂಡೋಗಳನ್ನು ಇಲ್ಲಿ ನಿಯೋಜಿಸಲಾಗಿದೆ. ಅವರಲ್ಲಿ ಕೆಲವರು ಈಗಾಗಲೇ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಿ ಭಯೋತ್ಪಾದಕ ದಾಳಿ ನಡೆಸುತ್ತಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಪೊಲೀಸ್ ಮಹಾನಿರ್ದೇಶಕ ಎಸ್‌ಪಿ ವೈದ್  ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಹತ್ತಾರು ಭಯೋತ್ಪಾದಕ ದಾಳಿಗಳು ನಡೆದಿವೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಒಬ್ಬ ಪಾಕಿಸ್ತಾನಿ ನುಸುಳುಕೋರನನ್ನು ಭಾರತೀಯ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಈತನಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಆತ ಪಾಕಿಸ್ತಾನದ ಸೇನೆಯ ಎಸ್‌ಎಸ್‌ಜಿ ಕಮಾಂಡೋ ಆಗಿದ್ದ ಎಂದು ವರದಿಗಳು ಸೂಚಿಸುತ್ತವೆ. ಎಸ್‌ಎಸ್‌ಜಿ ಪಾಕಿಸ್ತಾನದಲ್ಲಿ ಅತ್ಯಂತ ಹೆಚ್ಚು ತರಬೇತಿ ಪಡೆದ ಸಶಸ್ತ್ರ ಪಡೆ ಎಂದು ಪರಿಗಣಿಸಲಾಗಿದೆ.

ಕುಪ್ವಾರದಲ್ಲಿ ಸಂಪೂರ್ಣ ಕಾರ್ಯಾಚರಣೆಯನ್ನು ಪಾಕಿಸ್ತಾನ ಸೇನೆಯ ಆಜ್ಞೆಯ ಮೇರೆಗೆ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಮಾಡಿದೆ ಎಂದು ಭದ್ರತಾ ಪಡೆಗಳ ಅಧಿಕಾರಿಗಳು ಹೇಳಿದ್ದಾರೆ.

”ಆದಿಲ್ ರೆಹಮಾನಿ, ಜಿಒಸಿ, ಎಸ್‌ಎಸ್‌ಜಿ ಕಮಾಂಡೋಸ್ ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ನುಸುಳುಕೋರರನ್ನು ಸಂಘಟಿಸಿ ನಿರ್ದೇಶಿಸುತ್ತಿದೆ. ಪಾಕಿಸ್ತಾನ ಸೇನೆಯಿಂದ 600 ಕ್ಕೂ ಹೆಚ್ಚು ಎಸ್‌ಎಸ್‌ಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅವರಲ್ಲಿ ಹೆಚ್ಚಿನ ಸಂಖ್ಯೆಯವರು ಈಗಾಗಲೇ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಿದ್ದಾರೆ. ಕೆಲವರು ಇನ್ನೂ ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ. ಇದು ಯುದ್ಧದ ಕಾರ್ಯವಾಗಿದೆ. ಭಾರತೀಯ ಸೇನೆಯ 15 ಮತ್ತು 16 ತುಕಡಿಗಳನ್ನು ಸಂಪೂರ್ಣವಾಗಿ ಯುದ್ಧದಲ್ಲಿ ತೊಡಗಿಸಿಕೊಳ್ಳುವುದು ಇದರ ಹಿಂದಿನ ಉದ್ದೇಶವಾಗಿದೆ. ಒಬ್ಬ ಲೆಫ್ಟಿನೆಂಟ್ ಕರ್ನಲ್ ಶಾಹಿದ್ ಸಲೀಂ ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ನುಸುಳಿದ್ದಾನೆ ಎಂದು ವರದಿಯಾಗಿದೆ. ಅವರು ಎಲ್ಲಾ ಸ್ಲೀಪರ್ ಸೆಲ್‌ಗಳನ್ನು ಸಕ್ರಿಯಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಈ ಭಾಗಕ್ಕೆ ನುಸುಳಲು ಇನ್ನೂ ಎರಡು ಬೆಟಾಲಿಯನ್‌ಗಳು ಸಿದ್ಧವಾಗಿವೆ. ಇದೊಂದು ನಿಗೂಢ ಯುದ್ಧವಾಗಿದ್ದು, ಭಾರತದ ಪ್ರತಿಕ್ರಿಯೆ ಕ್ಷಿಪ್ರವಾಗಿರಬೇಕು. ” ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಾಜಿ ಡಿಜಿಪಿ ಎಸ್ ಪಿ ವೈದ್ ಹೇಳಿದ್ದಾರೆ.

ಮಾಜಿ ಡಿಜಿಪಿ ಎಸ್ಪಿ ವೈದ್ ಮಾತ್ರವಲ್ಲದೆ ಕಾಮೆಂಟೇಟರ್ ಅಮ್ಜದ್ ಅಯೂಬ್ ಮಿರ್ಜಾ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು.  ಮಿರ್ಜಾ ಯುನೈಟೆಡ್ ಕಿಂಗ್‌ಡಂ ಮೂಲದ ಲೇಖಕ, ಪ್ರಸಾರಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ.

1.SSG ಜನರಲ್ ಆಫೀಸರ್ ಕಮಾಂಡಿಂಗ್ (GOC) ಮೇಜರ್ ಜನರಲ್ ಆದಿಲ್ ರೆಹಮಾನಿ ಅವರು ಜಮ್ಮು ಪ್ರದೇಶದಲ್ಲಿ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. 2. ಒಂದು ಸಂಪೂರ್ಣ SSG ಬೆಟಾಲಿಯನ್ ನುಸುಳಿದೆ ಎಂದು ಹೇಳಲಾಗುತ್ತದೆ ಅಂದರೆ ಕನಿಷ್ಠ 600 ಕಮಾಂಡೋಗಳು ಕುಪ್ವಾರ ಪ್ರದೇಶದಲ್ಲಿ ಮತ್ತು ಇತರೆಡೆಗಳಲ್ಲಿದ್ದಾರೆ. 3. ⁠ಸ್ಥಳೀಯ ಜಿಹಾದಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಮತ್ತು ಭಾರತೀಯ ಪ್ರದೇಶದೊಳಗೆ SSG ಚಲನೆಯಲ್ಲಿ ಸಹಾಯ ಮಾಡುತ್ತವೆ. 4. ಲೆಫ್ಟಿನೆಂಟ್ ಕರ್ನಲ್. ಶಾಹಿದ್ ಸಲೀಮ್ ಜಂಜುವಾ ಅವರು ಇದೀಗ ಭಾರತದ ಭೂಪ್ರದೇಶದ ಜಮ್ಮುವಿನಲ್ಲಿ ದಾಳಿಗಳನ್ನು ನಡೆಸುತ್ತಿದ್ದಾರೆ. 5. ಭಾರತೀಯ ಸೇನೆಯ 15 ಕಾರ್ಪ್ಸ್ ಅನ್ನು ತೊಡಗಿಸಿಕೊಳ್ಳುವುದು ಅವರ ಉದ್ದೇಶ 6. SSG ಯ ಇನ್ನೂ ಎರಡು ಬೆಟಾಲಿಯನ್‌ಗಳು ಮುಜಫರಾಬಾದ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂಲಕ ಭಾರತೀಯ ಪ್ರದೇಶವನ್ನು ಪ್ರವೇಶಿಸಲು ಸಿದ್ಧವಾಗಿವೆ ಎಂದು ಅಮ್ಜದ್ ಅಯೂಬ್ ಮಿರ್ಜಾ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 70-80 ವಿದೇಶಿ ಭಯೋತ್ಪಾದಕರು ಇದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ವರದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇಲ್ಲಿದ್ದಾರೆಂದು ಹೇಳಿವೆ. ಜಮ್ಮು ಪ್ರದೇಶಗಳು ಪೂಂಚ್, ಕಿಶ್ತ್ವಾರ್, ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಕಾಶ್ಮೀರ ಕಣಿವೆಯ ಉತ್ತರ ಭಾಗವಾದ ಕುಪ್ವಾರ, ಹಂದ್ವಾರ ಮತ್ತು ಬಂಡಿಪೋರಾಗಳಲ್ಲಿಯೂ ಉಗ್ರರು ಇದ್ದಾರೆ. ಇದರರ್ಥ ಮುಂಬರುವ ತಿಂಗಳುಗಳಲ್ಲಿ ಭದ್ರತಾ ಪಡೆಗಳು ಸದಾ ಎಚ್ಚರವಾಗಿ ಇರಬೇಕು.

ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸುತ್ತಿರುವ ಈ ಭಯೋತ್ಪಾದಕರು ಹೆಚ್ಚು ತರಬೇತಿ ಪಡೆದಿದ್ದಾರೆ. ಅವರು M4 ಮತ್ತು ಚೈನೀಸ್ A56 ಅಸಾಲ್ಟ್ ರೈಫಲ್ಸ್‌ನಂತಹ ಇತ್ತೀಚಿನ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆ ಬಿಟ್ಟು ಹೋಗಿದ್ದ ಶಸ್ತ್ರಾಸ್ತ್ರಗಳು ಈಗ ಜಮ್ಮು ಮತ್ತು ಕಾಶ್ಮೀರಕ್ಕೆ ತಲುಪಿವೆ ಎಂದು ಅದು ಸೂಚಿಸಿದೆ.

ಇದನ್ನೂ ಓದಿ: Shocking News: ರಸ್ತೆಯಲ್ಲೇ ಬೆತ್ತಲೆಯಾಗಿ ಜಗಳವಾಡಿದ ದಂಪತಿ; ವಿಡಿಯೋ​ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ 

ಒಂದು ಪ್ರಮುಖ ಅಂಶವೆಂದರೆ, ಈ ಭಯೋತ್ಪಾದಕರು ಫೋನ್‌ಗಳಂತಹ ಪತ್ತೆಹಚ್ಚಬಹುದಾದ ತಂತ್ರಜ್ಞಾನವನ್ನು ಬಳಸುತ್ತಿಲ್ಲ. ಈ ಭಯೋತ್ಪಾದಕರು ಅಲ್ಟ್ರಾಸೆಟ್ ಮತ್ತು ರೇಡಿಯೊ ಫ್ರೀಕ್ವೆನ್ಸಿ ಮೆಸೆಂಜರ್ ಅನ್ನು ಬಳಸುತ್ತಿದ್ದಾರೆ. ಅದರ ಸಂವಹನವನ್ನು ಅಡ್ಡಿಪಡಿಸಲು ಸಾಧ್ಯವಿಲ್ಲ, ಅದು ಸಿಮ್ ಕಾರ್ಡ್ ಹೊಂದಿಲ್ಲ. ಈ ಭಯೋತ್ಪಾದಕರು ಬಹಳ ಅಪರೂಪವಾಗಿ ಹಳ್ಳಿಗಳಿಗೆ ಭೇಟಿ ನೀಡುತ್ತಾರೆ ಮತ್ತು ಅಲ್ಲಿನ ಸಾಮಾನ್ಯ ಜನರನ್ನು ಬಳಸುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Mon, 29 July 24

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ