ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡ್ತಾರೆ: ಅಮರ್​ಜಿತ್ ಸಿಂಗ್

ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಾರೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮಾಜಿ ಮುಖ್ಯಸ್ಥ ಅಮರ್​ಜಿತ್ ಸಿಂಗ್ ದುಲಾತ್ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಮಾಡ್ತಾರೆ: ಅಮರ್​ಜಿತ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ
Follow us
|

Updated on: Feb 26, 2023 | 9:04 AM

ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಾರೆ ಎಂದು ಭಾರತೀಯ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಮಾಜಿ ಮುಖ್ಯಸ್ಥ ಅಮರ್​ಜಿತ್ ಸಿಂಗ್ ದುಲಾತ್ ಹೇಳಿದ್ದಾರೆ. ಈ ವರ್ಷಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಕಡೆಗೆ ಶಾಂತಿಯ ಹಸ್ತವನ್ನು ಚಾಚುತ್ತಾರೆ ಎಂದು ನಾನು ಭಾವಿಸುತ್ತೇನೆ ಕಳೆದ ಕೆಲವು ತಿಂಗಳುಗಳಲ್ಲಿ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನೆರೆಯ ದೇಶಕ್ಕೆ ಸಹಾಯ ಮಾಡಿಯೇ ಮಾಡುತ್ತಾರೆ ಎಂದಿದ್ದಾರೆ.

ಭಾರತದ ಹೊಸ ಮಿತ್ರ ಅಮೆರಿಕ ದೂರದಲ್ಲಿದೆ ಮತ್ತು ಪಾಕಿಸ್ತಾನ ತುಂಬಾ ಹತ್ತಿರದಲ್ಲಿದೆ ನಾವು ನಮ್ಮ ಹತ್ತಿರದ ದೇಶಗಳ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಕ್ಷೀಣಿಸುತ್ತಿರುವ ವಿದೇಶಿ ವಿನಿಮಯ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ, ರಾಜಕೀಯ ಅಸ್ಥಿರತೆ ಮತ್ತು ಡಾಲರ್ ಎದುರು ಪಾಕಿಸ್ತಾನಿ ರೂಪಾಯಿಯ ಕುಸಿತದ ಮೌಲ್ಯವು ನೆರೆಯ ಪಾಕಿಸ್ತಾನವನ್ನು ಅಂತರಾರಾಷ್ಟ್ರೀಯ ಹಣಕಾಸು ನಿಧಿಯಿಂದ (IMC) ಹಣಕಾಸಿನ ಪರಿಹಾರ ಪ್ಯಾಕೇಜ್ ಪಡೆಯಲು ಒತ್ತಾಯಿಸಿದೆ.

ಮತ್ತಷ್ಟು ಓದಿ: Economic Survey: ಮೂರು ವರ್ಷದಲ್ಲೇ ಆರ್ಥಿಕತೆ ಕಡಿಮೆ ಬೆಳವಣಿಗೆ: ಎಕನಾಮಿಕ್ ಸರ್ವೆ ಅಂದಾಜು?

ಬಿಕ್ಕಟ್ಟನ್ನು ನಿಭಾಯಿಸುವ ಪಾಕಿಸ್ತಾನದ ಹಳೆಯ ವಿಧಾನವು ಇನ್ನು ಮುಂದೆ ಕಾರ್ಯನಿರ್ವಹಿಸುವುದಿಲ್ಲ, ಆದ್ದರಿಂದ ಭಾರತದೊಂದಿಗೆ ಶಾಂತಿ ಮತ್ತು ವ್ಯಾಪಾರದ ಬಗ್ಗೆ ಮಾತನಾಡಲು ಸಿದ್ಧವಿರಬಹುದು ಎಂದು ನಂಬಲಾಗಿದೆ. ಪಾಕಿಸ್ತಾನ ಪ್ರಸ್ತುತ ಆಳವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ವಿದೇಶಿ ವಿನಿಮಯ ಸಂಗ್ರಹದಲ್ಲಿ ದೇಶವು US$ 3 ಶತಕೋಟಿಗಿಂತ ಕಡಿಮೆ ಹೊಂದಿದೆ. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿಯವರು ನೆರೆಯ ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರುಮಾಡಬಹುದು.

ಈ ವರ್ಷ ಮೋದಿಯವರು ಪಾಕಿಸ್ತಾನವನ್ನು ತೊಂದರೆಯಿಂದ ಹೊರತರುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ, ತಮಗೆ ಯಾವುದೇ ಆಂತರಿಕ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ದುಲಾತ್ ಅವರು ರಾ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ನೆರೆಯ ದೇಶದಲ್ಲಿ ಹಲವು ಗುಪ್ತಚರ ಕಾರ್ಯಾಚರಣೆಗಳನ್ನು ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ