AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಶಾಲೆಯಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿಗಳ ನಡುವೆ ಸಂಘರ್ಷ, ಪರೀಕ್ಷೆ ರದ್ದು

ಸೋಮವಾರ ಪರೀಕ್ಷೆಗಳು ನಡೆಯುತ್ತಿದ್ದಾಗ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲೆಗೆ ಹೋಗಿದ್ದರು. ಇವರನ್ನು ನೋಡಿದ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ನಾಮಾವಳಿ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಪಶ್ಚಿಮ ಬಂಗಾಳದ ಶಾಲೆಯಲ್ಲಿ  ಹಿಜಾಬ್ ವಿವಾದ: ವಿದ್ಯಾರ್ಥಿಗಳ ನಡುವೆ ಸಂಘರ್ಷ, ಪರೀಕ್ಷೆ ರದ್ದು
ಹಿಜಾಬ್ ಧರಿಸಿದ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 23, 2022 | 10:07 PM

Share

ಹಿಜಾಬ್ (Hijab) ಮತ್ತು ನಾಮಾವಳಿ ಧರಿಸುವ ವಿಚಾರದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಹೊಡೆದಾಟದ ನಂತರ ಪಶ್ಚಿಮ ಬಂಗಾಳದ(West Bengal) ಹೌರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆಯುತ್ತಿರುವ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹುಡುಗಿಯರ ಇನ್ನೊಂದು ಗುಂಪು ಹಿಜಾಬ್ ಧರಿಸಿ ಶಾಲೆಗೆ ಬಂದಾಗ ಕೆಲವು ವಿದ್ಯಾರ್ಥಿಗಳು ನಾಮಾವಳಿ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಎರಡು ವಿದ್ಯಾರ್ಥಿ ಗುಂಪುಗಳ ನಡುವಿನ ವಾಗ್ವಾದವು ಮಾರಾಮಾರಿಯಾಗಿ ಉಲ್ಬಣಗೊಂಡಾಗ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರನ್ನು ಕರೆಯಲಾಯಿತು. ಯಾವುದೇ ದೂರು ದಾಖಲಾಗಿಲ್ಲ, ಯಾರಿಗೂ ಗಾಯವಾಗಿಲ್ಲ. ಸೋಮವಾರ ಬೋರ್ಡ್ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದಾಗ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲೆಗೆ ಹೋಗಿದ್ದರು. ಇವರನ್ನು ನೋಡಿದ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ನಾಮಾವಳಿ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಶಾಲಾ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಡ್ರೆಸ್ ಕೋಡ್ ಅನುಸರಿಸುವಂತೆ ಹೇಳಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಮಂಗಳವಾರ ಮತ್ತೆ ಬಾಲಕಿಯರು ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿ ಗಲಾಟೆ ನಡೆಸಿದ್ದಾರೆ. ಶಾಲೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಆಂತರಿಕ ವಿಚಾರ ಎಂದು ಪೊಲೀಸರು ಮೊದಲು ಶಾಲೆಗೆ ಪ್ರವೇಶಿಸಲಿಲ್ಲ. ಆದರೆ ನಂತರ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಒಳಗೆ ಹೋದರು ಎಂದು ಅಧಿಕಾರಿ ಹೇಳಿದರು.

ಪರೀಕ್ಷೆಗಳನ್ನು ರದ್ದುಗೊಳಿಸಿದ್ದು ಜಗಳದಲ್ಲಿ ನಿರತರಾಗಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಮನೆಗೆ ಕಳುಹಿಸಿದ್ದಾರೆ. “ಶಾಲಾ ಅಧಿಕಾರಿಗಳು, ಪೋಷಕರು, ಪೊಲೀಸರು, ಸ್ಥಳೀಯ ಬ್ಲಾಕ್ ಆಡಳಿತ ಮತ್ತು ಶಾಲೆಗಳ ಜಿಲ್ಲಾ ಇನ್ಸ್‌ಪೆಕ್ಟರ್ ಈ ವಿಷಯವನ್ನು ಚರ್ಚಿಸಿ ಶನಿವಾರ ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದು ಅಧಿಕಾರಿ ಹೇಳಿದರು.

ಫೆಬ್ರವರಿಯಲ್ಲಿ ಮುಖ್ಯೋಪಾಧ್ಯಾಯರು ಕೆಲವು ವಿದ್ಯಾರ್ಥಿಗಳಿಗೆ ಹಿಜಾಬ್ ಬದಲಿಗೆ ಶಾಲಾ ಸಮವಸ್ತ್ರವನ್ನು ಧರಿಸಲು ಹೇಳಿದರು ಎಂಬ ವರದಿಗಳ ಮೇಲೆ ಮುರ್ಷಿದಾಬಾದ್‌ನ ಶಾಲೆಯೊಂದರ ಸಿಬ್ಬಂದಿಯ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಕನಿಷ್ಠ 18 ಜನರನ್ನು ಬಂಧಿಸಲಾಯಿತು.

ಮಾಲ್ಡಾದಲ್ಲಿ ಈ ವರ್ಷದ ಆರಂಭದಲ್ಲಿ ಕರ್ತವ್ಯದ ವೇಳೆ ಹಿಜಾಬ್ ಧರಿಸಿದ್ದಕ್ಕಾಗಿ ಮೇಲಧಿಕಾರಿಯೊಬ್ಬರು ಪದೇ ಪದೇ ಕಿರುಕುಳ ನೀಡಿದ್ದರು ಎಂದು ಸರ್ಕಾರಿ ಆರೋಗ್ಯ ಕಾರ್ಯಕರ್ತೆಯೊಬ್ಬರು ದೂರಿದ್ದರು.

Published On - 10:03 pm, Wed, 23 November 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?