Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೆ ಬುಲ್ಡೋಜರ್ ಕ್ರಮ, ಯುಪಿಯಲ್ಲಿ ಹೊಸ ಕಾನೂನು

ಉತ್ತರಪ್ರದೇಶದಲ್ಲಿ ಅಕ್ರಮಗಳಿಗೆ ಜಾಗವೇ ಇಲ್ಲ, ಅಲ್ಲಿರುವುದು ಯೋಗಿ ಸರ್ಕಾರ. ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮದ ಬಗ್ಗೆ ಎಚ್ಚರ ವಹಿಸಲು ಹೊಸ ಕಾನೂನನ್ನು ತಂದಿದೆ. ಈ ಹಿಂದೆ ಮಾಫಿಯಾ, ಕೊಲೆ, ಅತ್ಯಾಚಾರ ಮಾಡಿದವರ ಮೇಲೆ ಮಾತ್ರ ಬುಲ್ಡೋಜರ್ ಕ್ರಮ ತೆಗೆದುಕೊಳ್ಳಲಾಗಿತ್ತು. ಇದೀಗ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುವ ಕಳ್ಳರ ಮೇಲೆಯೂ ಈ ಕ್ರಮವನ್ನು ತೆಗೆದುಕೊಳ್ಳಲಿದೆ. ಇದೀಗ ಮತ್ತೊಮ್ಮೆ ಯುಪಿಯಲ್ಲಿ ಬುಲ್ಡೋಜರ್ ಬಾಬಾ ಸದ್ದು ಮಾಡಲಿದ್ದಾರೆ.

ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೆ ಬುಲ್ಡೋಜರ್ ಕ್ರಮ, ಯುಪಿಯಲ್ಲಿ ಹೊಸ ಕಾನೂನು
ಯೋಗಿ ಆದಿತ್ಯನಾಥ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 24, 2024 | 11:06 AM

ಉತ್ತರಪ್ರದೇಶದಲ್ಲಿ ಪ್ರಶ್ನೆ ಪ್ರತಿಕೆ ಸೂರಿಕೆಯಾದರೆ, ಮತ್ತೆ ಬುಲ್ಡೋಜರ್ ಬಾಬಾ ಸದ್ದು ಮಾಡಲಿದೆ. ಹೌದು ಯೋಗಿ ಆದಿತ್ಯನಾಥ್ (Yogi Adityanath) ಅವರ ಸರ್ಕಾರ , NEET ಮತ್ತು UGC-NET ನಲ್ಲಿ ನಡೆದ ಅಕ್ರಮದ ನಂತರ ಈ ಕ್ರಮವನ್ನು ತೆಗೆದುಕೊಂಡಿದೆ. ಯುಪಿ ಸರ್ಕಾರವು ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾಲ್ವರ್ ಗ್ಯಾಂಗ್​​ಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ತರಲಿದೆ. ಈ ಹೊಸ ಕಾನೂನಿನ ಪ್ರಕಾರ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಪತ್ರಿಕೆಗಳನ್ನು ಹಂಚುವ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಿದೆ. ಇಂತಹ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಭಾರೀ ದಂಡ, ಬುಲ್ಡೋಜರ್ ಕ್ರಮ ಮತ್ತು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಹೇಳಲಾಗಿದೆ.

NEET ಮತ್ತು UGC-NETನಲ್ಲಿ ನಡೆದ ಅಕ್ರಮದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿದ ಕೆಲವೇ ದಿನಗಳ ಬಳಿಕ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈ ಆದೇಶವನ್ನು ನೀಡಿದೆ. ಪರೀಕ್ಷೆಯ ಪ್ರಶ್ನೆ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆಯಾಗಿರುವುದು ಕಂಡುಬಂದಿದೆ ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದಲ್ಲದೆ, NEET ಸಹ ಅಕ್ರಮಗಳ ಆರೋಪದ ಅಡಿಯಲ್ಲಿ ಸ್ಕ್ಯಾನರ್ ಆಗಿದೆ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಯುಪಿ ಸರ್ಕಾರ ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಕಾನೂನನ್ನು ತರುವುದಾಗಿ ಘೋಷಿಸಿದೆ. ಇದರ ಜತೆಗೆ ಪ್ರಶ್ನೆ ಪತ್ರಿಕೆ ಎಣಿಕೆಯನ್ನು ನಿಲ್ಲಿಸಲು ಸರ್ಕಾರ ಹೊಸ ನೀತಿ ತಂದಿದೆ. ಪ್ರತಿ ಪರೀಕ್ಷೆಯ ಶಿಫ್ಟ್ ಕನಿಷ್ಠ ಎರಡು ವಿಭಿನ್ನ ಸೆಟ್ ಪೇಪರ್‌ಗಳನ್ನು ಹೊಂದಿರುತ್ತದೆ. ಪ್ರತ್ಯೇಕ ಏಜೆನ್ಸಿಗಳಿಂದ ಮುದ್ರಿಸಲಾಗುತ್ತದೆ. ಪೇಪರ್ ಕೋಡಿಂಗ್ ಕಾರ್ಯವಿಧಾನಗಳನ್ನು ಹೆಚ್ಚು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತದೆ.

ಸರಕಾರಿ ಪ್ರೌಢಶಾಲೆಗಳು, ಪದವಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಪಾಲಿಟೆಕ್ನಿಕ್‌ಗಳು, ಎಂಜಿನಿಯರಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು, ಪ್ರತಿಷ್ಠಿತ, ಉತ್ತಮ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಪರೀಕ್ಷಾ ಕೇಂದ್ರಗಳಾಗಿ ಗೊತ್ತುಪಡಿಸಲಾಗುತ್ತದೆ. ಈ ಕೇಂದ್ರಗಳು ಸಿಸಿಟಿವಿ ವ್ಯವಸ್ಥೆ ಹಾಗೂ ನಾಲ್ಕು ವಿಭಿನ್ನ ಏಜೆನ್ಸಿಗಳು ನೇಮಕಾತಿ ಪರೀಕ್ಷೆಗಳನ್ನು ನಡೆಸುವ ವಿವಿಧ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ.

ಇದನ್ನೂ ಓದಿ : ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು, ಇಲ್ಲವೇ ಅರ್ಧ ದಿನದ ರಜೆ ಕಡಿತ: ಕೇಂದ್ರ ಸರ್ಕಾರ

ಪರೀಕ್ಷೆ ಬರೆಯಲು 4 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದರೆ ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾಂತೀಯ ನಾಗರಿಕ ಸೇವಾ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಬಹುದು. ಪರೀಕ್ಷೆಯ ನಂತರ ಪ್ರಶ್ನೆ ಪ್ರತಿಕೆಯನ್ನು ತಿದ್ದುವ ಕ್ರಮದಲ್ಲೂ ಬದದಲಾವಣೆಯನ್ನು ತರಲಾಗಿದೆ. OMR ಶೀಟ್‌ಗಳ ಸ್ಕ್ಯಾನಿಂಗ್ ಅನ್ನು ಆಯೋಗ ಮತ್ತು ಮಂಡಳಿಯು ಸ್ವತಃ ನಡೆಸುತ್ತದೆ. ಪ್ರಶ್ನೆ ಪತ್ರಿಕೆಗಳು ರಹಸ್ಯ ಕೋಡ್‌ಗಳು ಮತ್ತು ಗೌಪ್ಯ ಭದ್ರತಾ ವೈಶಿಷ್ಟ್ಯಗಳಾದ ಅನನ್ಯ ಬಾರ್‌ಕೋಡ್‌ಗಳು, QR ಕೋಡ್‌ಗಳು ಮತ್ತು ಪ್ರತಿ ಪುಟದಲ್ಲಿನ ಸರಣಿ ಸಂಖ್ಯೆಗಳನ್ನು ಪತ್ತೆಹಚ್ಚುವಿಕೆಯನ್ನು ಪರಿಶೀಲನೆ ಮಾಡಲಾಗುವುದು.

ಮುದ್ರಣಾಲಯಗಳ ಆಯ್ಕೆಯನ್ನು ಕೂಡ ಅತ್ಯಂತ ಗೌಪ್ಯವಾಗಿ ನಡೆಸಲಾಗುವುದು. ಇನ್ನು ಪ್ರಶ್ನೆ ಪತ್ರಿಕೆ ಮುದ್ರಾಣ ಮಾಡುವ ಮುದ್ರಣಾಲಯಕ್ಕೆ ಭೇಟಿ ನೀಡುವವರನ್ನು ಪರೀಕ್ಷಿಸಲಾಗುವುದು ಮತ್ತು ಅವರ ಕಡ ಗುರುತಿನ ಚೀಟಿಗಳು ಕಡ್ಡಾಯವಾಗಿರುತ್ತವೆ. ಇನ್ನು ಮುದ್ರಣಾಲಯದಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ಯಾಮೆರಾಗಳನ್ನು ಒಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮುದ್ರಣಾಲಯದ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು, ಒಂದು ವರ್ಷದವರೆಗೆ ರೆಕಾರ್ಡಿಂಗ್ ಕೂಡ ಮಾಡಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ