AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ: ಕಾಂಗ್ರೆಸ್​ ಸಂಸದ ಧೀರಜ್ ಸಾಹು ಮನೆಯಲ್ಲಿ 351 ಕೋಟಿ ರೂ. ನಗದು ಬಳಿಕ ಸಿಕ್ಕಿತೇ ಚಿನ್ನಾಭರಣಗಳು?

ಜಾರ್ಖಂಡ್​ನ ಕಾಂಗ್ರೆಸ್​ ಸಂಸದ ಧೀರಜ್ ಸಾಹು(Dheeraj Sahu) ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ನಡೆಸಿದ ದಾಳಿಯಲ್ಲಿ ಇದುವರೆಗೆ 351 ಕೋಟಿ ರೂ. ನಗದು ಪತ್ತೆಯಾಗಿದೆ. ಆದರೆ ಆಭರಣಗಳನ್ನು ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ರಾಂಚಿಯ ರೇಡಿಯಂ ರಸ್ತೆಯಲ್ಲಿರುವ ಧೀರಜ್ ಸಾಹು ಅವರ ಮನೆಯ ಜಮೀನನ್ನು ಅಗೆಯಲು ಆದಾಯ ತೆರಿಗೆ ಇಲಾಖೆ ತಂಡ ಸಿದ್ಧತೆ ನಡೆಸಿದೆ.

ಐಟಿ ದಾಳಿ: ಕಾಂಗ್ರೆಸ್​ ಸಂಸದ ಧೀರಜ್ ಸಾಹು ಮನೆಯಲ್ಲಿ 351 ಕೋಟಿ ರೂ. ನಗದು ಬಳಿಕ ಸಿಕ್ಕಿತೇ ಚಿನ್ನಾಭರಣಗಳು?
ಐಟಿ ದಾಳಿ
Follow us
ನಯನಾ ರಾಜೀವ್
|

Updated on: Dec 13, 2023 | 12:49 PM

ಜಾರ್ಖಂಡ್​ನ ಕಾಂಗ್ರೆಸ್​ ಸಂಸದ ಧೀರಜ್ ಸಾಹು(Dheeraj Sahu) ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ನಡೆಸಿದ ದಾಳಿಯಲ್ಲಿ ಇದುವರೆಗೆ 351 ಕೋಟಿ ರೂ. ನಗದು ಪತ್ತೆಯಾಗಿದೆ. ಆದರೆ ಆಭರಣಗಳನ್ನು ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ರಾಂಚಿಯ ರೇಡಿಯಂ ರಸ್ತೆಯಲ್ಲಿರುವ ಧೀರಜ್ ಸಾಹು ಅವರ ಮನೆಯ ಜಮೀನನ್ನು ಅಗೆಯಲು ಆದಾಯ ತೆರಿಗೆ ಇಲಾಖೆ ತಂಡ ಸಿದ್ಧತೆ ನಡೆಸಿದೆ.

ಧೀರಜ್ ಸಾಹು ಮನೆಯ ಮೇಲೆ ದಾಳಿ ನಡೆಸಿದ ತಂಡ ತನಿಖೆ ಆರಂಭಿಸಿದೆ, ಜಿಯೋ ಸರ್ವೆಲೆನ್ಸ್​ ಸಿಸ್ಟಂ ಯಂತ್ರದ ಮೂಲಕ ಐಟಿ ತಂಡ ಜಮೀನನ್ನು ಶೋಧಿಸುತ್ತಿದೆ. ಮಣ್ಣಿನಡಿಯಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಮತ್ತಿತರೆ ವಸ್ತುಗಳನ್ನು ಯಂತ್ರದ ಮೂಲಕ ಶೋಧಿಸಲಾಗುತ್ತಿದೆ. ದಾಳಿಯ ವೇಳೆ ದೊರೆತ ಅಪಾರ ಸಂಪತ್ತು ಬೆಳಕಿಗೆ ಬಂದ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ನಿರೀಕ್ಷೆಗಳು ಹೆಚ್ಚಿವೆ. ಧೀರಜ್ ಸಾಹು ಅವರ ಮನೆಯ ನೆಲದಡಿಯಲ್ಲಿ ನಿಧಿ ಅಡಗಿರಬಹುದು ಎಂದು ಅವರು ಭಾವಿಸಿದ್ದಾರೆ.

ಇಂದು ಮೂರು ವಾಹನಗಳಲ್ಲಿ 12 ಮಂದಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಲೋಹರ್ಡಗಾದಲ್ಲಿರುವ ಧೀರಜ್ ಸಾಹು ಅವರ ನಿವಾಸಕ್ಕೆ ತನಿಖೆಗಾಗಿ ಆಗಮಿಸಿದ್ದಾರೆ. ಜಿಯೋ ಕಣ್ಗಾವಲು ಯಂತ್ರವನ್ನು ಕೂಡ ತಂದಿದ್ದಾರೆ.

ಮತ್ತಷ್ಟು ಓದಿ: ಧೀರಜ್​ ಸಾಹು ಐಟಿ ಕೇಸ್​: 6ನೇ ದಿನವೂ ಮುಂದುವರೆದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಮೇಜಿನ ಮೇಲೆ ಕಂತೆ ಕಂತೆ ನೋಟುಗಳು ಆಭರಣಗಳು ಅಥವಾ ಇನ್ಯಾವುದೇ ವಸ್ತುಗಳು ನೆಲದಲ್ಲಿ ಅಡಗಿವೆಯೇ ಎಂದು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ತಂಡವು ರಾಂಚಿ ಹಾಗೂ ಧೀರಜ್ ಅವರ ಇತರೆ ಸ್ಥಳಗಳ ಮೇಲೆ ದಾಳಿ ಮಾಡಿವೆ.

ಅಂತರ ಕಾಯ್ದುಕೊಂಡ ಕಾಂಗ್ರೆಸ್​ ಧೀರಜ್ ಸಾಹು ಅವರ ಕುಟುಂಬವು ಮದ್ಯ ತಯಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ ಮತ್ತು ಒಡಿಶಾದಲ್ಲಿ ಕಾರ್ಖಾನೆಗಳನ್ನು ಹೊಂದಿದೆ. ಅಪಾರ ನಗದು ಪತ್ತೆಯಾದ ಬಳಿಕ ಕಾಂಗ್ರೆಸ್​ ಧೀರಜ್​ನಿಂದ ಅಂತರ ಕಾಯ್ದುಕೊಂಡಿದೆ. ಧೀರಜ್ ವ್ಯವಹಾರಕ್ಕೂ ಕಾಂಗ್ರೆಸ್​ಗೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್​ ಹೇಳಿದ್ದಾರೆ.

80 ತಂಡಗಳಿಂದ ದಾಳಿ ಆದಾಯ ತೆರಿಗೆ ಇಲಾಖೆ ತಂಡವು ಡಿಸೆಂಬರ್ 6ರಂದು ತೆರಿಗೆ ವಂಚನೆ ಪ್ರಕರಣದಲ್ಲಿ ಬೌದ್ ಡಿಸ್ಟಿಲಿರಿ ಪ್ರೈವೇಟ್ ಲಿಮಿಟೆಡ್ ಹಾಗೂ ಅದರ ಪ್ರವರ್ತಕರ ವಿರುದ್ಧ ದಾಳಿ ಶುರು ಮಾಡಿತ್ತು. ಆದಾಯ ತೆರಿಗೆ ಇಲಾಖೆ ಹಾಗೂ ಹಲವಾರು ಬ್ಯಾಂಕ್​ಗಳಿಂದ ಸುಮಾರು 80 ತಂಡವನ್ನು ನಿಯೋಜನೆ ಮಾಡಿತ್ತು. ಭದ್ರತಾ ಸಿಬ್ಬಂದಿ, ಚಾಲಕರು ಇತರೆ ಸಿಬ್ಬಂದಿ ಸೇರಿ ಒಟ್ಟು 200 ಮಂದಿ ಇದ್ದಾರೆ. ಸಾಹು ಅವರು 175 ಬ್ಯಾಗ್​ಗಳಲ್ಲಿ ಹಣವನ್ನು ಇಟ್ಟುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ