AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಟಿ ಹಸು ತಳಿ ಅಭಿವೃದ್ಧಿಗಾಗಿ ತಿರುಪತಿ ಗೋಶಾಲೆಯಲ್ಲಿ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರ ಸ್ಥಾಪನೆಗೆ ಅಂಕಿತ: ಏನಿದರ ವಿಶೇಷತೆ?

Centre to promote genetic breed of Cattle: ಜೀನ್ ವರ್ಗಾವಣೆ ಪ್ರಕ್ರಿಯೆಯನ್ನು ವೇಗಗೊಳಿಸಲು ಕೃತಕ ಗರ್ಭಧಾರಣೆ ಮತ್ತು ಭ್ರೂಣ ವರ್ಗಾವಣೆಯಂತಹ ಸುಧಾರಿತ ಸಂತಾನೋತ್ಪತ್ತಿ ತಂತ್ರಜ್ಞಾನಗಳ ಮೇಲೆ ಕೇಂದ್ರವು ಗಮನ ಹರಿಸಲಿದೆ. ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಬಿಡುಗಡೆ ಮಾಡಿದ ಹಣದ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು TTD ಧರ್ಮಾ ರೆಡ್ಡಿ ಹೇಳಿದರು.

ನಾಟಿ ಹಸು ತಳಿ ಅಭಿವೃದ್ಧಿಗಾಗಿ ತಿರುಪತಿ ಗೋಶಾಲೆಯಲ್ಲಿ ಸೆಂಟರ್ ಫಾರ್ ಎಕ್ಸಲೆನ್ಸ್ ಕೇಂದ್ರ ಸ್ಥಾಪನೆಗೆ ಅಂಕಿತ: ಏನಿದರ ವಿಶೇಷತೆ?
ನಾಟಿ ಗೋ ತಳಿ ಅಭಿವೃದ್ಧಿಗಾಗಿ ತಿರುಪತಿ ಗೋಶಾಲೆಯಲ್ಲಿ ಸೆಂಟರ್
Follow us
ಸಾಧು ಶ್ರೀನಾಥ್​
|

Updated on: Oct 18, 2023 | 4:38 PM

ತಿರುಮಲ, ಅಕ್ಟೋಬರ್ 18: ದೇಶಿ ಹಸುವಿನ ತಳಿಗಳ ಅಭಿವೃದ್ಧಿಯಲ್ಲಿ ಟಿಟಿಡಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ನಾಟಿ ಹಸುನಗಳ ಜೆನೆಟಿಕ್ ದಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಮತ್ತು ಟಿಟಿಡಿ ಜಂಟಿಯಾಗಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ಗೋಸಂರಕ್ಷಣಾ ಶಾಲೆಯಲ್ಲಿ (Sri Venkateswara Gosamrakshana Shala) ಉತ್ಕೃಷ್ಟ ಕೇಂದ್ರವನ್ನು ಸ್ಥಾಪಿಸುತ್ತಿದೆ. ಈ ನಿಟ್ಟಿನಲ್ಲಿ ತಿರುಮಲದಲ್ಲಿ ಟಿಟಿಡಿ ಇಒ ಧರ್ಮರೆಡ್ಡಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ತಿರುಮಲದ ಗೋಕುಲಂ ವಿಶ್ರಾಂತಿ ಗೃಹದಲ್ಲಿ ನಿನ್ನೆ ಮಂಗಳವಾರ ನಡೆದ ಪರಿಶೀಲನಾ ಸಭೆಯಲ್ಲಿ ಟಿಟಿಡಿ ಇಒ ಎ.ವಿ. ಧರ್ಮರೆಡ್ಡಿ ( TTD Executive Officer A V Dharma Reddy), ಶ್ರೀಜಾ ಮಹಿಳಾ ಹಾಲು ಉತ್ಪಾದಕರ ಅಧ್ಯಕ್ಷೆ ಶ್ರೀದೇವಿ, ಎನ್‌ಡಿಡಿಬಿ ( National Dairy Development Board -NDDB) ಎಂಡಿ ಡಾ. ದೇವಾನಂದ್ ಅವರು ಟಿಟಿಡಿ ಜೆಇಒ ಸದಾ ಭಾರ್ಗವಿ, ಎಫ್‌ಎ ಮತ್ತು ಸಿಎಒ ಬಾಲಾಜಿ ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಟಿಟಿಡಿ ಇಒ ಶ್ರೀ ಎ.ವಿ.ಧರ್ಮ ರೆಡ್ಡಿ ಮಾತನಾಡಿ, ಮೀನುಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆ ಮೂಲಕ ರೂ. 4614.50 ಲಕ್ಷ ಕಾರ್ಪಸ್ ಫಂಡ್ ಮಂಜೂರಾಗಿದೆ. ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಸನ್ನಿಧಾನದಲ್ಲಿ ದೇಶೀಯ ಹಸುಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಟಿಟಿಡಿ 60 ರಿಂದ 100 ಕೆಜಿ ತುಪ್ಪ ಮತ್ತು ನಾಟಿ ತಳಿಗಳಿಂದ ಮೂರು ಸಾವಿರ ಲೀಟರ್ ಹಾಲು ಉತ್ಪಾದಿಸುವ ಎಲ್ಲಾ ಸೇವೆಗಳಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:  ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನವರಾತ್ರಿ ಬ್ರಹ್ಮೋತ್ಸವ ಈ ಬಾರಿ 2 ಬಾರಿ! ಯಾವ ದಿನ, ಹೇಗೆ ದರ್ಶನ ವಿವರ ಇಲ್ಲಿದೆ

ಜೀನ್ ವರ್ಗಾವಣೆ ಪ್ರಕ್ರಿಯೆಯನ್ನು ವೇಗಗೊಳಿಸಲು ಕೃತಕ ಗರ್ಭಧಾರಣೆ ಮತ್ತು ಭ್ರೂಣ ವರ್ಗಾವಣೆಯಂತಹ ಸುಧಾರಿತ ಸಂತಾನೋತ್ಪತ್ತಿ ತಂತ್ರಜ್ಞಾನಗಳ ಮೇಲೆ ಕೇಂದ್ರವು (centre is to promote a genetic breed of animal) ಗಮನ ಹರಿಸಲಿದೆ. ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ, ಡೈರಿ ಸೇವೆಗಳು ಮತ್ತು ರಾಷ್ಟ್ರೀಯ ಗೋಕುಲ್ ಮಿಷನ್ ಅಡಿಯಲ್ಲಿ ಎನ್‌ಡಿಡಿಬಿ ಬಿಡುಗಡೆ ಮಾಡಿದ ಹಣದ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಧರ್ಮಾ ರೆಡ್ಡಿ ಹೇಳಿದರು. ಟಿಟಿಡಿಯ ಎಸ್ ವಿ ಗೋಸಂರಕ್ಷಣಾ ಸಭಾಂಗಣದಲ್ಲಿ ಈಗಾಗಲೇ ದೇಸಿ ಹಸುಗಳ ಸಂವರ್ಧನೆ ಮತ್ತು ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ