AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾರನ್ನು ಏಪ್ರಿಲ್​ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನ್ಯಾಯಾಲಯ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ  ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavitha) ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ದೆಹಲಿ ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ. ಕವಿತಾರನ್ನು ಏಪ್ರಿಲ್​ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನ್ಯಾಯಾಲಯ
ಕೆ ಕವಿತಾImage Credit source: Scroll.in
ನಯನಾ ರಾಜೀವ್
|

Updated on:Apr 15, 2024 | 10:47 AM

Share

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ  ನ್ಯಾಯಾಲಯ ಸೋಮವಾರ ಬಿಆರ್‌ಎಸ್ ನಾಯಕಿ ಕೆ ಕವಿತಾ(K Kavitha) ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬಿಆರ್​ಎಸ್ ನಾಯಕನನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಮತ್ತು ಪ್ರಸ್ತುತ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಇವರನ್ನು ಬಂಧಿಸಲಾಗಿತ್ತು. ಮಾರ್ಚ್​ 21ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರನ್ನು ಬಂಧಿಸಲಾಗಿತ್ತು.

ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavita) ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.

ವಿಚಾರಣೆ ವೇಳೆ ಇಡಿ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ತನ್ನ ಮೊಬೈಲ್‌ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:42 am, Mon, 15 April 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ