AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Excise Policy Scam: ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್​

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

Excise Policy Scam: ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ ದೆಹಲಿ ಹೈಕೋರ್ಟ್​
ಮನೀಶ್ ಸಿಸೋಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on:Jun 05, 2023 | 2:41 PM

Share

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ(Excise Policy Scam) ಅಕ್ರಮವಾಗಿ ಹಣ ಸಂಗ್ರಹ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿದೆ ಆ ಕಾರಣದಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಾಲಯವು ಸಿಸೋಡಿಯಾ ಅವರನ್ನು ಅವರ ಪತ್ನಿ ಅನುಕೂಲಕರವಾದ ದಿನಗಳಲ್ಲಿ ಭೇಟಿಯಾಗಲು ಅನುಮತಿ ನೀಡಿದೆ.  ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಮನೀಶ್ ಸಿಸೋಡಿಯಾ ಅವರು ತಮ್ಮ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ನಾನು ಒಬ್ಬನೇ ನೋಡಿಕೊಳ್ಳಬೇಕು ಅದಕ್ಕಾಗಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು.

ಆದರೆ ಹೈಕೋರ್ಟ್​ ಅವರ ಅರ್ಜಿಯನ್ನು ನಿರಾಕರಿಸಿದೆ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಆದೇಶ ನೀಡಿದ್ದಾರೆ, ಆದರೆ ಸಿಸೋಡಿಯಾ ಅವರ ಅನುಕೂಲಕ್ಕಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ತಮ್ಮ ಪತ್ನಿಯನ್ನು ಒಂದು ದಿನದ ಮಟ್ಟಿಗೆ ಕಸ್ಟಡಿಯಲ್ಲಿ ಭೇಟಿಯಾಗಲು ಅವಕಾಶ ನೀಡಿದ್ದಾರೆ.

ಮಾರ್ಚ್ 9ರಂದು ಬಂಧಿತರಾಗಿದ್ದ ಸಿಸೋಡಿಯಾ ಅವರು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿಯ ಅಬಕಾರಿ ನೀತಿಯನ್ನು ಎಎಪಿ ಸರ್ಕಾರವು ನವೆಂಬರ್ 2021ರಲ್ಲಿ ಜಾರಿಗೊಳಿಸಿತು. ಭ್ರಷ್ಟಾಚಾರದ ಆರೋಪಗಳ ನಡುವೆ ಕಳೆದ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಈ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ: Excise Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಮೇ 30ರಂದು ನ್ಯಾಯಾಲಯವು ವಜಾಗೊಳಿಸಿತ್ತು, ಅವರು ಪ್ರಭಾವಿ ವ್ಯಕ್ತಿ ಮತ್ತು ಅವರ ವಿರುದ್ಧದ ಆರೋಪಗಳು ಮೇಲೆ ಬೇರೆ ಪರಿಣಾಮವನ್ನು ಉಂಟು ಮಾಡಬಹುದು ಎಂದು ರದ್ದು ಮಾಡುವಂತೆ ಸಿಬಿಐ ಅರ್ಜಿಯನ್ನು ಸಲ್ಲಿಸಿತ್ತು. ಆ ಕಾರಣದಿಂದ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಮತ್ತೆ ಅವರು ಮಧ್ಯಂತರ ಜಾಮೀನುಯನ್ನು ಸಲ್ಲಿಸಿದ್ದರು, ಆದರೆ ಇದೀಗ ಅವರ ಅರ್ಜಿಯನ್ನು ನಿರಾಕರಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:29 pm, Mon, 5 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ