AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ಸೇನಾ ಸಹಭಾಗಿತ್ವ ಹೆಚ್ಚಲಿದೆ; ರಾಜನಾಥ್ ಸಿಂಗ್

India US Relationship: ಸೇನಾ ಕ್ಷೇತ್ರದಲ್ಲಿ ಭಾರತದ ಉದಾರವಾದಿ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಅಮೆರಿಕ ಸದುಪಯೋಗಪಡಿಸಿಕೊಳ್ಳಲಿದೆ. ಎರಡೂ ದೇಶಗಳು ಸೇನಾ ಸಹಭಾಗಿತ್ವವನ್ನು ವರ್ಧಿಸಿಕೊಳ್ಳಲಿವೆ.

ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ಸೇನಾ ಸಹಭಾಗಿತ್ವ ಹೆಚ್ಚಲಿದೆ; ರಾಜನಾಥ್ ಸಿಂಗ್
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್
guruganesh bhat
| Edited By: |

Updated on: Mar 20, 2021 | 2:27 PM

Share

ದೆಹಲಿ: ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕ ದೇಶಗಳು ಸೇನಾ ಸಹಭಾಗಿತ್ವವನ್ನು ವರ್ಧಿಸಿಕೊಳ್ಳಲಿವೆ. ಇಂಡೋ ಫೆಸಿಫಿಕ್ ಸಮುದ್ರ ವಲಯದ ರಕ್ಷಣೆಗೆ ಅಗತ್ಯವಿರುವ ಸೇನಾ ಚಟುವಟಿಕೆಗಳನ್ನು ಜಂಟಿಯಾಗಿ ನಡೆಸಲಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೇನಾ ಕ್ಷೇತ್ರದಲ್ಲಿ ಭಾರತದ ಉದಾರವಾದಿ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಅಮೆರಿಕ ಸದುಪಯೋಗಪಡಿಸಿಕೊಳ್ಳಲಿದೆ. ಭಾರತಕ್ಕೆ ಅಮೆರಿಕದ ಭೌಗೋಳಿಕತೆಗೆ ಸಂಬಂಧಿಸಿದ ಮಾಹಿತಿ ದೊರೆಯಲಿದೆ. ಅಲ್ಲದೇ ಅಮೆರಿಕ ನಿರ್ಮಿಸುವ ಶಸ್ತ್ರಾಸ್ತ್ರಗಳ ಕುರಿತು ಭಾರತಕ್ಕೆ ಲಾಭವಾಗಬಲ್ಲ ಮಾಹಿತಿ ದೊರೆಯಲಿದೆ. ಇಂತಹ ಒಟ್ಟು ಮೂರು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್, ರಕ್ಷಣಾ ಕಾರ್ಯದರ್ಶಿಯಾಗಿ ಭಾರತಕ್ಕೆ ಮೊದಲ ಭೇಟಿ ನೀಡುತ್ತಿದ್ದಾರೆ. ಆಸ್ಟಿನ್ ಮೂರು ದೇಶಗಳ ಪ್ರವಾಸ ಕೈಗೊಂಡಿದ್ದು, ಕೊನೆಯದಾಗಿ ಮಾರ್ಚ್ 19 ರಂದು ಭಾರತಕ್ಕೆ ಆಗಮಿಸಿದ್ದಾರೆ. ಜಪಾನ್ ಹಾಗೂ ದಕ್ಷಿಣ ಕೊರಿಯಾ ಭೇಟಿಯ ಬಳಿಕ ಲಾಯ್ಡ್ ಜೇಮ್ಸ್ ಆಸ್ಟಿನ್ ಭಾರತಕ್ಕೆ ಆಗಮಿಸಿದ್ದಾರೆ. ಭಾರತ ಹಾಗೂ ಅಮೆರಿಕಾ ಸಂಬಂಧ ಬಲಗೊಳಿಸುವ ಜೊತೆಗೆ ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಸಹಕಾರ ಹೆಚ್ಚಿಸುವುದು, ಪೂರ್ವ ಲಡಾಖ್​ನಲ್ಲಿ ಚೀನಾ ತೋರಿರುವ ನಡೆ, ಭಯೋತ್ಪಾದನೆ ಹಾಗೂ ಅಫ್ಘಾನ್ ಶಾಂತಿಯ ಸವಾಲು ಇತ್ಯಾದಿ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭಾರತೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜತೆ ಆಸ್ಟಿನ್​ ಚರ್ಚಿಸಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಯುಎಸ್ ರಕ್ಷಣಾ ಕಾರ್ಯದರ್ಶಿ: ಭಾರತದೊಂದಿಗೆ ಸಂಬಂಧ ಬಲಪಡಿಸಲು ಅಮೆರಿಕ ಉತ್ಸಾಹ

‘ಹಂತಕ’ ಆರೋಪ; ಅಮೆರಿಕಾ ಅಧ್ಯಕ್ಷ ಜೋ ಬೈಡನ್​ಗೆ​ ನೇರಾನೇರ ಚರ್ಚೆಗೆ ಆಹ್ವಾನವಿತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್