AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ಸೇನಾ ಸಹಭಾಗಿತ್ವ ಹೆಚ್ಚಲಿದೆ; ರಾಜನಾಥ್ ಸಿಂಗ್

India US Relationship: ಸೇನಾ ಕ್ಷೇತ್ರದಲ್ಲಿ ಭಾರತದ ಉದಾರವಾದಿ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಅಮೆರಿಕ ಸದುಪಯೋಗಪಡಿಸಿಕೊಳ್ಳಲಿದೆ. ಎರಡೂ ದೇಶಗಳು ಸೇನಾ ಸಹಭಾಗಿತ್ವವನ್ನು ವರ್ಧಿಸಿಕೊಳ್ಳಲಿವೆ.

ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ಸೇನಾ ಸಹಭಾಗಿತ್ವ ಹೆಚ್ಚಲಿದೆ; ರಾಜನಾಥ್ ಸಿಂಗ್
ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್
guruganesh bhat
| Edited By: |

Updated on: Mar 20, 2021 | 2:27 PM

Share

ದೆಹಲಿ: ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕ ದೇಶಗಳು ಸೇನಾ ಸಹಭಾಗಿತ್ವವನ್ನು ವರ್ಧಿಸಿಕೊಳ್ಳಲಿವೆ. ಇಂಡೋ ಫೆಸಿಫಿಕ್ ಸಮುದ್ರ ವಲಯದ ರಕ್ಷಣೆಗೆ ಅಗತ್ಯವಿರುವ ಸೇನಾ ಚಟುವಟಿಕೆಗಳನ್ನು ಜಂಟಿಯಾಗಿ ನಡೆಸಲಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೇನಾ ಕ್ಷೇತ್ರದಲ್ಲಿ ಭಾರತದ ಉದಾರವಾದಿ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಅಮೆರಿಕ ಸದುಪಯೋಗಪಡಿಸಿಕೊಳ್ಳಲಿದೆ. ಭಾರತಕ್ಕೆ ಅಮೆರಿಕದ ಭೌಗೋಳಿಕತೆಗೆ ಸಂಬಂಧಿಸಿದ ಮಾಹಿತಿ ದೊರೆಯಲಿದೆ. ಅಲ್ಲದೇ ಅಮೆರಿಕ ನಿರ್ಮಿಸುವ ಶಸ್ತ್ರಾಸ್ತ್ರಗಳ ಕುರಿತು ಭಾರತಕ್ಕೆ ಲಾಭವಾಗಬಲ್ಲ ಮಾಹಿತಿ ದೊರೆಯಲಿದೆ. ಇಂತಹ ಒಟ್ಟು ಮೂರು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೇಮ್ಸ್ ಆಸ್ಟಿನ್, ರಕ್ಷಣಾ ಕಾರ್ಯದರ್ಶಿಯಾಗಿ ಭಾರತಕ್ಕೆ ಮೊದಲ ಭೇಟಿ ನೀಡುತ್ತಿದ್ದಾರೆ. ಆಸ್ಟಿನ್ ಮೂರು ದೇಶಗಳ ಪ್ರವಾಸ ಕೈಗೊಂಡಿದ್ದು, ಕೊನೆಯದಾಗಿ ಮಾರ್ಚ್ 19 ರಂದು ಭಾರತಕ್ಕೆ ಆಗಮಿಸಿದ್ದಾರೆ. ಜಪಾನ್ ಹಾಗೂ ದಕ್ಷಿಣ ಕೊರಿಯಾ ಭೇಟಿಯ ಬಳಿಕ ಲಾಯ್ಡ್ ಜೇಮ್ಸ್ ಆಸ್ಟಿನ್ ಭಾರತಕ್ಕೆ ಆಗಮಿಸಿದ್ದಾರೆ. ಭಾರತ ಹಾಗೂ ಅಮೆರಿಕಾ ಸಂಬಂಧ ಬಲಗೊಳಿಸುವ ಜೊತೆಗೆ ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಸಹಕಾರ ಹೆಚ್ಚಿಸುವುದು, ಪೂರ್ವ ಲಡಾಖ್​ನಲ್ಲಿ ಚೀನಾ ತೋರಿರುವ ನಡೆ, ಭಯೋತ್ಪಾದನೆ ಹಾಗೂ ಅಫ್ಘಾನ್ ಶಾಂತಿಯ ಸವಾಲು ಇತ್ಯಾದಿ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಭಾರತೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜತೆ ಆಸ್ಟಿನ್​ ಚರ್ಚಿಸಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಯುಎಸ್ ರಕ್ಷಣಾ ಕಾರ್ಯದರ್ಶಿ: ಭಾರತದೊಂದಿಗೆ ಸಂಬಂಧ ಬಲಪಡಿಸಲು ಅಮೆರಿಕ ಉತ್ಸಾಹ

‘ಹಂತಕ’ ಆರೋಪ; ಅಮೆರಿಕಾ ಅಧ್ಯಕ್ಷ ಜೋ ಬೈಡನ್​ಗೆ​ ನೇರಾನೇರ ಚರ್ಚೆಗೆ ಆಹ್ವಾನವಿತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ