AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ

Assembly Polls 2022: ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ.

5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ
ಚುನಾವಣಾ ಆಯೋಗ
TV9 Web
| Edited By: |

Updated on:Dec 29, 2021 | 10:55 AM

Share

ಕೆಲವೇ ದಿನಗಳ ಹಿಂದೆ ಚುನಾವಣಾ ಆಯೋಗದ ಮುಖ್ಯಸ್ಥರು ದೇಶದ ಆರೋಗ್ಯ ಇಲಾಖೆ ಕಾರ್ಯದರ್ಶಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ (5 ರಾಜ್ಯಗಳು)ಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron Variant) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ? ಹೀಗೆ ಹಲವು ವಿಚಾರಗಳನ್ನು ಚರ್ಚಿಸಲು ಸಭೆ ನಡೆದಿತ್ತು. ಈ ಮಧ್ಯೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಆದರೆ ಚುನಾವಣಾ ಆಯೋಗ, ಚುನಾವಣೆಗಳನ್ನು ಮುಂದೂಡಲಾಗದು. ಅದರ ಬದಲು ಬರುವ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ 19 ಲಸಿಕೆ ನೀಡಿಕೆ ವೇಗವನ್ನು ಹೆಚ್ಚಿಸಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬಳಿ ಕೇಳಿದೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಈಗಾಗಲೇ ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನಾ ಭೇಟಿ ನಡೆಸುತ್ತಿದ್ದಾರೆ. ಗೋವಾ ಮತ್ತು ಉತ್ತರಾಖಂಡ ಪ್ರವಾಸದ ಬಳಿಕ ಇವರು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​​ರನ್ನು ಭೇಟಿಯಾಗಿ ದೇಶದ ಕೊರೊನಾ ಸ್ಥಿತಿಗತಿಗಳ ಕುರಿತು ಚರ್ಚೆ ಮಾಡಿದ್ದಾರೆ.  ಇನ್ನೇನು ಚುನಾವಣಾ ಪ್ರಚಾರ ಶುರುವಾಗುತ್ತದೆ. ನಂತರ ಮತದಾನದ ದಿನ, ಮತ ಎಣಿಕೆ ದಿನಗಳಂದು ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರಗಳಲ್ಲಿ ಹೇಗೆ ಸುಧಾರಣೆ ಮಾಡಬಹುದು ಎಂಬುದನ್ನ ಚುನಾವಣಾ ಆಯೋಗ ಮತ್ತು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ. ಆದರೆ ಚುನಾವಣೆಗೂ ಪೂರ್ವ ಇನ್ನಷ್ಟು ವೇಗವಾಗಿ ಕೊರೊನಾ ಲಸಿಕೆ ನೀಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ. ಒಂದೊಂದೇ ರಾಜ್ಯವಾಗಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರವಾಸ ಮಾಡುತ್ತಿದ್ದು, ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರವೇ ಒಂದು ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.  ಈ ಹಿಂದೆ ಒಂದು ಬೂತ್​​ನಲ್ಲಿ ಗರಿಷ್ಠ 1500 ಮತದಾರರು ಮತ ಹಾಕಬಹುದಿತ್ತು. ಅದನ್ನು ಈಗಾಗಲೇ ಚುನಾವಣಾ ಆಯೋಗ 1200ಕ್ಕೆ ಇಳಿಕೆ ಮಾಡಿದೆ.  ಹಾಗೇ, ಮತಗಟ್ಟೆಗಳ ಸಂಖ್ಯೆಯನ್ನು ಏರಿಕೆ ಮಾಡಿದೆ.  ಜನವರಿ ಮೊದಲ ವಾರದಲ್ಲಿ ಮತ್ತೊಮ್ಮೆ ಚುನಾವಣಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

Published On - 10:55 am, Wed, 29 December 21

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್