AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ

Assembly Polls 2022: ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ.

5 ರಾಜ್ಯಗಳ ವಿಧಾನಸಭೆ ಚುನಾವಣೆ ಮುಂದೂಡುವುದು ಅಸಾಧ್ಯ, ಲಸಿಕೆ ನೀಡಿಕೆ ವೇಗ ಹೆಚ್ಚಿಸಿ ಎಂದ ಚುನಾವಣಾ ಆಯೋಗ
ಚುನಾವಣಾ ಆಯೋಗ
TV9 Web
| Updated By: Lakshmi Hegde|

Updated on:Dec 29, 2021 | 10:55 AM

Share

ಕೆಲವೇ ದಿನಗಳ ಹಿಂದೆ ಚುನಾವಣಾ ಆಯೋಗದ ಮುಖ್ಯಸ್ಥರು ದೇಶದ ಆರೋಗ್ಯ ಇಲಾಖೆ ಕಾರ್ಯದರ್ಶಿ, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್​ (5 ರಾಜ್ಯಗಳು)ಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್​ ಸೋಂಕಿನ (Omicron Variant) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ? ಹೀಗೆ ಹಲವು ವಿಚಾರಗಳನ್ನು ಚರ್ಚಿಸಲು ಸಭೆ ನಡೆದಿತ್ತು. ಈ ಮಧ್ಯೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಆದರೆ ಚುನಾವಣಾ ಆಯೋಗ, ಚುನಾವಣೆಗಳನ್ನು ಮುಂದೂಡಲಾಗದು. ಅದರ ಬದಲು ಬರುವ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೊವಿಡ್ 19 ಲಸಿಕೆ ನೀಡಿಕೆ ವೇಗವನ್ನು ಹೆಚ್ಚಿಸಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬಳಿ ಕೇಳಿದೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಈಗಾಗಲೇ ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲನಾ ಭೇಟಿ ನಡೆಸುತ್ತಿದ್ದಾರೆ. ಗೋವಾ ಮತ್ತು ಉತ್ತರಾಖಂಡ ಪ್ರವಾಸದ ಬಳಿಕ ಇವರು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್​ ಭೂಷಣ್​​ರನ್ನು ಭೇಟಿಯಾಗಿ ದೇಶದ ಕೊರೊನಾ ಸ್ಥಿತಿಗತಿಗಳ ಕುರಿತು ಚರ್ಚೆ ಮಾಡಿದ್ದಾರೆ.  ಇನ್ನೇನು ಚುನಾವಣಾ ಪ್ರಚಾರ ಶುರುವಾಗುತ್ತದೆ. ನಂತರ ಮತದಾನದ ದಿನ, ಮತ ಎಣಿಕೆ ದಿನಗಳಂದು ಕೊವಿಡ್​ 19 ನಿಯಂತ್ರಣ ಶಿಷ್ಟಾಚಾರಗಳಲ್ಲಿ ಹೇಗೆ ಸುಧಾರಣೆ ಮಾಡಬಹುದು ಎಂಬುದನ್ನ ಚುನಾವಣಾ ಆಯೋಗ ಮತ್ತು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸದ್ಯ ಉತ್ತರಾಖಂಡ ಮತ್ತು ಗೋವಾದಲ್ಲಿ ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯಗೊಂಡಿದೆ. ಉತ್ತರಪ್ರದೇಶದಲ್ಲಿ ಶೇ.85 ಮತ್ತು ಮಣಿಪುರ-ಪಂಜಾಬ್​​ನಲ್ಲಿ ಶೇ.80ರಷ್ಟು ಸಂಪೂರ್ಣಗೊಂಡಿದೆ. ಆದರೆ ಚುನಾವಣೆಗೂ ಪೂರ್ವ ಇನ್ನಷ್ಟು ವೇಗವಾಗಿ ಕೊರೊನಾ ಲಸಿಕೆ ನೀಡಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ. ಒಂದೊಂದೇ ರಾಜ್ಯವಾಗಿ ಚುನಾವಣಾ ಆಯೋಗದ ಅಧಿಕಾರಿಗಳು ಪ್ರವಾಸ ಮಾಡುತ್ತಿದ್ದು, ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರವೇ ಒಂದು ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ.  ಈ ಹಿಂದೆ ಒಂದು ಬೂತ್​​ನಲ್ಲಿ ಗರಿಷ್ಠ 1500 ಮತದಾರರು ಮತ ಹಾಕಬಹುದಿತ್ತು. ಅದನ್ನು ಈಗಾಗಲೇ ಚುನಾವಣಾ ಆಯೋಗ 1200ಕ್ಕೆ ಇಳಿಕೆ ಮಾಡಿದೆ.  ಹಾಗೇ, ಮತಗಟ್ಟೆಗಳ ಸಂಖ್ಯೆಯನ್ನು ಏರಿಕೆ ಮಾಡಿದೆ.  ಜನವರಿ ಮೊದಲ ವಾರದಲ್ಲಿ ಮತ್ತೊಮ್ಮೆ ಚುನಾವಣಾ ಆಯೋಗದ ಮುಖ್ಯಸ್ಥರು, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಅಪ್ಪು ಇಲ್ಲದೇ ಕಳೆಯಿತು 2 ತಿಂಗಳು; ನೇತ್ರದಾನದ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ರಾಘಣ್ಣ

Published On - 10:55 am, Wed, 29 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ