AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಳಕ್ಕೆ ಕಾರಣವಾಗಲಿದೆಯೇ ರೈತರ ದೆಹಲಿ ಚಲೋ ಚಳವಳಿ

ಪಂಜಾಬ್ ರೈತರ ದೆಹಲಿ ಚಲೊ ಕೊರೊನಾ ಸೋಂಕು ಹೆಚ್ಚಲು ಕಾರಣವಾಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸಾವಿರಾರು ರೈತರು ಒಂದೆಡೆ ಸೇರುವುದನ್ನು ತಡೆಯಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೊರೊನಾ ಹೆಚ್ಚಳಕ್ಕೆ ಕಾರಣವಾಗಲಿದೆಯೇ ರೈತರ ದೆಹಲಿ ಚಲೋ ಚಳವಳಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on:Nov 30, 2020 | 6:25 PM

Share

ದೆಹಲಿ: ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಐದನೇ ದಿನವೂ ಮುಂದುವರೆದಿರುವ ಪಂಜಾಬ್ ರೈತರ ಪ್ರತಿಭಟನೆಯಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ICMRನ ಸೋಂಕುರೋಗ ವಿಭಾಗದ ಮುಖ್ಯಸ್ಥ ಸಮೀರನ್ ಪಂಡಾ, ಸೋಂಕು ಪ್ರಸರಣೆ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿತ್ತು. ಆದರೆ, ರೈತರ ಪ್ರತಿಭಟನೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಲಾಗಿಲ್ಲ. ಒಂದೇ ಕಡೆ ಸಾವಿರಾರು ಜನ ಸೇರಿರುವುದು ಕೊರೊನಾ ಸೋಂಕು ಹರಡಲು ಕಾರಣವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಐಪಿಸಿ 270ರ ಪ್ರಕಾರ ತಡೆಯಬಹುದಿತ್ತು.. ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿರುವ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಕೆ.ಕೆ. ಅಗರ್​ವಾಲ್, ಸಾಂಕ್ರಾಮಿಕ ರೋಗ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವ ಅಧಿಕಾರ ಸರ್ಕಾರದ ಬಳಿಯಿದೆ. ಐಪಿಸಿ 270ರ ಪ್ರಕಾರ ಸ್ಥಳೀಯ ಪೊಲೀಸರು ಸಾಂಕ್ರಾಮಿಕ ರೋಗ ಹೆಚ್ಚಿಸುವ ಪ್ರತಿಭಟನೆಯನ್ನು ತಡೆಯಬಹುದಿತ್ತು. ಎಲ್ಲಾ ಸಮಸ್ಯೆಗಳಿಗೂ ಸರ್ವೋಚ್ಛ ನ್ಯಾಯಾಲಯವೇ ಪರಿಹಾರ ಸೂಚಿಸಲಿ ಎಂದು ಬಯಸುವುದು ತಪ್ಪು’ ಎಂದು ವಿವರಿಸಿದರು.

ಕೊರೊನಾ ನಿಯಂತ್ರಿಸಲು ಇದುವರೆಗೆ ದೆಹಲಿ ಸರ್ಕಾರ ಕೈಗೊಂಡ ಕ್ರಮಗಳು ವ್ಯರ್ಥವಾಗಲಿವೆ. ಮಾರ್ಗಸೂಚಿ ಅನುಸರಿಸಿ ಪ್ರತಿಭಟನೆ ಮಾಡಬಹುದಿತ್ತು. ದೆಹಲಿಯನ್ನೂ ಮೀರಿ, ಇಡೀ ದೇಶಕ್ಕೇ ಕೊರೊನಾ ಹರಡಲು ದೆಹಲಿ ಚಲೋ ಕಾರಣವಾಗಲಿದೆ ಎಂದು AIIMS ನ ಪ್ರಾಧ್ಯಾಪಕ ಸಂಜಯ್ ರೈ ಆತಂಕ ವ್ಯಕ್ತಪಡಿಸಿದರು.

ವಾಯುಮಾಲಿನ್ಯದ ಹೆಚ್ಚಳದಿಂದ ಇತ್ತೀಚಿಗೆ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಎಂದು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ದೆಹಲಿಗೆ ತೆರಳುವ ಮಾರ್ಗಗಳನ್ನೇ ಬಂದ್ ಮಾಡುತ್ತೇವೆ: ಎಚ್ಚರಿಕೆ ನೀಡಿದ ಪಂಜಾಬ್ ರೈತರು

Published On - 6:24 pm, Mon, 30 November 20

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?