AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ

ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ
ಘಟನಾ ಸ್ಥಳದಲ್ಲಿನ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 22, 2023 | 3:21 PM

Share

ಮುಖ್ಯಾಂಶಗಳು

  • ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಎಂಬಲ್ಲಿರು ಪಟಾಕಿ ಗೋದಾಮಿನಲ್ಲಿ ಸ್ಫೋಟ
  • ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 20 ಮಂದಿ ನೌಕರರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ
  • ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ಹೇಳಿದ್ದಾರೆ.

ತಮಿಳುನಾಡಿನ (Tamil Nadu) ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಎಂಬಲ್ಲಿ ಬುಧವಾರ ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ (firecracker godown) ಸಂಭವಿಸಿದ ಸ್ಫೋಟದಲ್ಲಿ (explosion) ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದು 13 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣವನ್ನು ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.ಕಟ್ಟಡ ಕುಸಿದಿದೆ. ಇನ್ನೂ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ. ಈ ಘಟಕವು ಕಾಂಚೀಪುರಂನಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿರುವ ವಝತೋಟ್ಟಂನಲ್ಲಿದೆ. ಘಟಕವು ಮಾನ್ಯ ಪರವಾನಗಿಯನ್ನು ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಡೀ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 20 ಮಂದಿ ನೌಕರರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾಂಚೀಪುರಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಗಾಯಗೊಂಡಿರುವ 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ

ಇದಕ್ಕೂ ಮುನ್ನ ಮಾರ್ಚ್ 16 ರಂದು ಧರ್ಮಪುರಿ ಜಿಲ್ಲೆಯ ಪೆನ್ನಾಗರಂನಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದು ಇಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 22 March 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು