AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ

ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ; 7 ಸಾವು,13 ಮಂದಿಗೆ ಗಾಯ
ಘಟನಾ ಸ್ಥಳದಲ್ಲಿನ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Mar 22, 2023 | 3:21 PM

Share

ತಮಿಳುನಾಡಿನ (Tamil Nadu) ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಎಂಬಲ್ಲಿ ಬುಧವಾರ ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ (firecracker godown) ಸಂಭವಿಸಿದ ಸ್ಫೋಟದಲ್ಲಿ (explosion) ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದು 13 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣವನ್ನು ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಗೋದಾಮಿನಲ್ಲಿದ್ದ ಪಟಾಕಿಗಳು ಭಾರೀ ಸದ್ದಿನಿಂದ ಸಿಡಿದಿವೆ ಎಂದು ಸ್ಥಳೀಯರು ಹೇಳಿದ್ದಾರೆ.ಕಟ್ಟಡ ಕುಸಿದಿದೆ. ಇನ್ನೂ ಸಿಲುಕಿರುವ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ. ಈ ಘಟಕವು ಕಾಂಚೀಪುರಂನಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿರುವ ವಝತೋಟ್ಟಂನಲ್ಲಿದೆ. ಘಟಕವು ಮಾನ್ಯ ಪರವಾನಗಿಯನ್ನು ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಡೀ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 20 ಮಂದಿ ನೌಕರರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾಂಚೀಪುರಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಗಾಯಗೊಂಡಿರುವ 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Manish Sisodia: ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಏಪ್ರಿಲ್ 5ರವರೆಗೆ ನ್ಯಾಯಾಂಗ ಬಂಧನ

ಇದಕ್ಕೂ ಮುನ್ನ ಮಾರ್ಚ್ 16 ರಂದು ಧರ್ಮಪುರಿ ಜಿಲ್ಲೆಯ ಪೆನ್ನಾಗರಂನಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದು ಇಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 22 March 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?