Sign In

By signing in or creating an account, you agree with Associated Broadcasting Company's Terms & Conditions and Privacy Policy.

Stone Quarry Explosion: ತಮಿಳುನಾಡಿನ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಮೂವರ ಶವ ಪತ್ತೆ

ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿ 3 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.

Stone Quarry Explosion: ತಮಿಳುನಾಡಿನ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಫೋಟ, ಮೂವರ ಶವ ಪತ್ತೆ
ತಮಿಳುನಾಡು
Follow us
ನಯನಾ ರಾಜೀವ್
|

Updated on: May 01, 2024 | 12:09 PM

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ(Stone Quarry Explosion) ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ.

ಸುರಕ್ಷತಾ ಅಪಾಯಗಳು ಮತ್ತು ಓವರ್‌ಲೋಡ್ ಟ್ರಕ್‌ಗಳನ್ನು ಒಳಗೊಂಡ ಅನೇಕ ವಿಚಾರಗಳ ಬಗ್ಗೆ ಹಲವು ದಿನಗಳಿಂದ ದೂರು ಬರುತ್ತಿತ್ತು. ಸ್ಫೋಟದ ಮೊದಲು ಕ್ವಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಕಲ್ಲು ಕ್ವಾರಿ ಶಾಶ್ವತವಾಗಿ ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ಓದಿ: International Mine Awareness Day 2024 : ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

ಈ ವರ್ಷದ ಫೆಬ್ರವರಿಯಲ್ಲಿ ವಿರುಧನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 10 ಮಂದಿ ಗಾಯಗೊಂಡಿದ್ದರು.

ಫೆಬ್ರವರಿ 17 ರಂದು ಮಧ್ಯಾಹ್ನ 12.30 ರ ಸುಮಾರಿಗೆ ವಿರುದುನಗರದ ಕುಂಡಯಿರುಪ್ಪು ಗ್ರಾಮದ ಪಟಾಕಿ ತಯಾರಿಕಾ ಘಟಕದ ರಾಸಾಯನಿಕ ಮಿಶ್ರಣ ಕೊಠಡಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ತಮಿಳುನಾಡು ರಸ್ತೆ ಅಪಘಾತ ಗಾಯಗೊಂಡಿದ್ದರು. ನಿಜವಾಗಿ ಖಾಸಗಿ ಬಸ್ಸೊಂದು ಯೆರ್ಕಾಡ್‌ನಿಂದ ಸೇಲಂಗೆ ಪ್ರಯಾಣಿಕರೊಂದಿಗೆ ಹೋಗುತ್ತಿತ್ತು. ಸೇಲಂನ ಯೆರ್ಕಾಡ್ ಘಾಟ್ ರಸ್ತೆಯಲ್ಲಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್