AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ

ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ
ಭಾರತೀಯ ನೌಕಾಪಡೆಯ ಐಎನ್​ಎಸ್ ರಣವೀರ್ ಯುದ್ಧನೌಕೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 18, 2022 | 10:13 PM

Share

ದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್​ಎಸ್ ರಣವೀರ್​ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮುಂಬೈನಲ್ಲಿ ನೌಕಾಪಡೆಯ ಧಕ್ಕೆಯಲ್ಲಿ ನಡೆದಿರುವ ಈ ದುರಂತದಲ್ಲಿ ಮೂವರು ಸಾವನ್ನಪ್ಪಿರುವುದನ್ನು ರಕ್ಷಣಾ ಇಲಾಖೆಯು ಪತ್ರಿಕಾ ಹೇಳಿಕೆಯಲ್ಲಿ ದೃಢಪಡಿಸಿದೆ. ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ನೌಕೆಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ. ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಸಲು ನೌಕಾಪಡೆಯು ವಿಚಾರಣಾ ಆಯೋಗವನ್ನು ರಚಿಸಿದೆ.

ನೌಕಾಪಡೆಯ ಪೂರ್ವ ಕಮಾಂಡ್​ನಲ್ಲಿ ನವೆಂಬರ್ 2021ರಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಐಎನ್​ಎಸ್ ರಣವೀರ್ ತನ್ನ ನಿಯೋಜಿತ ಸಂಚಾರ ಮುಗಿಸಿಕೊಂಡು ಶೀಘ್ರದಲ್ಲಿಯೇ ತನ್ನ ಮೂಲನೆಲೆಗೆ ಮರಳಬೇಕಿತ್ತು. ಘಟನೆಯಲ್ಲಿ 11 ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Video: ಗುಜರಾತ್​ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್​​ನ್ನು ಬೆನ್ನಟ್ಟಿ ಹೋಗಿ, ಮಾದಕ ವಸ್ತುಗಳ ಸಾಗಣೆ ತಡೆದ ಭಾರತೀಯ ನೌಕಾಪಡೆ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ