AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ

ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ಯುದ್ಧನೌಕೆಯಲ್ಲಿ ಸ್ಫೋಟ, ಭಾರತೀಯ ನೌಕಾಪಡೆಯ ಮೂವರು ಯೋಧರು ಹುತಾತ್ಮ
ಭಾರತೀಯ ನೌಕಾಪಡೆಯ ಐಎನ್​ಎಸ್ ರಣವೀರ್ ಯುದ್ಧನೌಕೆ
TV9 Web
| Edited By: |

Updated on: Jan 18, 2022 | 10:13 PM

Share

ದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್​ಎಸ್ ರಣವೀರ್​ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮುಂಬೈನಲ್ಲಿ ನೌಕಾಪಡೆಯ ಧಕ್ಕೆಯಲ್ಲಿ ನಡೆದಿರುವ ಈ ದುರಂತದಲ್ಲಿ ಮೂವರು ಸಾವನ್ನಪ್ಪಿರುವುದನ್ನು ರಕ್ಷಣಾ ಇಲಾಖೆಯು ಪತ್ರಿಕಾ ಹೇಳಿಕೆಯಲ್ಲಿ ದೃಢಪಡಿಸಿದೆ. ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ವಿವರಿಸಿದೆ.

ನೌಕೆಯಲ್ಲಿದ್ದ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು ಎಂದು ರಕ್ಷಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಶಸ್ತ್ರಾಸ್ತ್ರ ಅಥವಾ ಮದ್ದುಗುಂಡುಗಳಿಂದ ಈ ಸ್ಫೋಟ ಸಂಭವಿಸಿಲ್ಲ. ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಸಲು ನೌಕಾಪಡೆಯು ವಿಚಾರಣಾ ಆಯೋಗವನ್ನು ರಚಿಸಿದೆ.

ನೌಕಾಪಡೆಯ ಪೂರ್ವ ಕಮಾಂಡ್​ನಲ್ಲಿ ನವೆಂಬರ್ 2021ರಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಐಎನ್​ಎಸ್ ರಣವೀರ್ ತನ್ನ ನಿಯೋಜಿತ ಸಂಚಾರ ಮುಗಿಸಿಕೊಂಡು ಶೀಘ್ರದಲ್ಲಿಯೇ ತನ್ನ ಮೂಲನೆಲೆಗೆ ಮರಳಬೇಕಿತ್ತು. ಘಟನೆಯಲ್ಲಿ 11 ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Video: ಗುಜರಾತ್​ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್​​ನ್ನು ಬೆನ್ನಟ್ಟಿ ಹೋಗಿ, ಮಾದಕ ವಸ್ತುಗಳ ಸಾಗಣೆ ತಡೆದ ಭಾರತೀಯ ನೌಕಾಪಡೆ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ