AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನ ನವಾನ್​ ಶಹರ್​​ನ ಪೊಲೀಸ್​ ಕ್ಯಾಂಪಸ್​​ನಲ್ಲಿ ನಿಗೂಢ ಸ್ಫೋಟ; ಉಗ್ರರ ಕೈವಾಡದ ಶಂಕೆ

ಪಂಜಾಬ್​​ ರಾಜ್ಯಾದ್ಯಂತ ಕಳೆದ ಕೆಲ ವರ್ಷಗಳಿಂದ ಉಗ್ರರ ಹಾವಳಿ ಗಣನೀಯವಾಗಿ ಹೆಚ್ಚಾಗಿದೆ. ಇದೇ ವರ್ಷ ಆಗಸ್ಟ್​ 8ರಂದು ಅಮೃತ್​ಸರ್​ನ ಒಂದು ಹಳ್ಳಿಯಲ್ಲಿ 5 ಹ್ಯಾಂಡ್​ ಗ್ರೆನೇಡ್​ ಮತ್ತು ಒಂದು ಟಿಫಿನ್​ ಬಾಕ್ಸ್ ಬಾಂಬ್​​ನ್ನುಅಲ್ಲಿನ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದರು.

ಪಂಜಾಬ್​​ನ ನವಾನ್​ ಶಹರ್​​ನ ಪೊಲೀಸ್​ ಕ್ಯಾಂಪಸ್​​ನಲ್ಲಿ ನಿಗೂಢ ಸ್ಫೋಟ; ಉಗ್ರರ ಕೈವಾಡದ ಶಂಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 08, 2021 | 8:07 PM

Share

ಪಂಜಾಬ್​ನ ನವಾನ್​ ಶಹರ್​ನ ಪೊಲೀಸ್​​ ಅಪರಾಧ ತನಿಖಾ ವಿಭಾಗ (CIA)ದ ಠಾಣೆಯ ಕ್ಯಾಂಪಸ್​​ನಲ್ಲಿ ರವಿವಾರ ಸಂಜೆಯ ವೇಳೆ ನಿಗೂಢವಾಗಿ ಸ್ಫೋಟ ಸಂಭವಿಸಿದ್ದಾಗಿ ಪಂಜಾಬ್​​ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸ್ ಆಫೀಸ್​​ನ ಒಳಗೆ ಸ್ಫೋಟಕವನ್ನು ಎಸೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟದ ಪರಿಣಾಮ ಅತ್ಯಂತ ದೊಡ್ಡದಾಗಿ ಶಬ್ದವಾಗಿದೆ. ಅದೃಷ್ಟವಶಾತ್​ ಯಾವುದೇ ಹೆಚ್ಚಿನ ಮಟ್ಟದ ಹಾನಿಯಾಗಿಲ್ಲ. ಯಾರ ಜೀವಕ್ಕೂ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

ಸ್ಫೋಟಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ತನಿಖೆಯನ್ನು ಶುರು ಮಾಡಿದ್ದಾರೆ. ವಿಧಿವಿಜ್ಞಾನ ತಂಡದ ಸಹಾಯವನ್ನೂ ತೆಗೆದುಕೊಂಡಿದ್ದಾರೆ. ಆದರೆ ಈ ಹೊತ್ತಿನವರೆಗೆ ಸ್ಫೋಟದ ಹಿಂದಿನ  ಕಾರಣ, ಸ್ಫೋಟಕವನ್ನು ಪೊಲೀಸ್​ ಕ್ಯಾಂಪಸ್​​ನ ಒಳಗೆ ಎಸೆದವರು ಯಾರು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೂಡ ಪೊಲೀಸರು ನೀಡಿಲ್ಲ.

ಉಗ್ರರ ಉಪಟಳದಲ್ಲಿ ಹೆಚ್ಚಳ ಪಂಜಾಬ್​​ ರಾಜ್ಯಾದ್ಯಂತ ಕಳೆದ ಕೆಲ ವರ್ಷಗಳಿಂದ ಉಗ್ರರ ಹಾವಳಿ ಗಣನೀಯವಾಗಿ ಹೆಚ್ಚಾಗಿದೆ. ಇದೇ ವರ್ಷ ಆಗಸ್ಟ್​ 8ರಂದು ಅಮೃತ್​ಸರ್​ನ ಒಂದು ಹಳ್ಳಿಯಲ್ಲಿ 5 ಹ್ಯಾಂಡ್​ ಗ್ರೆನೇಡ್​ ಮತ್ತು ಒಂದು ಟಿಫಿನ್​ ಬಾಕ್ಸ್ ಬಾಂಬ್​​ನ್ನುಅಲ್ಲಿನ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದರು. ಅದಾದ ಕೆಲವೇ ದಿನಗಳ ಬಳಿಕ ಅಂದರೆ ಅಗಸ್ಟ್​ 20ರಂದು ಪಾಗ್ವಾರದಲ್ಲಿ ಒಂದು ಟಿಫಿನ್​ ಬಾಕ್ಸ್​ ಬಾಂಬ್​, ಎರಡು ಗ್ರನೇಡ್​ಗಳು ಮತ್ತು ಇತರ ಕೆಲವು ಮಾದರಿಯ ಸ್ಫೋಟಕಗಳು ಪತ್ತೆಯಾಗಿತ್ತು. ಅಜ್ನಾಲಾದಿಂದಲೂ ಒಂದು ಟಿಫಿನ್​ ಬಾಕ್ಸ್​ ಬಾಂಬ್​ನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈಗ ನಡೆದ ಸ್ಫೋಟದ ಹಿಂದೆ ಉಗ್ರರ ಕೈವಾಡ ಇದೆಯಾ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಇದು ಭಯೋತ್ಪಾದಕ ಚಟುವಟಿಕೆಯೇ ಆಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ಪ್ರಾದೇಶಿಕ ಭದ್ರತಾ ಸಂವಾದ ಆಯೋಜಿಸಿರುವ ಭಾರತ; ಪಾಕ್​ ತಿರಸ್ಕಾರಕ್ಕೆ ಕೇಂದ್ರ ಸರ್ಕಾರದ ಉತ್ತರವೇನು?

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ