AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನ ನವಾನ್​ ಶಹರ್​​ನ ಪೊಲೀಸ್​ ಕ್ಯಾಂಪಸ್​​ನಲ್ಲಿ ನಿಗೂಢ ಸ್ಫೋಟ; ಉಗ್ರರ ಕೈವಾಡದ ಶಂಕೆ

ಪಂಜಾಬ್​​ ರಾಜ್ಯಾದ್ಯಂತ ಕಳೆದ ಕೆಲ ವರ್ಷಗಳಿಂದ ಉಗ್ರರ ಹಾವಳಿ ಗಣನೀಯವಾಗಿ ಹೆಚ್ಚಾಗಿದೆ. ಇದೇ ವರ್ಷ ಆಗಸ್ಟ್​ 8ರಂದು ಅಮೃತ್​ಸರ್​ನ ಒಂದು ಹಳ್ಳಿಯಲ್ಲಿ 5 ಹ್ಯಾಂಡ್​ ಗ್ರೆನೇಡ್​ ಮತ್ತು ಒಂದು ಟಿಫಿನ್​ ಬಾಕ್ಸ್ ಬಾಂಬ್​​ನ್ನುಅಲ್ಲಿನ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದರು.

ಪಂಜಾಬ್​​ನ ನವಾನ್​ ಶಹರ್​​ನ ಪೊಲೀಸ್​ ಕ್ಯಾಂಪಸ್​​ನಲ್ಲಿ ನಿಗೂಢ ಸ್ಫೋಟ; ಉಗ್ರರ ಕೈವಾಡದ ಶಂಕೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 08, 2021 | 8:07 PM

Share

ಪಂಜಾಬ್​ನ ನವಾನ್​ ಶಹರ್​ನ ಪೊಲೀಸ್​​ ಅಪರಾಧ ತನಿಖಾ ವಿಭಾಗ (CIA)ದ ಠಾಣೆಯ ಕ್ಯಾಂಪಸ್​​ನಲ್ಲಿ ರವಿವಾರ ಸಂಜೆಯ ವೇಳೆ ನಿಗೂಢವಾಗಿ ಸ್ಫೋಟ ಸಂಭವಿಸಿದ್ದಾಗಿ ಪಂಜಾಬ್​​ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪೊಲೀಸ್ ಆಫೀಸ್​​ನ ಒಳಗೆ ಸ್ಫೋಟಕವನ್ನು ಎಸೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟದ ಪರಿಣಾಮ ಅತ್ಯಂತ ದೊಡ್ಡದಾಗಿ ಶಬ್ದವಾಗಿದೆ. ಅದೃಷ್ಟವಶಾತ್​ ಯಾವುದೇ ಹೆಚ್ಚಿನ ಮಟ್ಟದ ಹಾನಿಯಾಗಿಲ್ಲ. ಯಾರ ಜೀವಕ್ಕೂ ಅಪಾಯವಾಗಿಲ್ಲ ಎಂದು ಹೇಳಲಾಗಿದೆ.

ಸ್ಫೋಟಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ತನಿಖೆಯನ್ನು ಶುರು ಮಾಡಿದ್ದಾರೆ. ವಿಧಿವಿಜ್ಞಾನ ತಂಡದ ಸಹಾಯವನ್ನೂ ತೆಗೆದುಕೊಂಡಿದ್ದಾರೆ. ಆದರೆ ಈ ಹೊತ್ತಿನವರೆಗೆ ಸ್ಫೋಟದ ಹಿಂದಿನ  ಕಾರಣ, ಸ್ಫೋಟಕವನ್ನು ಪೊಲೀಸ್​ ಕ್ಯಾಂಪಸ್​​ನ ಒಳಗೆ ಎಸೆದವರು ಯಾರು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೂಡ ಪೊಲೀಸರು ನೀಡಿಲ್ಲ.

ಉಗ್ರರ ಉಪಟಳದಲ್ಲಿ ಹೆಚ್ಚಳ ಪಂಜಾಬ್​​ ರಾಜ್ಯಾದ್ಯಂತ ಕಳೆದ ಕೆಲ ವರ್ಷಗಳಿಂದ ಉಗ್ರರ ಹಾವಳಿ ಗಣನೀಯವಾಗಿ ಹೆಚ್ಚಾಗಿದೆ. ಇದೇ ವರ್ಷ ಆಗಸ್ಟ್​ 8ರಂದು ಅಮೃತ್​ಸರ್​ನ ಒಂದು ಹಳ್ಳಿಯಲ್ಲಿ 5 ಹ್ಯಾಂಡ್​ ಗ್ರೆನೇಡ್​ ಮತ್ತು ಒಂದು ಟಿಫಿನ್​ ಬಾಕ್ಸ್ ಬಾಂಬ್​​ನ್ನುಅಲ್ಲಿನ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದರು. ಅದಾದ ಕೆಲವೇ ದಿನಗಳ ಬಳಿಕ ಅಂದರೆ ಅಗಸ್ಟ್​ 20ರಂದು ಪಾಗ್ವಾರದಲ್ಲಿ ಒಂದು ಟಿಫಿನ್​ ಬಾಕ್ಸ್​ ಬಾಂಬ್​, ಎರಡು ಗ್ರನೇಡ್​ಗಳು ಮತ್ತು ಇತರ ಕೆಲವು ಮಾದರಿಯ ಸ್ಫೋಟಕಗಳು ಪತ್ತೆಯಾಗಿತ್ತು. ಅಜ್ನಾಲಾದಿಂದಲೂ ಒಂದು ಟಿಫಿನ್​ ಬಾಕ್ಸ್​ ಬಾಂಬ್​ನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಈಗ ನಡೆದ ಸ್ಫೋಟದ ಹಿಂದೆ ಉಗ್ರರ ಕೈವಾಡ ಇದೆಯಾ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಇದು ಭಯೋತ್ಪಾದಕ ಚಟುವಟಿಕೆಯೇ ಆಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ಪ್ರಾದೇಶಿಕ ಭದ್ರತಾ ಸಂವಾದ ಆಯೋಜಿಸಿರುವ ಭಾರತ; ಪಾಕ್​ ತಿರಸ್ಕಾರಕ್ಕೆ ಕೇಂದ್ರ ಸರ್ಕಾರದ ಉತ್ತರವೇನು?

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್