AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udaipur Railway Track Blast: ಉದಯಪುರದ ರೈಲ್ವೆ ಹಳಿಯಲ್ಲಿ ಡಿಟೋನೇಟರ್​ ಸ್ಫೋಟ, ತನಿಖೆಗೆ ಆದೇಶಿಸಿದ ಗೆಹ್ಲೋಟ್

ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯಲ್ಲಿ ಡಿಟೋನೇಟರ್ ಸ್ಫೋಟಗೊಂಡಿದ್ದು, ಇದೀಗ ಪ್ರಕರಣದ ತನಿಖೆಯನ್ನು ಎಸ್​ಟಿಎಸ್ ಕೈಗೆತ್ತಿಕೊಂಡಿದೆ.

Udaipur Railway Track Blast: ಉದಯಪುರದ ರೈಲ್ವೆ ಹಳಿಯಲ್ಲಿ ಡಿಟೋನೇಟರ್​ ಸ್ಫೋಟ, ತನಿಖೆಗೆ ಆದೇಶಿಸಿದ ಗೆಹ್ಲೋಟ್
Railway TrackImage Credit source: ANI
TV9 Web
| Updated By: ನಯನಾ ರಾಜೀವ್|

Updated on: Nov 13, 2022 | 6:17 PM

Share

ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯಲ್ಲಿ ಡಿಟೋನೇಟರ್ ಸ್ಫೋಟಗೊಂಡಿದ್ದು, ಇದೀಗ ಪ್ರಕರಣದ ತನಿಖೆಯನ್ನು ಎಸ್​ಟಿಎಸ್ ಕೈಗೆತ್ತಿಕೊಂಡಿದೆ. ಅಸರ್ವಾ -ಉದಯಪುರ ಎಕ್ಸ್​ಪ್ರೆಸ್​ ಈ ಹಳಿಯಲ್ಲಿ ಹಾದುಹೋಗಬೇಕಿತ್ತು, ಕೆವ್ಡಾದ ನಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿರುವ ಸಿಎಂ ಅಶೋಕ್ ಗೆಹ್ಲೋಟ್ , ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಉದಯಪುರ ಅಹಮದಾಬಾದ್ ರೈಲು ಮಾರ್ಗದ ಓಡಾ ರೈಲ್ವೆ ಸೇತುವೆಯಲ್ಲಿ ರೈಲು ಹಳಿಗಳಿಗೆ ಹಾನಿಯಾಗಿರುವ ಘಟನೆ ಆತಂಕಕಾರಿಯಾಗಿದೆ ಎಂದಿದ್ದಾರೆ.

ಸ್ಪೋಟಗೊಂಡ ರಭಸಕ್ಕೆ ರೈಲ್ವೆ ಹಳಿಗಳು ಬಿರುಕುಬಿಟ್ಟಿವೆ. ಈ ಘಟನೆ ನಡೆಯುವ ನಾಲ್ಕು ಗಂಟೆಗೂ ಮೊದಲು ಇದೇ ಮಾರ್ಗದಲ್ಲಿ ರೈಲಯ ಸಾಗಿತ್ತು. ಅದಾದ ಬಳಿಕ ಅಹಮದಾಬಾದ್‌ನಿಂದ ಉದಯ್‌ಪುರಕ್ಕೆ ಬರುತ್ತಿದ್ದ ರೈಲನ್ನು ಡುಂಗರ್‌ಪುರದಲ್ಲಿಯೇ ನಿಲ್ಲಿಸಲಾಗಿತ್ತು.

ಜಿಲ್ಲಾಧಿಕಾರಿ ತಾರಾಚಂದ್ ಮೀನಾ ಈ ಕುರಿತಾಗಿ ಮಾತನಾಡಿದ್ದು, ಸೇತುವೆಯನ್ನು ಡಿಟೋನೇಟರ್ ಮೂಲಕ ಸ್ಫೋಟಿಸುವ ಸಂಚು ಬಯಲಿಗೆ ಬಂದಿದೆ. ಶೀಘ್ರದಲ್ಲೇ ಆರೋಪಿಗಳನ್ನು ಹಿಡಿಯಲಾಗುವುದು ಎಂದು ಹೇಳಿದ್ದಾರೆ.

ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರಿಂದಾಗಿ ಹೊಸ ರೈಲ್ವೇ ಮಾರ್ಗದಲ್ಲಿ ದೊಡ್ಡ ಮಟ್ಟದ ಸಂಚು ತಪ್ಪಿದೆ. ಶನಿವಾರ ರಾತ್ರಿ 10 ಗಂಟೆಯ ವೇಳೆಗೆ ಸ್ಥಳೀಯ ಗ್ರಾಮಸ್ಥರು ಸ್ಪೋಟದ ಸದ್ದು ಕೇಳಿದ್ದರು. ಅದಾದ ಬಳಿಕ ಊರಿನ ಕೆಲ ಗ್ರಾಮಸ್ಥರು ಸ್ಫೋಟಗೊಂಡ ಸ್ಥಳಕ್ಕೆ ಆಗಮಿಸಿದ್ದರು. ಗನ್‌ಪೌಡರ್‌, ಡಿಟೋನೇಟರ್‌ ನೋಡಿದ ಸ್ಥಳೀಯ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಹಳಿ ಮೇಲೆ ಗನ್ ಪೌಡರ್ ಬಿದ್ದಿರುವುದನ್ನು ಊರಿನವರು ನೋಡಿದ್ದಾರೆ.

ಹಲವೆಡೆ ಕಬ್ಬಿಣದ ಹಳಿಗಳು ಮುರಿದು ಹೋಗಿದ್ದವು. ಸೇತುವೆಯ ಮೇಲಿನ ಸಾಲಿನಲ್ಲಿ ನಟ್-ಬೋಲ್ಟ್‌ಗಳು ಕೂಡ ಕಾಣೆಯಾಗಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಹಳಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು ಇಲ್ಲದಿದ್ದರೆ ಪ್ರಾಣಾಪಾಯದ ಅಪಾಯ ಹೆಚ್ಚಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31 ರಂದು ಅಹಮದಾಬಾದ್‌ನ ಅಸರ್ವಾ ರೈಲು ನಿಲ್ದಾಣದಿಂದ ಅಸರ್ವಾ-ಉದೈಪುರ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಸ್ಫೋಟದ ನಂತರ ರೈಲನ್ನು ಡುಂಗರ್‌ಪುರ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ವಿಧ್ವಂಸಕ ಕೃತ್ಯ ಸೇರಿದಂತೆ ಎಲ್ಲಾ ಕೋನಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಹಳಿಗಳನ್ನು ಮರುಸ್ಥಾಪಿಸುವ ಕಾರ್ಯ ನಡೆಯುತ್ತಿದೆ ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಶರ್ಮಾ ತಿಳಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ