AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Chemicals: ಮಹಾರಾಷ್ಟ್ರದ ಭಾರತ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಹಲವರಿಗೆ ಗಾಯ

Maharashtra: ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಒಳಗಿದ್ದವರನ್ನೆಲ್ಲ ರಕ್ಷಣೆ ಮಾಡಿದ್ದಾರೆ.

Bharat Chemicals: ಮಹಾರಾಷ್ಟ್ರದ ಭಾರತ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಹಲವರಿಗೆ ಗಾಯ
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ
TV9 Web
| Edited By: |

Updated on: Jul 04, 2021 | 9:21 AM

Share

ಮಹಾರಾಷ್ಟ್ರದ ಪಾಲ್ಗಾರ್​ ಜಿಲ್ಲೆಯಲ್ಲಿರುವ ಭಾರತ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಶನಿವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳಗಳು, ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಫೋಟದಲ್ಲಿ ಅನೇಕರು ಗಾಯಗೊಂಡಿದ್ದಾಗಿ ವರದಿಯಾಗಿದೆ. ಗಾಯಗೊಂಡವರನ್ನೆಲ್ಲ ತುಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲ್ಗಾರ್​ ಜಿಲ್ಲೆಯ ಬೋಯಿಸರ್​ ತಾರಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಭಾರತ್​ ಕೆಮಿಕಲ್ಸ್​ ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ನಡೆದ ಸ್ಫೋಟದ ಸಾಂಧ್ರತೆ ತೀವ್ರವಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಒಳಗಿದ್ದವರನ್ನೆಲ್ಲ ರಕ್ಷಣೆ ಮಾಡಿದ್ದಾರೆ. ಹಾಗಿದ್ದಾಗ್ಯೂ ಹಲವರು ಗಾಯಗೊಂಡಿದ್ದಾರೆ. ಕೆಲವರು ಉಸಿರಾಡಲಾಗದೆ ಅಸ್ವಸ್ಥರಾಗಿದ್ದಾರೆ. ಪಾಲ್ಗಾರ್​​ನಲ್ಲಿ ಜೂ.17ರಂದು ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟವಾಗಿ ಹಲವರು ಗಾಯಗೊಂಡಿದ್ದರು.

2019ರಲ್ಲಿ ಸ್ಫೋಟ ಪಾಲ್ಗಾರ್​ ಕೈಗಾರಿಕಾ ಪ್ರದೇಶವಾಗಿದ್ದರಿಂದ ಅಲ್ಲಿ ಒಂದಲ್ಲ ಒಂದು ಕಾರ್ಖಾನೆಯಲ್ಲಿ ಪದೇಪದೆ ಸ್ಫೋಟವಾಗುತ್ತಲೇ ಇರುತ್ತದೆ. 2019ರಲ್ಲಿ ವರ್ಷಾ ಆರ್ಗಾನಿಕ್​ ಪ್ರೈವೇಟ್​ ಲಿಮಿಟೆಡ್​ ಕೆಮಿಕಲ್​ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಕೆಲಸಗಾರರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: Karnataka Weather: ಹವಾಮಾನ ವರದಿ- ಮುಂದಿನ 5 ದಿನ ವರುಣನ ಆರ್ಭಟ.. ಕರ್ನಾಟಕ ಸೇರಿ ಅನೇಕ ರಾಜ್ಯದಲ್ಲಿ ಮಳೆ

(Explosion Reported at Bharat Chemicals Factory in Maharashtra)

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ