ತಮಿಳುನಾಡಿನ 2 ಪಟಾಕಿ ಘಟಕಗಳಲ್ಲಿ ಸ್ಫೋಟ: 11 ಮಂದಿ ಸಾವು

ತಮಿಳುನಾಡಿನ ಶಿವಕಾಶಿಯಲ್ಲಿರುವ ಎರಡು ಪಟಾಕಿ ಘಟಕಗಳಲ್ಲಿ ಪಟಾಕಿ ಪರೀಕ್ಷೆ ನಡೆಸುವಾಗ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತಮಿಳುನಾಡಿನ 2 ಪಟಾಕಿ ಘಟಕಗಳಲ್ಲಿ ಸ್ಫೋಟ: 11 ಮಂದಿ ಸಾವು
ಪಟಾಕಿ ಮಾರಾಟ ಮಳಿಗೆಯಲ್ಲಿ ಸ್ಫೋಟ
ರಶ್ಮಿ ಕಲ್ಲಕಟ್ಟ

Updated on: Oct 17, 2023 | 6:09 PM

ಚೆನ್ನೈ ಅಕ್ಚೋಬರ್17: ತಮಿಳುನಾಡಿನ (Tamil Nadu) ಶಿವಕಾಶಿಯ (Sivakasi) ಎರಡು ಪಟಾಕಿ ಚಿಲ್ಲರೆ ಅಂಗಡಿಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ. ಪಟಾಕಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಚಿಲ್ಲರೆ ಮಾರಾಟ ಮಳಿಗೆಗಳು ಮಾನ್ಯ ಪರವಾನಗಿ ಹೊಂದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ₹ 3 ಲಕ್ಷ ಪರಿಹಾರ ಘೋಷಿಸಿದ್ದಾರೆ.


“ಶಿವಕಾಶಿಯ ಪಟಾಕಿ ಘಟಕದಲ್ಲಿ ಹಠಾತ್ ಸ್ಫೋಟದಲ್ಲಿ ಏಳು ಸುಟ್ಟ ದೇಹಗಳನ್ನು ಹೊರ ತೆಗೆದಿದ್ದೇವೆ. ಅವರ ಗುರುತುಗಳನ್ನು ಇನ್ನೂ ಪತ್ತೆ ಹಚ್ಚಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕಾರ್ಮಿಕರು ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಿಬ್ಬಂದಿಯನ್ನು ಸೇವೆಯಲ್ಲಿ ನಿರತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಥಾಣೆಯಲ್ಲಿ ನವರಾತ್ರಿ ಮೆರವಣಿಗೆ ವೇಳೆ ಘರ್ಷಣೆ; ಪಟಾಕಿ ಸಿಡಿದು 4 ಮಂದಿಗೆ ಗಾಯ, ಕಲ್ಲು ತೂರಾಟ

ವಿರುದುನಗರ ಜಿಲ್ಲೆಯಲ್ಲಿ ಮೊದಲ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅದೇ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದ ಮತ್ತೊಂದು ಘಟಕದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಮೊನ್ನೆ ಅಕ್ಟೋಬರ್ 9 ರಂದು ತಮಿಳುನಾಡಿನ ಅರಿಯಲೂರ್ ಜಿಲ್ಲೆಯ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹತ್ತು ಜನರು ಸಾವಿಗೀಡಾಗಿದ್ದರು. ದೀಪಾವಳಿಗೂ ಮುನ್ನ ತಮಿಳುನಾಡಿನ ಕಾರ್ಖಾನೆಗಳಲ್ಲಿ ಪಟಾಕಿ ಉತ್ಪಾದನೆ ಹೆಚ್ಚಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸಪೆರುಮಾಳ್ ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.

ತಮಿಳುನಾಡು ಪಟಾಕಿ ಮತ್ತು ಅಮೋರ್ಸೆಸ್ ತಯಾರಕರ ಸಂಘದ ಸದಸ್ಯರೂ ಆಗಿರುವ ತಯಾರಕರು ದಿ ಹಿಂದೂ ಜೊತೆ ಮಾತನಾಡುತ್ತಾ, ಎಲ್ಲಾ ಮಾನ್ಯತೆ ಪಡೆದ ಘಟಕಗಳಲ್ಲಿ ಉತ್ಪಾದನಾ ಪ್ರಕ್ರಿಯೆಯು ಮುಗಿದಿದೆ ಎಂದು ಹೇಳಿದರು. ದೀಪಾವಳಿ ಹಬ್ಬಕ್ಕೆ ಕೇವಲ ಮೂರು ವಾರಗಳಿರುವಾಗ, ಕೆಲವು ಘಟಕಗಳಲ್ಲಿ, ರವಾನೆಗಾಗಿ ಪ್ಯಾಕಿಂಗ್ ನಡೆಯುತ್ತಿದೆ.

ಘಟಕಕ್ಕೆ ಪರವಾನಗಿ ಇದೆಯೇ ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಅಪಘಾತಕ್ಕೆ ನಿಜವಾದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ವಿರುದುನಗರ ಜಿಲ್ಲೆಯ ಕಂದಾಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Tue, 17 October 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us