ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ಅಮೆರಿಕದಿಂದ ಐರಿಸ್ ಡೇನಾ ಯುದ್ಧನೌಕೆ ನಾಶವಾದ ಘಟನೆಯನ್ನು ಬಳಸಿಕೊಂಡು ಪಾಕಿಸ್ತಾನವು ಭಾರತ-ಇರಾನ್ ನಡುವೆ ಸಂಘರ್ಷ ಹುಟ್ಟುಹಾಕಲು ಯತ್ನಿಸಿದ್ದು ಬಹಿರಂಗವಾಗಿದೆ. ಸುಳ್ಳು ಮಾಹಿತಿ ಹಾಗೂ ಹ್ಯಾಶ್‌ಟ್ಯಾಗ್‌ಗಳ ಮೂಲಕ ಭಾರತದ ವಿರುದ್ಧ ಇರಾನ್‌ಗೆ ಪ್ರಚೋದನೆ ನೀಡಲು ಪಾಕ್ ಕುತಂತ್ರ ನಡೆಸಿತ್ತು. ಭಾರತ ವಿದೇಶಾಂಗ ಸಚಿವಾಲಯವು ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ. ಎರಡೂ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿದೆ. ಪಾಕಿಸ್ತಾನದ ಶಡ್ಯಂತ್ರ ಹೀಗೆ ಬಯಲಾಯಿತು.

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್
ಐರಿಶ್ ಡೇನಾ
Image Credit source: The dawn

Updated on: Mar 20, 2026 | 2:33 PM

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು.

ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ ಇನ್ನೊಂದೆಡೆ ಬಲೂಚಿಸ್ತಾನ ವಿಮೋಚನಾ ತಂಡ ಪಾಕಿಸ್ತಾನದ ವಿರುದ್ಧ ಮುಗಿಬಿದ್ದಿದೆ. ಇನ್ನೊಂದೆಡೆ ವಾಯುನೆಲೆಯನ್ನು ಅಮೆರಿಕಕ್ಕೆ ನೀಡಿದರೆ ಹುಷಾರ್ ಎಂದು ಪಾಕ್​​ಗೆ ಇರಾನ್ ಎಚ್ಚರಿಕೆ ನೀಡಿದೆ.

ಇತ್ತೀಚೆಗೆ ಆಗಿರುವ ಒಪ್ಪಂದದ ಪ್ರಕಾರ, ಸೌದಿ ಅರೇಬಿಯಾ ಯುದ್ಧ ಸನ್ನಿವೇಶದಲ್ಲಿ ಸಿಲುಕಿದಾಗ ಪಾಕ್ ನೆರವು ನೀಡಬೇಕು ಆದರೆ ಅದು ಸಾಧ್ಯವಾಗುತ್ತಿಲ್ಲ. ಒಂದೆಡೆ ರಕ್ಷಣೆಗೆ ಇರಾನ್ ಯುದ್ಧನೌಕೆಗೆ ಭಾರತ ಸರ್ಕಾರವು ರಕ್ಷಣೆ ನೀಡಬೇಕಿತ್ತು ಎನ್ನುವ ದೇಶದಲ್ಲಿನ ಕಾಂಗ್ರೆಸ್ ಆರೋಪದ ನಡುವೆ ಪಾಕಿಸ್ತಾನವು ಈ ಸನ್ನಿವೇಶವನ್ನು ಬಳಸಿಕೊಂಡು ಭಾರತವನ್ನು ಯುದ್ಧದೊಳಗೆ ಸೇರಿಸುವ ಹುನ್ನಾರ ಮಾಡಿತ್ತು. ಹಾಗೆಯೇ ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕುವ ಕುತಂತ್ರವನ್ನು ನಡೆಸಿತ್ತು.

ಇರಾನ್ ಯುದ್ಧನೌಕೆಯನ್ನು ಭಾರತದ ಸಮುದ್ರದ ಗಡಿಯೊಳಗೆ ನಾಶಪಡಿಸಿರಲಿಲ್ಲ, ಹಾಗೆಯೇ ಯಾವುದೇ ಅಂತಾರಾಷ್ಟ್ರೀಯ ನಿಯಮದ ಪ್ರಕಾರವು, ಆ ಯುದ್ಧನೌಕೆಗೆ ಭಾರತವು ರಕ್ಷಣೆ ಕೊಡಬೇಕೆಂದಿರಲಿಲ್ಲ, ಆದಾಗ್ಯೂ ರಕ್ಷಣಾ ಕಾರ್ಯಾಚರಣೆಗೆ ಭಾರತ ನೆರವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಮತ್ತಷ್ಟು ಓದಿ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ: 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!

ಈ ವಿಚಾರವನ್ನು ಭಾರತ ವಿದೇಶಾಂಗ ಸಚಿವಾಲಯವು ಈಗಾಗಲೇ ಸ್ಪಷ್ಟಪಡಿಸಿದೆ. ಆದರೆ ಯುದ್ಧದ ಸಂದರ್ಭದಲ್ಲಿ ಕ್ಷಿಪಣಿಗಳಿಗಿಂತ ವೇಗವಾಗಿ ಸುಳ್ಳು ಮಾಹಿತಿಗಳು ಹರಿದಾಡುತ್ತವೆ. ಆಪರೇಷನ್ ಸಿಂಧೂರ್​ನಿಂದ ಹಿಡಿದು ಇತಿಹಾಸದಲ್ಲಿನ ಹಲವು ಸಂದರ್ಭಗಳಲ್ಲಿ ಪಾಕಿಸ್ತಾನದ ದೊಡ್ಡ ಅಸ್ತ್ರವೇ ಸುಳ್ಳು ಸುದ್ದಿಯಾಗಿದೆ.

ಅಮೆರಿಕ, ಇರಾನ್, ಇಸ್ರೇಲ್ ಯುದ್ಧದ ವಿಚಾರದಲ್ಲಿ ಭಾರತವನ್ನು ಎಳೆದು ತರಲು ಪಾಕಿಸ್ತಾನ ಮತ್ತೆ ಈ ಅಸ್ತ್ರ ಬಳಸಿದೆ. ಇವತ್ತಿನವರೆಗೂ ಭಾರತವು ಇಸ್ರೇಲ್ ಹಾಗೂ ಇರಾನ್ ಜತೆಗೆ ಭಿನ್ನ ವೇಧಿಕೆಯಲ್ಲಿ ಉತ್ತಮವಾದ ಸಂಬಂಧವನ್ನು ಹೊಂದಿದೆ. ಇದು ಪಾಕಿಸ್ತಾನ ಸೇರಿ ಹಲವು ದುಷ್ಟ ಶಕ್ತಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇದನ್ನು ಸಹಿಸದ ಪಾಕಿಸ್ತಾನವು ಐರಿಸ್ ಡೇನಾ ಯುದ್ಧ ನೌಕೆಯ ಪತನದ ಹಿಂದೆ ಭಾರತದ ಹಸ್ತಕ್ಷೇಪವಿದೆ ಎನ್ನುವ ಕಥೆಯೊಂದನ್ನು ಕಟ್ಟಿ ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿತ್ತು. ಹಾಗೆಯೇ ಈ ಸುಳ್ಳು ಸುದ್ದಿಯ ಮೂಲಕ ಭಾರತದ ಮೇಲೆ ಇರಾನ್ ದಾಳಿ ಮಾಡಬೇಕು ಎನ್ನುವುದು ಪಾಕಿಸ್ತಾನದ ಶಡ್ಯಂತ್ರವಾಗಿತ್ತು ಎನ್ನುವುದು ತಿಳಿದುಬಂದಿದೆ.

TacticalTribun ಖಾತೆಯ ಮೂಲಕ ಮಾರ್ಚ್ 4ರಂದು ಇದಕ್ಕೆ ಪೂರಕವಾಗಿ ಸಂದೇಶವೊಂದನ್ನು ಹಾಕಲಾಗಿತ್ತು. ಐರಿಸ್ ಡೇನಾದ ಚಲನೆ ಹಾಗೂ ನಿಖರವಾದ ಸ್ಥಳದ ಮಾಹಿತಿಯನ್ನು ಭಾರತವು ಅಮೆರಿಕದೊಂದಿಗೆ ಹಂಚಿಕೊಂಡಿದೆ. ಎನ್ನುವುದು ಈ ಖಾತೆಯ ಮೂಲಕ ಮಾಡಿದ ಪೋಸ್ಟ್​ನ ಸಾರಾಂಶವಾಗಿತ್ತು.

ಈ ಪೋಸ್ಟ್​ ಅನ್ನು 500ಕ್ಕೂ ಅಧಿಕ ಜನರು ಶೇರ್ ಮಾಡಿದ್ದರು. ಇದಕ್ಕೆ #IndiaBetraysIran ಹ್ಯಾಶ್​​ಟ್ಯಾಗ್ ಮೂಲಕ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಮಾಡುವ ಪ್ರಯತ್ನವೂ ನಡೆದಿತ್ತು. ಸುಮಾರು 500ಕ್ಕೂ ಅಧಿಕ ರೀಲ್​ಪೋಸ್ಟ್​ ಜತೆಗೆ ರಿಪೋಸ್ಟ್​ ಮಾಡಲಾಗಿತ್ತು. ಇದಕ್ಕೆ ಮಿಲಿಯನ್​ಗಟ್ಟಲೆ ವ್ಯೂಸ್ ಕೂಡಾ ಬಂದಿತ್ತು. ಈ ಟ್ರೆಂಡ್​ನಲ್ಲಿ ಕಾರ್ಯನಿರ್ವಹಿಸಿದ ಶೇ.40ಕ್ಕೂ ಅಧಿಕ ಪೋಸ್ಟ್​ಗಳು ಪಾಕ್ ಮೂಲದ್ದಾಗಿತ್ತು, ಇನ್ನುಳಿದ ಕೆಲವು ಮದ್ಯಪ್ರಾಚ್ಯ , ಆಫ್ರಿಕಾ ಹಾಗೂ ಇತರೆ ರಾಷ್ಟ್ರಗಳ ಮೂಲಕ ನಡೆದಿತ್ತು.

ಅಂದಹಾಗೆ ಇದೇನು ಈ ಕುತಂತ್ರಿಗಳ ಮೊದಲ ಪ್ರಯತ್ನವಾಗಿರಲಿಲ್ಲ, ಕೆಲ ದಿನಗಳ ಹಿಂದೆ, ರಾಜನಾಥ್ ಸಿಂಗ್ ಅವರ ಎಐ ವಿಡಿಯೋ ಹಾಕಿ, ಇರಾನ್ ಮೇಲಿನ ದಾಳಿಗೆ ಭಾರತದ ಸಂಪೂರ್ಣ ಬೆಂಬಲವಿದೆ ಎಂಬುವ ರೀತಿ ಬಿಂಬಿಸಲಾಗಿತ್ತು. ಹಾಗೆಯೇ ಇರಾನ್​ ಸರ್ವೋಚ್ಛ ನಾಯಕರಾಗಿದ್ದ ಅಲಿ ಖಮೇಲಿ ಹತ್ಯೆಗೂ ಭಾರತವು ಪ್ರಧಾನಿ ನರೇಂದ್ರ ಮೋದಿ ಮೂಲಕ ಇಸ್ರೇಲ್ ಹಾಗೂ ಅಮೆರಿಕಕ್ಕೆ ಬೆಂಬಲ ಸೂಚಿಸುತ್ತು ಎನ್ನುವಂತೆ ಹೇಳಲಾಗಿತ್ತು.

ಆದರೆ ಈ ಎರಡೂಸುದ್ದಿಗಳ ಬಗ್ಗೆ ಪಿಐಬಿ ಫ್ಯಾಕ್ಟ್​ ಚೆಕ್ ಮೂಲಕ ಸ್ಪಷ್ಟನೆ ನಿಡಿತ್ತು.ಆದರೆ ಐರಿಸ್ ಡೇನಾ ಮೂಲಕ ಮತ್ತೆ ಕುತಂತ್ರ ಮಾಡಲು ಹೋದ ಹಿನ್ನೆಲೆಯಲ್ಲಿ ಈ ಟ್ರೆಂಡ್​ನಲ್ಲಿ ಭಾಗಿಯಾದ ಹಲವು ಖಾತೆಗಳನ್ನು ರದ್ದುಪಡಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us