AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಸೇವಾ ಭಾವ ವ್ಯಕ್ತಪಡಿಸಿ’: ಪ್ರಧಾನಿ ಮೋದಿ ಜನ್ಮದಿನದಂದು ವಿಶೇಷ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮದಿನವನ್ನು ಸೇವಾ ಮತ್ತು ಜನ ಕಲ್ಯಾಣಕ್ಕೆ ಮೀಸಲಿಟ್ಟಿದ್ದಾರೆ. ಹಾಗಾಗಿ ದೇಶಕ್ಕೆ ಸೇವೆ ಸಲ್ಲಿಸಲು ಭಾರತೀಯ ನಾಗರಿಕರನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ‘ನಿಮ್ಮ ಸೇವಾ ಭಾವ ವ್ಯಕ್ತಪಡಿಸಿ’ ಎಂಬ ವಿಶೇಷ ಅಭಿಯಾನವನ್ನು ಬಿಜೆಪಿ ಪ್ರಾರಂಭಿಸಿದೆ. 

‘ನಿಮ್ಮ ಸೇವಾ ಭಾವ ವ್ಯಕ್ತಪಡಿಸಿ’: ಪ್ರಧಾನಿ ಮೋದಿ ಜನ್ಮದಿನದಂದು ವಿಶೇಷ ಅಭಿಯಾನ
ಸೇವಾ ಭಾವ
ಗಂಗಾಧರ​ ಬ. ಸಾಬೋಜಿ
|

Updated on: Sep 16, 2023 | 10:46 PM

Share

ದೆಹಲಿ, ಸೆಪ್ಟೆಂಬರ್​ 16: ಸೆ. 17 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ 73ನೇ ಜನ್ಮದಿನವನ್ನು ಆಚರಿಸಲು ಸಚಿವಾಲಯವು ವಿಶೇಷ ಕಾರ್ಯಗಳನ್ನು ಆಯೋಜಿಸಿದೆ. ಜೊತೆಗೆ ಭಾರತೀಯ ಜನತಾ ಪಕ್ಷವು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪ್ರಧಾನಿ ಮೋದಿ ತಮ್ಮ ಜನ್ಮದಿನವನ್ನು ಸೇವಾ ಮತ್ತು ಜನ ಕಲ್ಯಾಣಕ್ಕೆ ಮೀಸಲಿಟ್ಟಿದ್ದಾರೆ. ಹಾಗಾಗಿ ದೇಶಕ್ಕೆ ಸೇವೆ ಸಲ್ಲಿಸಲು ಭಾರತೀಯ ನಾಗರಿಕರನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ‘ನಿಮ್ಮ ಸೇವಾ ಭಾವ ವ್ಯಕ್ತಪಡಿಸಿ’ (Express your Seva Bhav) ಎಂಬ ವಿಶೇಷ ಅಭಿಯಾನವನ್ನು ಬಿಜೆಪಿ ಪ್ರಾರಂಭಿಸಿದೆ.

ಪ್ರಧಾನಿ ಮೋದಿಯವರ ಜನ್ಮದಿನದ ಸಂದರ್ಭದಲ್ಲಿ, ‘ಸೇವೆಯ ಉಡುಗೊರೆ’ ಆಗಿ ತಮ್ಮ ಸೇವಾ ಭಾವವನ್ನು ವ್ಯಕ್ತಪಡಿಸಬಹುದಾಗಿ. ಅದು ನಮೋ ಆ್ಯಪ್ ಬಳಕೆದಾರರಾಗಿರಬಹುದು, ಕಾರ್ಯಕರ್ತರಾಗಿರಬಹುದು ಅಥವಾ ಇತರೆ ಯಾರುಬೇಕಾದರು ಆಗಿರಬಹುದು.

ಇದನ್ನೂ ಓದಿ: Yashobhoomi: ತಮ್ಮ ಜನ್ಮದಿನದಂದೇ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್​ ಸೆಂಟರ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಈ ಉಡುಗೊರೆ ಭಾರತೀಯರಲ್ಲಿ ಹೆಮ್ಮೆ ಮತ್ತು ಸಾಧನೆಯ ಭಾವವನ್ನು ಹುಟ್ಟುಹಾಕುವುದಲ್ಲದೆ, ರಾಷ್ಟ್ರದ ಸೇವೆಗಾಗಿ ತನ್ನ ಸರ್ವಸ್ವವನ್ನು ಮುಡಿಪಾಗಿಟ್ಟ ನಾಯಕರನ್ನು ಸ್ಮರಿಸಲು ಇದಕ್ಕಿಂತ ಉತ್ತಮವಾದ ದಿನವಿಲ್ಲ.

ನಮೋ ಆಪ್‌ನ ಸಂವಾದಾತ್ಮಕ ಮತ್ತು ಬಳಕೆದಾರ ಸ್ನೇಹಿ ಇಂಟರ್ಫೇಸ್ ಅನ್ನು ಬಳಸಿಕೊಂಡು ಪ್ರತಿಜ್ಞೆ ಮತ್ತು ಸೇವೆಯನ್ನು ದಾಖಲು ಮಾಡಲಾಗುತ್ತದೆ. ಇದು ಪ್ರಗತಿ ಮತ್ತು ಅಭಿವೃದ್ಧಿಗಾಗಿ ಹೊಸ ಭಾರತದ ಸಂಕಲ್ಪವನ್ನು ಬಲಪಡಿಸುವಲ್ಲಿ ಬಹಳ ದೂರ ಕೊಂಡ್ಯೊಯಲಿದೆ.

ಇದನ್ನೂ ಓದಿ: PM Modi’s Birthday; 9 ವರ್ಷದಲ್ಲಿ ಪ್ರಧಾನಿ ಮೋದಿ ತೆಗೆದುಕೊಂಡ 10 ಪ್ರಮುಖ ನಿರ್ಧಾರಗಳು

ನಿಮ್ಮ ಸೇವಾ ಭಾವ ಅಭಿಯಾನದ ಮೂಲಕ ಸೇವಾ ಚಟುವಟಿಕೆಗಳ ಫೋಟೋಗಳನ್ನು ಅಪ್ ಲೋಡ್ ಮಾಡಬಹುದು. 9 ವಿಭಿನ್ನ ಸೇವಾ ಚಟುವಟಿಕೆಗಳಿವೆ. ಸೇವಾ ಚಟುವಟಿಕೆಗಳನ್ನು ಪೂರ್ಣಗೊಳಿಸಿದ ನಂತರ ಪಡೆದ ಬ್ಯಾಡ್ಜ್ ಗಳನ್ನು ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದರೊಂದಿಗೆ ಇತರರನ್ನು ಪ್ರೇರೆಪಿಸಬಹುದಾಗಿದೆ.

9 ವಿಭಿನ್ನ ಸೇವಾ ಚಟುವಟಿಕೆ ಹೀಗಿವೆ

  • ಆತ್ಮನಿರ್ಭರ್
  • ರಕ್ತದಾನ
  • ಮಳೆ ನೀರು ಸಂಗ್ರಹ
  • ಲೀಡಿಂಗ್ ಡಿಜಿಟಲ್ ಇಂಡಿಯಾ
  • ಏಕ್ ಭಾರತ್ ಶ್ರೇಷ್ಠ ಭಾರತ್
  • ಲೈಫ್: ಪ್ರೊ-ಪ್ಲಾನೆಟ್ ಪೀಪಲ್
  • ಸ್ವಚ್ಛ ಭಾರತ
  • ಟಿಬಿ ಮುಕ್ತ ಭಾರತ
  • ಒಕಲ್​ ಫಾರ್​​ ಲೋಕಲ್

ನಮೋ ಆ್ಯಪ್ ಎಂದು ಜನಪ್ರಸಿದ್ಧಿ ಪಡೆದಿರುವ ನರೇಂದ್ರ ಮೋದಿ ಅಪ್ಲಿಕೇಶನ್, ಮಾಹಿತಿ ಮತ್ತು ಸಾಧನೆಗಳ ಸಮಗ್ರ ಭಂಡಾರವಾಗಿದೆ. ಬೆರಳ ತುದಿಯಲ್ಲೇ ಎಲ್ಲವೂ ಸಾಧ್ಯವಿರುವ ಈ ಡಿಜಿಟಲ್ ಯುಗದಲ್ಲಿ, ನಮೋ ಅಪ್ಲಿಕೇಶನ್, ನಿಮ್ಮ ಸ್ಮಾರ್ಟ್ ಸಾಧನದ ಮೂಲಕ ನೇರವಾಗಿ ನಿಮಗೆ ತಲುಪಿಸುತ್ತಿದೆ.

ನಮೋ ಆ್ಯಪ್​​, ರಾಷ್ಟ್ರೀಯ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಸಂಬಂಧಿಸಿದಂತೆ ಜನರನ್ನು ಸಂಪರ್ಕಿಸುವ ಪ್ರಮುಖ ವೇದಿಕೆಗಳಲ್ಲಿ ಒಂದಾಗಿದೆ. ಆ ಮೂಲಕ ಜನರು ತಂತ್ರಜ್ಞಾನ ಮತ್ತು ಅಭಿವೃದ್ಧಿಯ ಭಾಗವಾಗಿದ್ದಾರೆ.

ರಾಷ್ಟ್ರೀಯ ಸುದ್ದಿಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ