AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾ ಗೀಲಾನಿ ಇನ್ನಿಲ್ಲ, ಅವರಿಗೆ 92 ವರ್ಷ ವಯಸ್ಸಾಗಿತ್ತು

ಪ್ರತ್ಯೇಕತಾವಾದಿ ಗುಂಪಿನೊಂದಿಗೆ 27 ವರ್ಷಗಳ ಕಾಲ ಗುರುತಿಸಿಕೊಂಡಿದ್ದ ಗೀಲಾನಿ ಪಾಕಿಸ್ತಾನ, ಅದರ ಸೇನೆಯ ಗುಪ್ತಚರ ವಿಭಾಗ ಮತ್ತು ಐಎಸ್ಐ ಅವರನ್ನು ನಿರ್ಲಕ್ಷಿಸಲು ಆರಂಭಿಸಿದ ನಂತರ ಆ ಆಂದೋಲನವನ್ನು ತೊರೆದಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾ ಗೀಲಾನಿ ಇನ್ನಿಲ್ಲ, ಅವರಿಗೆ 92 ವರ್ಷ ವಯಸ್ಸಾಗಿತ್ತು
ಸಯ್ಯದ್ ಅಲಿ ಶಾ ಗೀಲಾನಿ
TV9 Web
| Edited By: |

Updated on: Sep 02, 2021 | 1:05 AM

Share

ದಶಕಗಳಿಂದ ಕಾಶ್ಮೀರ ಪ್ರತ್ಯೇಕತಾವಾದಿಯಾಗಿ ಗುರುತಿಸಿಕೊಂಡಿದ್ದ ಸಯ್ಯದ್ ಅಲಿ ಶಾ ಗೀಲಾನಿ ಅವರು ನಿಧನ ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರನಲ್ಲಿ ಪ್ರತ್ಯೇಕತಾವಾದ ಆಂದೋಲನದ ಪ್ರಮುಖ ನಾಯಕ 92 ವರ್ಷ ವಯಸ್ಸಿನ ಗೀಲಾನಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಕಳೆದ ವರ್ಷವೇ ರಾಜಕೀಯ ಮತ್ತು ಹುರಿಯತ್​ಗೆ ರಾಜೀನಾಮೆ ಸಲ್ಲಿಸಿದ್ದರು.

‘ಗಿಲಾನಿ ಸಾಹಬ್ ಅವರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಬಹಳಷ್ಟು ವಿಷಯಗಳಿಗೆ ಸಂಬಂಧಿಸಿದಂತೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಅದರೆ ಅವರ ಬದ್ಧತೆ ಮತ್ತು ತಮ್ಮ ನಿಲುವುಗಳಿಗೆ ಅಚಲರಾಗಿರುತ್ತಿದ್ದ ಕಾರಣಕ್ಕೆ ಅವರನ್ನು ಗೌರವಿಸುತ್ತಿದ್ದೆ. ಅಲ್ಲಾಹ್ ಅವರಿಗೆ ಜನ್ನತ್ ಅನ್ನು ದಯಪಾಲಿಸಲಿ. ಅವರ ಕುಟುಂಬದ ಸದಸ್ಯರು ಮತ್ತು ಹಿತೈಷಿಗಳಿಗೆ ಸಂತಾಪಗಳನ್ನು ಸೂಚಿಸುತ್ತೇನೆ,’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೆ ಮಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.

ಪ್ರತ್ಯೇಕತಾವಾದಿ ಗುಂಪಿನೊಂದಿಗೆ 27 ವರ್ಷಗಳ ಕಾಲ ಗುರುತಿಸಿಕೊಂಡಿದ್ದ ಗೀಲಾನಿ ಪಾಕಿಸ್ತಾನ, ಅದರ ಸೇನೆಯ ಗುಪ್ತಚರ ವಿಭಾಗ ಮತ್ತು ಐಎಸ್ಐ ಅವರನ್ನು ನಿರ್ಲಕ್ಷಿಸಲು ಆರಂಭಿಸಿದ ನಂತರ ಆ ಆಂದೋಲನವನ್ನು ತೊರೆದಿದ್ದರು.

ಕಾಶ್ಮೀರ ಕಣಿವೆಯ ಅತಿ ದೊಡ್ಡ ಪ್ರತ್ಯೇಕತಾವಾದಿ ಒಕ್ಕೂಟದಿಂದ ದೂರ ಸರಿದ ನಂತರ ಗೀಲಾನಿ ತಮ್ಮ ವಿರುದ್ಧ ಕುತಂತ್ರ ನಡೆಸಲಾಗಿತ್ತು ಅಂತ ದೂರಿದ್ದರಲ್ಲದೆ ಜಮ್ಮು ಮತ್ತು ಕಾಶ್ಮೀರಗೆ ದೊರಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಪ್ರತ್ಯೇಕತಾವಾದಿ ಚಳುವಳಿಯನ್ನು ತೀವ್ರಗೊಳಿಸಲು ವಿಫಲಗೊಂಡಿದ್ದಕ್ಕೆ ಅದರ ನಾಯಕರನ್ನು ತೀವ್ರವಾಗಿ ಖಂಡಿಸಿದ್ದರು.

ಇದನ್ನೂ ಓದಿ:  ಜಮ್ಮು ಮತ್ತು ಕಾಶ್ಮೀರದ ಜನರು ತಾಳ್ಮೆ ಕಳೆದುಕೊಂಡರೆ ನೀವು ಇಲ್ಲದಂತಾಗುತ್ತೀರಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ಎಚ್ಚರಿಕೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ