AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರ ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾ ಗೀಲಾನಿ ಇನ್ನಿಲ್ಲ, ಅವರಿಗೆ 92 ವರ್ಷ ವಯಸ್ಸಾಗಿತ್ತು

ಪ್ರತ್ಯೇಕತಾವಾದಿ ಗುಂಪಿನೊಂದಿಗೆ 27 ವರ್ಷಗಳ ಕಾಲ ಗುರುತಿಸಿಕೊಂಡಿದ್ದ ಗೀಲಾನಿ ಪಾಕಿಸ್ತಾನ, ಅದರ ಸೇನೆಯ ಗುಪ್ತಚರ ವಿಭಾಗ ಮತ್ತು ಐಎಸ್ಐ ಅವರನ್ನು ನಿರ್ಲಕ್ಷಿಸಲು ಆರಂಭಿಸಿದ ನಂತರ ಆ ಆಂದೋಲನವನ್ನು ತೊರೆದಿದ್ದರು.

ಕಾಶ್ಮೀರ ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾ ಗೀಲಾನಿ ಇನ್ನಿಲ್ಲ, ಅವರಿಗೆ 92 ವರ್ಷ ವಯಸ್ಸಾಗಿತ್ತು
ಸಯ್ಯದ್ ಅಲಿ ಶಾ ಗೀಲಾನಿ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 02, 2021 | 1:05 AM

Share

ದಶಕಗಳಿಂದ ಕಾಶ್ಮೀರ ಪ್ರತ್ಯೇಕತಾವಾದಿಯಾಗಿ ಗುರುತಿಸಿಕೊಂಡಿದ್ದ ಸಯ್ಯದ್ ಅಲಿ ಶಾ ಗೀಲಾನಿ ಅವರು ನಿಧನ ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರನಲ್ಲಿ ಪ್ರತ್ಯೇಕತಾವಾದ ಆಂದೋಲನದ ಪ್ರಮುಖ ನಾಯಕ 92 ವರ್ಷ ವಯಸ್ಸಿನ ಗೀಲಾನಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಕಳೆದ ವರ್ಷವೇ ರಾಜಕೀಯ ಮತ್ತು ಹುರಿಯತ್​ಗೆ ರಾಜೀನಾಮೆ ಸಲ್ಲಿಸಿದ್ದರು.

‘ಗಿಲಾನಿ ಸಾಹಬ್ ಅವರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಬಹಳಷ್ಟು ವಿಷಯಗಳಿಗೆ ಸಂಬಂಧಿಸಿದಂತೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಅದರೆ ಅವರ ಬದ್ಧತೆ ಮತ್ತು ತಮ್ಮ ನಿಲುವುಗಳಿಗೆ ಅಚಲರಾಗಿರುತ್ತಿದ್ದ ಕಾರಣಕ್ಕೆ ಅವರನ್ನು ಗೌರವಿಸುತ್ತಿದ್ದೆ. ಅಲ್ಲಾಹ್ ಅವರಿಗೆ ಜನ್ನತ್ ಅನ್ನು ದಯಪಾಲಿಸಲಿ. ಅವರ ಕುಟುಂಬದ ಸದಸ್ಯರು ಮತ್ತು ಹಿತೈಷಿಗಳಿಗೆ ಸಂತಾಪಗಳನ್ನು ಸೂಚಿಸುತ್ತೇನೆ,’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೆ ಮಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.

ಪ್ರತ್ಯೇಕತಾವಾದಿ ಗುಂಪಿನೊಂದಿಗೆ 27 ವರ್ಷಗಳ ಕಾಲ ಗುರುತಿಸಿಕೊಂಡಿದ್ದ ಗೀಲಾನಿ ಪಾಕಿಸ್ತಾನ, ಅದರ ಸೇನೆಯ ಗುಪ್ತಚರ ವಿಭಾಗ ಮತ್ತು ಐಎಸ್ಐ ಅವರನ್ನು ನಿರ್ಲಕ್ಷಿಸಲು ಆರಂಭಿಸಿದ ನಂತರ ಆ ಆಂದೋಲನವನ್ನು ತೊರೆದಿದ್ದರು.

ಕಾಶ್ಮೀರ ಕಣಿವೆಯ ಅತಿ ದೊಡ್ಡ ಪ್ರತ್ಯೇಕತಾವಾದಿ ಒಕ್ಕೂಟದಿಂದ ದೂರ ಸರಿದ ನಂತರ ಗೀಲಾನಿ ತಮ್ಮ ವಿರುದ್ಧ ಕುತಂತ್ರ ನಡೆಸಲಾಗಿತ್ತು ಅಂತ ದೂರಿದ್ದರಲ್ಲದೆ ಜಮ್ಮು ಮತ್ತು ಕಾಶ್ಮೀರಗೆ ದೊರಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಪ್ರತ್ಯೇಕತಾವಾದಿ ಚಳುವಳಿಯನ್ನು ತೀವ್ರಗೊಳಿಸಲು ವಿಫಲಗೊಂಡಿದ್ದಕ್ಕೆ ಅದರ ನಾಯಕರನ್ನು ತೀವ್ರವಾಗಿ ಖಂಡಿಸಿದ್ದರು.

ಇದನ್ನೂ ಓದಿ:  ಜಮ್ಮು ಮತ್ತು ಕಾಶ್ಮೀರದ ಜನರು ತಾಳ್ಮೆ ಕಳೆದುಕೊಂಡರೆ ನೀವು ಇಲ್ಲದಂತಾಗುತ್ತೀರಿ: ಕೇಂದ್ರಕ್ಕೆ ಮೆಹಬೂಬಾ ಮುಫ್ತಿ ಎಚ್ಚರಿಕೆ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ