AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ: 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯ

ಗಡಿ ವಿಚಾರವಾಗಿ ಬಾಲಬಿಚ್ಚಿದ ಚೀನಾ ಸೇನೆ ಭಾರತ ಗಡಿಪ್ರವೇಶ ಮಾಡಿದ್ದು, ಇದಕ್ಕೆ ಭಾರತೀಯ ಸೇನೆ ಸಹ ಪ್ರತಿರೋಧ ಒಡ್ಡಿ ಚೀನಾ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ. ಆದ್ರೆ, ಘಟನೆಯಲ್ಲಿ ಉಭಯ ದೇಶದ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ: 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯ
ಭಾರತ-ಚೀನಾ ಗಡಿಯಲ್ಲಿ ಮತ್ತೆ ಘರ್ಷಣೆ
TV9 Web
| Edited By: |

Updated on: Dec 12, 2022 | 8:17 PM

Share

ಗಡಿಯಲ್ಲಿ ಭಾರತದ ಪ್ರದೇಶವನ್ನು ಅತಿಕ್ರಮಣದ ಮೂಲಕ ಸ್ವಾಧೀನಕ್ಕೆ ತೆಗೆದುಕೊಳ್ಳಲು ಸದಾ ಹವಣಿಸುತ್ತಲೇ ಇರುವ ಚೀನಾ ಮತ್ತೆ ಉಪಟಳ ಮುಂದುವರಿಸಿದೆ. ಗಡಿಯಲ್ಲಿ ಭಾರತ-ಚೀನಾ ಯೋಧರ(Indian, Chinese troops) ನಡುವೆ ಮತ್ತೆ ಘರ್ಷಣೆಯಾಗಿದ್ದು, ಘಟನೆಯಲ್ಲಿ ಉಭಯ ದೇಶಗಳ 30ಕ್ಕೂ ಹೆಚ್ಚು ಸೇನಾ ಯೋಧರಿಗೆ ಗಾಯಗಳಾಗಿವೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಗಲಾಟೆ ನಡೆದ ಬಗ್ಗೆ ಭಾರತೀಯ ಸೇನೆ (Indian Army) ದೃಢಪಡಿಸಿದೆ.

ಅರುಣಾಚಲ ಪ್ರದೇಶದಲ್ಲಿ ಭಾರತ-ಚೀನಾ ಗಡಿ ಭಾಗ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಡಿಸೆಂಬರ್​ 9ರಂದು ಶುಕ್ರವಾರ ತಡರಾತ್ರಿ ಚೀನಾ ಹಾಗೂ ಭಾರತೀಯ ಸೇನಾ ಯೋಧರ ನಡುವೆ ಸಂಘರ್ಷ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘರ್ಷಣೆಯಲ್ಲಿ ಭಾರತ ಹಾಗೂ ಚೀನಾ ದೇಶದ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಈ ಗಲಾಟೆ ನಡೆದ ಬಳಿಕ ಉಭಯ ದೇಶದ ಸೇನಾಧಿಕಾರಿಗಳು ಫ್ಲ್ಯಾಗ್ ಮೀಟಿಂಗ್ ನಡೆಸಿ ಶಾಂತಿ  ಕಾಪಾಡಲು ತೀರ್ಮಾನಿಸಿದ್ದಾರೆ.

ನಿತ್ಯ ನಡೆಯುವ ಗಸ್ತು ವೇಳೆ ಚೀನಾ ಸೇನೆ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿರುವ ಭಾರತದ ಗಡಿ ಪ್ರವೇಶಿಸಿದೆ. ಇದಕ್ಕೆ ಭಾರತೀಯ ಸೇನಾಪಡೆ ತೀವ್ರ ಆಕ್ಷೇಪಿಸಿದೆ. ಈ ವೇಳೆ ಭಾರತ, ಚೀನಾ ಸೇನಾ ಯೋಧರ ನಡುವೆ ತಳ್ಳಾಟ, ನೂಕಾಟ ನಡೆದಿದ್ದು, ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಬಳಿಕ ಭಾರತೀಯ ಯೋಧರು ತಕ್ಕ ತಿರುಗೇಟು ಕೊಟ್ಟಿದ್ದರಿಂದ ಚೀನಾ ಸೇನೆ ಗಡಿಯಿಂದ ಕಾಲ್ಕಿತ್ತಿದೆ. ಈ ಮೂಲಕ ಭಾರತ ಸೇನೆ, ಚೀನಾ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!