AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ. ‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು […]

ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 03, 2020 | 4:08 PM

Share

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ.

‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು ನಮ್ಮ ಪ್ಲಾಟ್​ಫಾರ್ಮ್ ಉಪಯೋಗಿಸಿರುವುದಕ್ಕೆ ರಾಜಾ ಸಿಂಗ್ ಅವರನ್ನು ನಿಷೇಧಿಸಲಾಗಿದೆ,’’ ಎಂದು ಸದರಿ ಬಾತ್ಮೀದಾರ ತಮ್ಮ ಈಮೇಲ್ ಸ್ಟೇಟ್​ಮೆಂಟ್​ನಲ್ಲಿ ಹೇಳಿದ್ದಾರೆ.

ಸುಮಾರು 30 ಕೋಟಿ ಭಾರತೀಯ ಬಳಕೆದಾರರನ್ನು ಹೊಂದಿರುವ ಫೇಸ್​ಬುಕ್​ಗೆ ಭಾರತವೇ ಅತಿದೊಡ್ಡ ಮಾರ್ಕೆಟ್. ಇತ್ತೀಚಿಗೆ ಅಮೆರಿಕಾದ ವಾಲ್ ಸ್ಟ್ರೀಟ್ ಜರ್ನಲ್​ನಲ್ಲಿ ಪ್ರಕಟವಾದ ವರದಿಯೊಂದು, ಭಾರತದ ಫೇಸ್​ಬುಕ್ ಆಡಳಿತ ಪಕ್ಷದ ಪರವಾಗಿದೆ ಎಂದು ಆರೋಪಿಸಿದ ನಂತರ ಅದರ ಮೇಲೆ ಒತ್ತಡ ಜಾಸ್ತಿಯಾಗಿತ್ತು.

ರಾಜಾ ಸಿಂಗ್ ಅವರ ದ್ವೇಷ ಕಾರುವ ಪೋಸ್ಟ್​ಗಳನ್ನು ಫೇಸ್​ಬುಕ್ ನಿರ್ಲಕ್ಷಿಸಿದೆ ಎಂದು ಸಹ ವರದಿಯಲ್ಲಿ ಅರೋಪಿಸಲಾಗಿತ್ತು. ಈ ವರದಿಯ ನಂತರ, ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ಶುರುವಾಗಿದ್ದು ಮಾಹಿತಿ ತಂತ್ರಜ್ಞಾನದ ಸಂಸತ್ ಸಮಿತಿಯು ಭಾರತದ ಫೇಸ್​ಬುಕ್ ಪ್ರತಿನಿಧಿಗಳೊಂದಿಗೆ ಬುಧವಾರದಂದು ಸಭೆ ನಡೆಸಿ ಅದರ ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿರುವ ಬಗ್ಗೆ ಚರ್ಚಿಸಿತ್ತು.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ