AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ. ‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು […]

ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 03, 2020 | 4:08 PM

Share

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ.

‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು ನಮ್ಮ ಪ್ಲಾಟ್​ಫಾರ್ಮ್ ಉಪಯೋಗಿಸಿರುವುದಕ್ಕೆ ರಾಜಾ ಸಿಂಗ್ ಅವರನ್ನು ನಿಷೇಧಿಸಲಾಗಿದೆ,’’ ಎಂದು ಸದರಿ ಬಾತ್ಮೀದಾರ ತಮ್ಮ ಈಮೇಲ್ ಸ್ಟೇಟ್​ಮೆಂಟ್​ನಲ್ಲಿ ಹೇಳಿದ್ದಾರೆ.

ಸುಮಾರು 30 ಕೋಟಿ ಭಾರತೀಯ ಬಳಕೆದಾರರನ್ನು ಹೊಂದಿರುವ ಫೇಸ್​ಬುಕ್​ಗೆ ಭಾರತವೇ ಅತಿದೊಡ್ಡ ಮಾರ್ಕೆಟ್. ಇತ್ತೀಚಿಗೆ ಅಮೆರಿಕಾದ ವಾಲ್ ಸ್ಟ್ರೀಟ್ ಜರ್ನಲ್​ನಲ್ಲಿ ಪ್ರಕಟವಾದ ವರದಿಯೊಂದು, ಭಾರತದ ಫೇಸ್​ಬುಕ್ ಆಡಳಿತ ಪಕ್ಷದ ಪರವಾಗಿದೆ ಎಂದು ಆರೋಪಿಸಿದ ನಂತರ ಅದರ ಮೇಲೆ ಒತ್ತಡ ಜಾಸ್ತಿಯಾಗಿತ್ತು.

ರಾಜಾ ಸಿಂಗ್ ಅವರ ದ್ವೇಷ ಕಾರುವ ಪೋಸ್ಟ್​ಗಳನ್ನು ಫೇಸ್​ಬುಕ್ ನಿರ್ಲಕ್ಷಿಸಿದೆ ಎಂದು ಸಹ ವರದಿಯಲ್ಲಿ ಅರೋಪಿಸಲಾಗಿತ್ತು. ಈ ವರದಿಯ ನಂತರ, ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ಶುರುವಾಗಿದ್ದು ಮಾಹಿತಿ ತಂತ್ರಜ್ಞಾನದ ಸಂಸತ್ ಸಮಿತಿಯು ಭಾರತದ ಫೇಸ್​ಬುಕ್ ಪ್ರತಿನಿಧಿಗಳೊಂದಿಗೆ ಬುಧವಾರದಂದು ಸಭೆ ನಡೆಸಿ ಅದರ ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿರುವ ಬಗ್ಗೆ ಚರ್ಚಿಸಿತ್ತು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ