ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ. ‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು […]

ಒತ್ತಡಕ್ಕೆ ಮಣಿದು ಬಿಜೆಪಿ ನಾಯಕನನ್ನು ನಿಷೇಧಿಸಿದ ಫೇಸ್​ಬುಕ್
ಅರುಣ್​ ಕುಮಾರ್​ ಬೆಳ್ಳಿ

Updated on: Sep 03, 2020 | 4:08 PM

ಪಕ್ಷಾಪಾತ ಮತ್ತು ದ್ವೇಷದ ಸಂದೇಶಗಳನ್ನು ತನ್ನ ಪ್ಲಾಟ್​ಫಾರ್ಮ್​ನಲ್ಲಿ ನಿಯಂತ್ರಿಸುವಲ್ಲಿ ವಿಫಲವಾಗಿದೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತೀವ್ರ ಒತ್ತಡದಲ್ಲಿರುವ ಭಾರತದ ಫೇಸ್​ಬುಕ್ ಪ್ಲಾಟ್​ಫಾರ್ಮ್, ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ತನ್ನ ಪ್ಲಾಟ್​ಫಾರ್ಮ್ ಮತ್ತು ಇನ್​ಸ್ಟಾಗ್ರಾಮ್​ ಬಳಸದಂತೆ ನಿಷೇಧಿಸಿದೆ. ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ, ಹಿಂಸೆ ಮತ್ತು ದ್ವೇಷವನ್ನು ಪ್ರಚುರಪಡಿಸಲು ಪ್ಲಾಟ್​ಫಾರ್ಮ್ ಬಳಸಿದ ಕಾರಣ ಸಿಂಗ್ ಅವರನ್ನು ಬ್ಯಾನ್ ಮಾಡಲಾಗಿದೆಯೆಂದು ಫೇಸ್​ಬುಕ್​ನ ಒಬ್ಬ ಬಾತ್ಮೀದಾರ ಹೇಳಿದ್ದಾರೆ.

‘‘ಫೇಸ್​ಬುಕ್​ನ ನೀತಿ ನಿಯಮಗಳನ್ನು ಉಲ್ಲಂಘಿಸಿ ಹಿಂಸೆ ಮತ್ತು ದ್ವೇಷವನ್ನು ಪ್ರಚೋದಿಸಲು ನಮ್ಮ ಪ್ಲಾಟ್​ಫಾರ್ಮ್ ಉಪಯೋಗಿಸಿರುವುದಕ್ಕೆ ರಾಜಾ ಸಿಂಗ್ ಅವರನ್ನು ನಿಷೇಧಿಸಲಾಗಿದೆ,’’ ಎಂದು ಸದರಿ ಬಾತ್ಮೀದಾರ ತಮ್ಮ ಈಮೇಲ್ ಸ್ಟೇಟ್​ಮೆಂಟ್​ನಲ್ಲಿ ಹೇಳಿದ್ದಾರೆ.

ಸುಮಾರು 30 ಕೋಟಿ ಭಾರತೀಯ ಬಳಕೆದಾರರನ್ನು ಹೊಂದಿರುವ ಫೇಸ್​ಬುಕ್​ಗೆ ಭಾರತವೇ ಅತಿದೊಡ್ಡ ಮಾರ್ಕೆಟ್. ಇತ್ತೀಚಿಗೆ ಅಮೆರಿಕಾದ ವಾಲ್ ಸ್ಟ್ರೀಟ್ ಜರ್ನಲ್​ನಲ್ಲಿ ಪ್ರಕಟವಾದ ವರದಿಯೊಂದು, ಭಾರತದ ಫೇಸ್​ಬುಕ್ ಆಡಳಿತ ಪಕ್ಷದ ಪರವಾಗಿದೆ ಎಂದು ಆರೋಪಿಸಿದ ನಂತರ ಅದರ ಮೇಲೆ ಒತ್ತಡ ಜಾಸ್ತಿಯಾಗಿತ್ತು.

ರಾಜಾ ಸಿಂಗ್ ಅವರ ದ್ವೇಷ ಕಾರುವ ಪೋಸ್ಟ್​ಗಳನ್ನು ಫೇಸ್​ಬುಕ್ ನಿರ್ಲಕ್ಷಿಸಿದೆ ಎಂದು ಸಹ ವರದಿಯಲ್ಲಿ ಅರೋಪಿಸಲಾಗಿತ್ತು. ಈ ವರದಿಯ ನಂತರ, ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ಶುರುವಾಗಿದ್ದು ಮಾಹಿತಿ ತಂತ್ರಜ್ಞಾನದ ಸಂಸತ್ ಸಮಿತಿಯು ಭಾರತದ ಫೇಸ್​ಬುಕ್ ಪ್ರತಿನಿಧಿಗಳೊಂದಿಗೆ ಬುಧವಾರದಂದು ಸಭೆ ನಡೆಸಿ ಅದರ ಸಾಮಾಜಿಕ ಜಾಲತಾಣ ದುರ್ಬಳಕೆ ಆಗುತ್ತಿರುವ ಬಗ್ಗೆ ಚರ್ಚಿಸಿತ್ತು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us