AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಫೇಸ್​ಬುಕ್​ ಹೇಳಿದೆ.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Dec 22, 2020 | 7:49 PM

Share

ದೆಹಲಿ: ಸಾಮಾಜಿಕ ಜಾಲತಾಣ ದೈತ್ಯ ಫೇಸ್​ಬುಕ್​ನ ಸ್ವಯಂಚಾಲಿತ ವ್ಯವಸ್ಥೆ ಕಿಸಾನ್ ಏಕ್ತಾ ಮೋರ್ಚಾದ ಫೇಸ್​ಬುಕ್ ಪುಟವನ್ನು ಸ್ಪಾಮ್ ಎಂದು ಪರಿಗಣಿಸಿ ಮೂರು ಘಂಟೆ ಸ್ಥಗಿತಗೊಳಿಸಿತ್ತು. ಆದರೆ ತಕ್ಷಣ ಎಚ್ಚೆತ್ತ ಫೇಸ್​ಬುಕ್, ದೆಹಲಿ ಚಲೋ ಚಳವಳಿಯಲ್ಲಿ ಸಕ್ರಿಯವಾಗಿರುವ ಸಂಘಟನೆಯ ಪುಟವನ್ನು ಪುನಃ ಸಕ್ರಿಯಗೊಳಿಸಿದೆ. ಏಕಾಏಕಿ ಸಂಘಟನೆಯ ಪುಟದಲ್ಲಿ ಪೋಸ್ಟ್​ಗಳ ಸಂಖ್ಯೆ ಹೆಚ್ಚಾದ ಕಾರಣ ತನ್ನ ಸ್ವಯಂಚಾಲಿತ ವ್ಯವಸ್ಥೆಯಿಂದ ಸಂಘಟನೆಯ ಪುಟ ಸ್ಥಗಿತಗೊಂಡಿತ್ತು ಎಂದು ಫೇಸ್​ಬುಕ್ ಸ್ಪಷ್ಟನೆ ನೀಡಿದೆ.

ನಮ್ಮ ಚಳವಳಿಯ ಸಂದೇಶ ರವಾನೆಗೆ ಫೇಸ್​ಬುಕ್ ಪುಟವನ್ನು ಬಳಸಿಕೊಳ್ಳುತ್ತಿದ್ದೇವೆ. ಸ್ಥಗಿತವಾಗಿದ್ದರಿಂದ ಸಂದೇಶ ರವಾನೆಗೆ ತೊಂದರೆಯುಂಟಾಯಿತು. ನಮ್ಮ ಚಳವಳಿಯನ್ನು ನಿಲ್ಲಿಸಲೆಂದೇ ಫೇಸ್​ಬುಕ್ ಪುಟವನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಹಲವರು ಭಾವಿಸಿದ್ದರು ಎಂದು ಕಿಸಾನ್ ಏಕ್ತಾ ಮೋರ್ಚಾ ದೂರಿದೆ.

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ. 2020ರ ಮೂರನೇ ತ್ರೈಮಾಸಿಕದಲ್ಲಿ ನಮ್ಮ ನೀತಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ 190 ಕೋಟಿ ಕಂಟೆಂಟ್​ಗಳನ್ನು ಸ್ಪಾಮ್ ಎಂದು ಪರಿಗಣಿಸಿದ್ದೆವು. ನಂತರ ಸ್ಪಾಮ್ ಅಲ್ಲದ 7.49 ಕೋಟಿ ಕಂಟೆಂಟ್​ಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ ಎಂದು ತಿಳಿಸಿದೆ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು