AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಫೇಸ್​ಬುಕ್​ ಹೇಳಿದೆ.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on: Dec 22, 2020 | 7:49 PM

Share

ದೆಹಲಿ: ಸಾಮಾಜಿಕ ಜಾಲತಾಣ ದೈತ್ಯ ಫೇಸ್​ಬುಕ್​ನ ಸ್ವಯಂಚಾಲಿತ ವ್ಯವಸ್ಥೆ ಕಿಸಾನ್ ಏಕ್ತಾ ಮೋರ್ಚಾದ ಫೇಸ್​ಬುಕ್ ಪುಟವನ್ನು ಸ್ಪಾಮ್ ಎಂದು ಪರಿಗಣಿಸಿ ಮೂರು ಘಂಟೆ ಸ್ಥಗಿತಗೊಳಿಸಿತ್ತು. ಆದರೆ ತಕ್ಷಣ ಎಚ್ಚೆತ್ತ ಫೇಸ್​ಬುಕ್, ದೆಹಲಿ ಚಲೋ ಚಳವಳಿಯಲ್ಲಿ ಸಕ್ರಿಯವಾಗಿರುವ ಸಂಘಟನೆಯ ಪುಟವನ್ನು ಪುನಃ ಸಕ್ರಿಯಗೊಳಿಸಿದೆ. ಏಕಾಏಕಿ ಸಂಘಟನೆಯ ಪುಟದಲ್ಲಿ ಪೋಸ್ಟ್​ಗಳ ಸಂಖ್ಯೆ ಹೆಚ್ಚಾದ ಕಾರಣ ತನ್ನ ಸ್ವಯಂಚಾಲಿತ ವ್ಯವಸ್ಥೆಯಿಂದ ಸಂಘಟನೆಯ ಪುಟ ಸ್ಥಗಿತಗೊಂಡಿತ್ತು ಎಂದು ಫೇಸ್​ಬುಕ್ ಸ್ಪಷ್ಟನೆ ನೀಡಿದೆ.

ನಮ್ಮ ಚಳವಳಿಯ ಸಂದೇಶ ರವಾನೆಗೆ ಫೇಸ್​ಬುಕ್ ಪುಟವನ್ನು ಬಳಸಿಕೊಳ್ಳುತ್ತಿದ್ದೇವೆ. ಸ್ಥಗಿತವಾಗಿದ್ದರಿಂದ ಸಂದೇಶ ರವಾನೆಗೆ ತೊಂದರೆಯುಂಟಾಯಿತು. ನಮ್ಮ ಚಳವಳಿಯನ್ನು ನಿಲ್ಲಿಸಲೆಂದೇ ಫೇಸ್​ಬುಕ್ ಪುಟವನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಹಲವರು ಭಾವಿಸಿದ್ದರು ಎಂದು ಕಿಸಾನ್ ಏಕ್ತಾ ಮೋರ್ಚಾ ದೂರಿದೆ.

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ. 2020ರ ಮೂರನೇ ತ್ರೈಮಾಸಿಕದಲ್ಲಿ ನಮ್ಮ ನೀತಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ 190 ಕೋಟಿ ಕಂಟೆಂಟ್​ಗಳನ್ನು ಸ್ಪಾಮ್ ಎಂದು ಪರಿಗಣಿಸಿದ್ದೆವು. ನಂತರ ಸ್ಪಾಮ್ ಅಲ್ಲದ 7.49 ಕೋಟಿ ಕಂಟೆಂಟ್​ಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ ಎಂದು ತಿಳಿಸಿದೆ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು