AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಫೇಸ್​ಬುಕ್​ ಹೇಳಿದೆ.

ರೈತ ಸಂಘಟನೆಯ ಫೇಸ್​ಬುಕ್ ಪೇಜ್ ರದ್ದು : ಸಮಜಾಯಿಷಿ ನೀಡಿದ ಫೇಸ್​ಬುಕ್
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: ರಾಜೇಶ್ ದುಗ್ಗುಮನೆ

Updated on: Dec 22, 2020 | 7:49 PM

ದೆಹಲಿ: ಸಾಮಾಜಿಕ ಜಾಲತಾಣ ದೈತ್ಯ ಫೇಸ್​ಬುಕ್​ನ ಸ್ವಯಂಚಾಲಿತ ವ್ಯವಸ್ಥೆ ಕಿಸಾನ್ ಏಕ್ತಾ ಮೋರ್ಚಾದ ಫೇಸ್​ಬುಕ್ ಪುಟವನ್ನು ಸ್ಪಾಮ್ ಎಂದು ಪರಿಗಣಿಸಿ ಮೂರು ಘಂಟೆ ಸ್ಥಗಿತಗೊಳಿಸಿತ್ತು. ಆದರೆ ತಕ್ಷಣ ಎಚ್ಚೆತ್ತ ಫೇಸ್​ಬುಕ್, ದೆಹಲಿ ಚಲೋ ಚಳವಳಿಯಲ್ಲಿ ಸಕ್ರಿಯವಾಗಿರುವ ಸಂಘಟನೆಯ ಪುಟವನ್ನು ಪುನಃ ಸಕ್ರಿಯಗೊಳಿಸಿದೆ. ಏಕಾಏಕಿ ಸಂಘಟನೆಯ ಪುಟದಲ್ಲಿ ಪೋಸ್ಟ್​ಗಳ ಸಂಖ್ಯೆ ಹೆಚ್ಚಾದ ಕಾರಣ ತನ್ನ ಸ್ವಯಂಚಾಲಿತ ವ್ಯವಸ್ಥೆಯಿಂದ ಸಂಘಟನೆಯ ಪುಟ ಸ್ಥಗಿತಗೊಂಡಿತ್ತು ಎಂದು ಫೇಸ್​ಬುಕ್ ಸ್ಪಷ್ಟನೆ ನೀಡಿದೆ.

ನಮ್ಮ ಚಳವಳಿಯ ಸಂದೇಶ ರವಾನೆಗೆ ಫೇಸ್​ಬುಕ್ ಪುಟವನ್ನು ಬಳಸಿಕೊಳ್ಳುತ್ತಿದ್ದೇವೆ. ಸ್ಥಗಿತವಾಗಿದ್ದರಿಂದ ಸಂದೇಶ ರವಾನೆಗೆ ತೊಂದರೆಯುಂಟಾಯಿತು. ನಮ್ಮ ಚಳವಳಿಯನ್ನು ನಿಲ್ಲಿಸಲೆಂದೇ ಫೇಸ್​ಬುಕ್ ಪುಟವನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಹಲವರು ಭಾವಿಸಿದ್ದರು ಎಂದು ಕಿಸಾನ್ ಏಕ್ತಾ ಮೋರ್ಚಾ ದೂರಿದೆ.

ಫೇಸ್​ಬುಕ್​ನ ಈ ಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗುರಿಯಾಗಿತ್ತು. ಸ್ಪಷ್ಟನೆ ನೀಡಿದ್ದ ಫೇಸ್​ಬುಕ್, ಸ್ಪಾಮ್ ಕಂಟೆಂಟ್​ಗಳ ವಿರುದ್ಧ ಹೋರಾಡಲು ಸ್ವಯಂ ಚಾಲಿತ ವ್ಯವಸ್ಥೆ ಜಾರಿಗೊಳಿಸಲಾಗಿದೆ. 2020ರ ಮೂರನೇ ತ್ರೈಮಾಸಿಕದಲ್ಲಿ ನಮ್ಮ ನೀತಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ 190 ಕೋಟಿ ಕಂಟೆಂಟ್​ಗಳನ್ನು ಸ್ಪಾಮ್ ಎಂದು ಪರಿಗಣಿಸಿದ್ದೆವು. ನಂತರ ಸ್ಪಾಮ್ ಅಲ್ಲದ 7.49 ಕೋಟಿ ಕಂಟೆಂಟ್​ಗಳನ್ನು ಮತ್ತೆ ಸಕ್ರಿಯಗೊಳಿಸಿದ್ದೇವೆ ಎಂದು ತಿಳಿಸಿದೆ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ