AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೇಪ್​ ಕೇಸ್​; ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಗೆ ಫೇಸ್​​ಬುಕ್​ನಿಂದ ನೋಟಿಸ್​​

Facebook: ಆಗಸ್ಟ್​ 1ರಂದು ದೆಹಲಿಯ 9 ವರ್ಷದ ಬಾಲಕಿ ಮೇಲೆ ಚಿತಾಗಾರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ದಕ್ಷಿಣ ದೆಹಲಿಯಲ್ಲಿ ನಡೆದ ಈ ರೇಪ್​ ಕೇಸ್​ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ದೆಹಲಿ ರೇಪ್​ ಕೇಸ್​; ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಗೆ ಫೇಸ್​​ಬುಕ್​ನಿಂದ ನೋಟಿಸ್​​
ರಾಹುಲ್ ಗಾಂಧಿ
TV9 Web
| Edited By: |

Updated on:Aug 18, 2021 | 9:54 AM

Share

ದೆಹಲಿಯ ಚಿತಾಗಾರವೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋವನ್ನು ಇನ್​​ಸ್ಟಾಗ್ರಾಂನಲ್ಲಿ ಹಾಕಿರುವ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರಿಗೆ ಫೇಸ್​​ಬುಕ್​ ನೋಟಿಸ್​ ನೀಡಿದೆ. ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿ ಅವರಿಗೆ ಸಮಾಧಾನ ಹೇಳಿದ್ದ ರಾಹುಲ್​ ಗಾಂಧಿ, ನಂತರ ಫೋಟೋವನ್ನು ಟ್ವಿಟರ್​, ಇನ್​ಸ್ಟಾಗ್ರಾಂನಲ್ಲಿ ಹಾಕಿಕೊಂಡಿದ್ದರು. ಆದರೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಟ್ವಿಟರ್​ ರಾಹುಲ್​ ಗಾಂಧಿಯವರ ಅಕೌಂಟ್​​ನ್ನೇ ಲಾಕ್​ ಮಾಡಿತ್ತು. ರಾಹುಲ್​ ಗಾಂಧಿ ಟ್ವಿಟರ್​ ಪೋಸ್ಟ್​ ರಿಮೂವ್​ ಆಗಿದ್ದಕ್ಕೆ ಕಾಂಗ್ರೆಸ್​ ಕಿಡಿಕಾರುತ್ತಿದೆ. ಈ ಮಧ್ಯೆ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಪೋಸ್ಟ್​ ಕೂಡ ತೆಗೆದುಹಾಕುವಂತೆ ಫೇಸ್​ಬುಕ್​ ನೋಟಿಸ್​ ನೀಡಿದೆ.

ಆಗಸ್ಟ್​ 1ರಂದು ದೆಹಲಿಯ 9 ವರ್ಷದ ಬಾಲಕಿ ಮೇಲೆ ಚಿತಾಗಾರದಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ದಕ್ಷಿಣ ದೆಹಲಿಯಲ್ಲಿ ನಡೆದ ಈ ರೇಪ್​ ಕೇಸ್​ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅದಾದ ಎರಡು-ಮೂರು ದಿನಗಳಲ್ಲಿ ರಾಹುಲ್​ ಗಾಂಧಿ, ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದರು. ನ್ಯಾಯದ ಹೋರಾಟದ ಹಾದಿಯಲ್ಲಿ ನಾನು ಸದಾ ನಿಮ್ಮ ಜತೆಗಿರುತ್ತೇನೆ ಎಂದು ಭರವಸೆ ನೀಡಿದ್ದರು. ಅದಾದ ಬಳಿಕ ಸೋಷಿಯಲ್​ ಮೀಡಿಯಾಗಳಲ್ಲಿ ಫೋಟೊ ಶೇರ್ ಮಾಡಿಕೊಂಡಿದ್ದರು.

ಫೇಸ್​ಬುಕ್​ನಿಂದ ನೋಟಿಸ್​ ಇದೀಗ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಫೋಟೋ ತೆಗೆಯವಂತೆ ರಾಹುಲ್​ ಗಾಂಧಿಗೆ ನೋಟಿಸ್​ ನೀಡಿರುವ ಫೇಸ್​ಬುಕ್​, ಬಾಲನ್ಯಾಯ ಕಾಯ್ದೆ 2015ರ 74ನೇ ಸೆಕ್ಷನ್​ ಮತ್ತು ಪೊಸ್ಕೊ ಕಾಯ್ದೆ 2012ರ ಸೆಕ್ಷನ್​ 23 ಮತ್ತು, ಭಾರತೀಯ ದಂಡ ಸಂಹಿತೆಯ 288ನೇ ಸೆಕ್ಷನ್​​ನಡಿ, ನೀವು ಇನ್​ಸ್ಟಾಗ್ರಾಂನಲ್ಲಿ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋವನ್ನು ಹಾಕಿ, ಅವರ ಗುರುತು ಬಹಿರಂಗಪಡಿಸಿದ್ದು ಕಾನೂನು ಬಾಹಿರವಾಗಿದೆ. ಮಕ್ಕಳ ಹಕ್ಕು ರಕ್ಷಣಾ ರಾಷ್ಟ್ರೀಯ ಆಯೋಗ (NCPCR)ದ ಸೂಚನೆ ಅನ್ವಯ ನೀವು ಆ ಪೋಸ್ಟ್​​ನ್ನು ಕೂಡಲೇ ತೆಗೆದುಹಾಕಬೇಕು ಎಂದು ನೋಟಿಸ್​​ನಲ್ಲಿ ಉಲ್ಲೇಖಿಸಿದೆ.

ಇನ್​ಸ್ಟಾಗ್ರಾಂ ಕೂಡ ಫೇಸ್​ಬುಕ್​ ಮಾಲೀಕತ್ವದಲ್ಲೇ ಇದೆ. ಹಾಗಾಗಿ ಈಗ ಫೇಸ್​​ಬುಕ್​ನಿಂದಲೇ ಸೂಚನೆ ನೀಡಲಾಗಿದೆ. ರಾಹುಲ್​ ಗಾಂಧಿ ಸಂತ್ರಸ್ತೆಯ ಪಾಲಕರ ಫೋಟೋ ಬಹಿರಂಗ ಪಡಿಸಿದ್ದರ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ರಾಷ್ಟ್ರೀಯ ಆಯೋಗ ತಿರುಗಿಬಿದ್ದಿದೆ. ಇದು ಟ್ವಿಟರ್ ಹಾಗೂ ಫೇಸ್​ಬುಕ್​ ಎರಡೂ ಸಾಮಾಜಿಕ ಜಾಲತಾಣಗಳಿಗೆ ನೋಟಿಸ್​ ನೀಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಇದನ್ನೂ ಓದಿ: Alia Bhatt: ಚಿತ್ರೀಕರಣದ ಸೆಟ್​ಗೆ ರಿಕ್ಷಾದಲ್ಲಿ ಬಂದ ಆಲಿಯಾ; ಅದೇನು ದೊಡ್ಡ ವಿಷಯ ಅಲ್ಲ ಎಂದು ಕುಟುಕಿದ ನೆಟ್ಟಿಗರು

ಉಪನ್ಯಾಸಕ ಹುದ್ದೆ ತೊರೆದ ವ್ಯಕ್ತಿಗೆ ಕೃಷಿಯೇ ಪ್ರಯೋಗ ಶಾಲೆ; ನೀರಿನ ಮಿತ ಬಳಕೆ ಹಾಗೂ ಸಹಜ ಕೃಷಿಯೇ ಮೂಲ ಮಂತ್ರ

(Facebook sends notice to Rahul Gandhi over revealing identity victim’s family)

Published On - 9:45 am, Wed, 18 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ